Homeಮುಖಪುಟಅತ್ಯಂತ 'ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) ‘ಅತ್ಯಂತ ಅಪಾಯಕಾರಿ’ (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 498ಕ್ಕೆ ತಲುಪಿದೆ.

ನಗರದ 40 ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳ ಪೈಕಿ 38 ‘ಗಂಭೀರ’ ವಾಯು ಗುಣಮಟ್ಟವನ್ನು ವರದಿ ಮಾಡಿದರೆ, ಎರಡು ಕೇಂದ್ರಗಳು ‘ಅತ್ಯಂತ ಕಳಪೆ’ ಮಟ್ಟವನ್ನು ದಾಖಲಿಸಿವೆ. ಜಹಾಂಗೀರ್‌ಪುರಿ ನಗರದ ಅತ್ಯಂತ ಕಲುಷಿತ ಪ್ರದೇಶ ಎಂದು ದಾಖಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 401 ರಿಂದ 500ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಗಂಭೀರ’ ಎಂದು ವರ್ಗೀಕರಿಸಲಾಗಿದ್ದು, ಇದು ದೊಡ್ಡ ಮಟ್ಟದಲ್ಲಿ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ.

ಭಾನುವಾರ ನಗರದ ಎಕ್ಯೂಐ 461ಕ್ಕೆ ಏರಿತ್ತು, ಇಂದು (ಸೋಮವಾರ) ಅದನ್ನೂ ಮೀರಿ 500 ಗಡಿ ತಲುಪಿದೆ. ಇದು ಈವರೆಗಿನ ಅತ್ಯಂತ ಕಲುಷಿತ ವಾಯುಗುಣಮಟ್ಟ ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಉಲ್ಬಣಗೊಂಡಿದೆ.

ಕಡಿಮೆ ಮಟ್ಟದ ಗಾಳಿಯ ವೇಗ ಮತ್ತು ಕಡಿಮೆ ತಾಪಮಾನದಿಂದಾಗಿ ಮಾಲಿನ್ಯಕಾರಕಗಳು ಚದುರದೆ ಭೂಮಿಗೆ ಹತ್ತಿರವೇ ಬಂಧಿತವಾಗಿವೆ. ಇದರಿಂದಾಗಿ ದಟ್ಟವಾದ ಮಂಜು ಮತ್ತು ಧೂಳಿನ ಪದರ ನಗರವನ್ನು ಆವರಿಸಿದೆ. ವಜೀರ್‌ಪುರ್ ಮೇಲ್ವಿಚಾರಣಾ ಕೇಂದ್ರವು ದಿನದಲ್ಲಿ ಗರಿಷ್ಠ ಸಾಧ್ಯವಾದ ಎಕ್ಯೂಐ ಮಟ್ಟ 500 ದಾಖಲಿಸಿದೆ. ಇದರ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದತ್ತಾಂಶವನ್ನು ದಾಖಲು ಮಾಡುವುದಿಲ್ಲ. ಇದು ಅತ್ಯಂತ ಅಪಾಯಕಾರಿ ಸ್ಥಿತಿಯನ್ನು ಸೂಚಿಸುತ್ತದೆ. ಮಾಲಿನ್ಯಕಾರಕಗಳು ತೀವ್ರವಾಗಿ ಕೇಂದ್ರೀಕೃತವಾಗಿರುವುದನ್ನು ತೋರಿಸುತ್ತದೆ.

ನಗರದ ಒಟ್ಟು ಎಕ್ಯೂಐ ಸುಮಾರು 493-498 ತಲುಪಿ ‘ತೀವ್ರ ಗಂಭೀರ’ ಮಟ್ಟದಲ್ಲಿದೆ. ರೋಹಿಣಿ, ಆಶೋಕ್ ವಿಹಾರ್, ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಕೂಡ ವಾಯುಗುಣಮಟ್ಟ 500ಕ್ಕೆ ಹತ್ತಿರ ತಲುಪಿದೆ.

ವಾಯು ಗುಣಮಟ್ಟದ ಪೂರ್ವ ಎಚ್ಚರಿಕೆ ವ್ಯವಸ್ಥೆ (ಎಕ್ಯೂಇಡಬ್ಲ್ಯುಎಸ್‌) ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟವು ಸದ್ಯಕ್ಕೆ ‘ಗಂಭೀರ ಮಟ್ಟದಲ್ಲೇ’ ಉಳಿಯುವ ಸಾಧ್ಯತೆ ಇದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆಯಾಗಿರಲಿದೆ.

ಹವಾಮಾನ ವೈಪರೀತ್ಯದಿಂದಾಗಿ, ಸೋಮವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣವು ವಿಮಾನ ಕಾರ್ಯಾಚರಣೆಗಳಲ್ಲಿ ಸಂಭವನೀಯ ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಿದೆ.

ದಟ್ಟವಾದ ಮಂಜು ಮತ್ತು ಧೂಳಿನಿಂದ ಕೂಡಿದ ಹೊಗೆ ನಗರವನ್ನು ಆವರಿಸಿದ್ದು, ಅನೇಕ ಕಡೆಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇಂಡಿಯಾ ಗೇಟ್, ಕರ್ತವ್ಯ ಪಥ, ಅಕ್ಷರಧಾಮ, ಬರಾಪುಲ್ಲಾ ಫ್ಲೈಓವರ್ ಸಂಪೂರ್ಣ ಮರೆಯಾಗಿವೆ. ಇದರಿಂದ ರಸ್ತೆ ಸಂಚಾರ ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವಿಮಾನ ಸ್ಥಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಜಿಆರ್‌ಎಪಿ ಹಂತ 4 ಜಾರಿಗೊಳಿಸಲಾಗಿದೆ. ಇದರಡಿ ಹೆಚ್ಚಿನ ನಿರ್ಮಾಣ/ಧ್ವಂಸ ಕಾರ್ಯಗಳನ್ನು ನಿಷೇಧಿಸಲಾಗಿದೆ. ಅಗತ್ಯವಲ್ಲದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳು 11ರವರೆಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ಕಲುಷಿತ ಗಾಳಿ ಹಿನ್ನೆಲೆ ಮಕ್ಕಳು ಮತ್ತು ಹಿರಿಯರು, ಉಸಿರಾಟ ಸಮಸ್ಯೆಗಳುಳ್ಳವರು ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯೊಳಗೆ ಇರುವಂತೆ ಮತ್ತು ಮಾಸ್ಕ್/ಏರ್ ಪ್ಯೂರಿಫೈಯರ್ ಬಳಸುವಂತೆ ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...