Homeಮುಖಪುಟಅತ್ಯಂತ 'ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) ‘ಅತ್ಯಂತ ಅಪಾಯಕಾರಿ’ (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 498ಕ್ಕೆ ತಲುಪಿದೆ.

ನಗರದ 40 ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳ ಪೈಕಿ 38 ‘ಗಂಭೀರ’ ವಾಯು ಗುಣಮಟ್ಟವನ್ನು ವರದಿ ಮಾಡಿದರೆ, ಎರಡು ಕೇಂದ್ರಗಳು ‘ಅತ್ಯಂತ ಕಳಪೆ’ ಮಟ್ಟವನ್ನು ದಾಖಲಿಸಿವೆ. ಜಹಾಂಗೀರ್‌ಪುರಿ ನಗರದ ಅತ್ಯಂತ ಕಲುಷಿತ ಪ್ರದೇಶ ಎಂದು ದಾಖಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 401 ರಿಂದ 500ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಗಂಭೀರ’ ಎಂದು ವರ್ಗೀಕರಿಸಲಾಗಿದ್ದು, ಇದು ದೊಡ್ಡ ಮಟ್ಟದಲ್ಲಿ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ.

ಭಾನುವಾರ ನಗರದ ಎಕ್ಯೂಐ 461ಕ್ಕೆ ಏರಿತ್ತು, ಇಂದು (ಸೋಮವಾರ) ಅದನ್ನೂ ಮೀರಿ 500 ಗಡಿ ತಲುಪಿದೆ. ಇದು ಈವರೆಗಿನ ಅತ್ಯಂತ ಕಲುಷಿತ ವಾಯುಗುಣಮಟ್ಟ ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಉಲ್ಬಣಗೊಂಡಿದೆ.

ಕಡಿಮೆ ಮಟ್ಟದ ಗಾಳಿಯ ವೇಗ ಮತ್ತು ಕಡಿಮೆ ತಾಪಮಾನದಿಂದಾಗಿ ಮಾಲಿನ್ಯಕಾರಕಗಳು ಚದುರದೆ ಭೂಮಿಗೆ ಹತ್ತಿರವೇ ಬಂಧಿತವಾಗಿವೆ. ಇದರಿಂದಾಗಿ ದಟ್ಟವಾದ ಮಂಜು ಮತ್ತು ಧೂಳಿನ ಪದರ ನಗರವನ್ನು ಆವರಿಸಿದೆ. ವಜೀರ್‌ಪುರ್ ಮೇಲ್ವಿಚಾರಣಾ ಕೇಂದ್ರವು ದಿನದಲ್ಲಿ ಗರಿಷ್ಠ ಸಾಧ್ಯವಾದ ಎಕ್ಯೂಐ ಮಟ್ಟ 500 ದಾಖಲಿಸಿದೆ. ಇದರ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದತ್ತಾಂಶವನ್ನು ದಾಖಲು ಮಾಡುವುದಿಲ್ಲ. ಇದು ಅತ್ಯಂತ ಅಪಾಯಕಾರಿ ಸ್ಥಿತಿಯನ್ನು ಸೂಚಿಸುತ್ತದೆ. ಮಾಲಿನ್ಯಕಾರಕಗಳು ತೀವ್ರವಾಗಿ ಕೇಂದ್ರೀಕೃತವಾಗಿರುವುದನ್ನು ತೋರಿಸುತ್ತದೆ.

ನಗರದ ಒಟ್ಟು ಎಕ್ಯೂಐ ಸುಮಾರು 493-498 ತಲುಪಿ ‘ತೀವ್ರ ಗಂಭೀರ’ ಮಟ್ಟದಲ್ಲಿದೆ. ರೋಹಿಣಿ, ಆಶೋಕ್ ವಿಹಾರ್, ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಕೂಡ ವಾಯುಗುಣಮಟ್ಟ 500ಕ್ಕೆ ಹತ್ತಿರ ತಲುಪಿದೆ.

ವಾಯು ಗುಣಮಟ್ಟದ ಪೂರ್ವ ಎಚ್ಚರಿಕೆ ವ್ಯವಸ್ಥೆ (ಎಕ್ಯೂಇಡಬ್ಲ್ಯುಎಸ್‌) ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟವು ಸದ್ಯಕ್ಕೆ ‘ಗಂಭೀರ ಮಟ್ಟದಲ್ಲೇ’ ಉಳಿಯುವ ಸಾಧ್ಯತೆ ಇದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆಯಾಗಿರಲಿದೆ.

ಹವಾಮಾನ ವೈಪರೀತ್ಯದಿಂದಾಗಿ, ಸೋಮವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣವು ವಿಮಾನ ಕಾರ್ಯಾಚರಣೆಗಳಲ್ಲಿ ಸಂಭವನೀಯ ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಿದೆ.

ದಟ್ಟವಾದ ಮಂಜು ಮತ್ತು ಧೂಳಿನಿಂದ ಕೂಡಿದ ಹೊಗೆ ನಗರವನ್ನು ಆವರಿಸಿದ್ದು, ಅನೇಕ ಕಡೆಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇಂಡಿಯಾ ಗೇಟ್, ಕರ್ತವ್ಯ ಪಥ, ಅಕ್ಷರಧಾಮ, ಬರಾಪುಲ್ಲಾ ಫ್ಲೈಓವರ್ ಸಂಪೂರ್ಣ ಮರೆಯಾಗಿವೆ. ಇದರಿಂದ ರಸ್ತೆ ಸಂಚಾರ ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವಿಮಾನ ಸ್ಥಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಜಿಆರ್‌ಎಪಿ ಹಂತ 4 ಜಾರಿಗೊಳಿಸಲಾಗಿದೆ. ಇದರಡಿ ಹೆಚ್ಚಿನ ನಿರ್ಮಾಣ/ಧ್ವಂಸ ಕಾರ್ಯಗಳನ್ನು ನಿಷೇಧಿಸಲಾಗಿದೆ. ಅಗತ್ಯವಲ್ಲದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳು 11ರವರೆಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ಕಲುಷಿತ ಗಾಳಿ ಹಿನ್ನೆಲೆ ಮಕ್ಕಳು ಮತ್ತು ಹಿರಿಯರು, ಉಸಿರಾಟ ಸಮಸ್ಯೆಗಳುಳ್ಳವರು ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯೊಳಗೆ ಇರುವಂತೆ ಮತ್ತು ಮಾಸ್ಕ್/ಏರ್ ಪ್ಯೂರಿಫೈಯರ್ ಬಳಸುವಂತೆ ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...