Homeಮುಖಪುಟಅತ್ಯಂತ 'ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) ‘ಅತ್ಯಂತ ಅಪಾಯಕಾರಿ’ (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 498ಕ್ಕೆ ತಲುಪಿದೆ.

ನಗರದ 40 ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರಗಳ ಪೈಕಿ 38 ‘ಗಂಭೀರ’ ವಾಯು ಗುಣಮಟ್ಟವನ್ನು ವರದಿ ಮಾಡಿದರೆ, ಎರಡು ಕೇಂದ್ರಗಳು ‘ಅತ್ಯಂತ ಕಳಪೆ’ ಮಟ್ಟವನ್ನು ದಾಖಲಿಸಿವೆ. ಜಹಾಂಗೀರ್‌ಪುರಿ ನಗರದ ಅತ್ಯಂತ ಕಲುಷಿತ ಪ್ರದೇಶ ಎಂದು ದಾಖಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, 401 ರಿಂದ 500ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಗಂಭೀರ’ ಎಂದು ವರ್ಗೀಕರಿಸಲಾಗಿದ್ದು, ಇದು ದೊಡ್ಡ ಮಟ್ಟದಲ್ಲಿ ಆರೋಗ್ಯ ಅಪಾಯಗಳನ್ನುಂಟು ಮಾಡುತ್ತದೆ.

ಭಾನುವಾರ ನಗರದ ಎಕ್ಯೂಐ 461ಕ್ಕೆ ಏರಿತ್ತು, ಇಂದು (ಸೋಮವಾರ) ಅದನ್ನೂ ಮೀರಿ 500 ಗಡಿ ತಲುಪಿದೆ. ಇದು ಈವರೆಗಿನ ಅತ್ಯಂತ ಕಲುಷಿತ ವಾಯುಗುಣಮಟ್ಟ ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಉಲ್ಬಣಗೊಂಡಿದೆ.

ಕಡಿಮೆ ಮಟ್ಟದ ಗಾಳಿಯ ವೇಗ ಮತ್ತು ಕಡಿಮೆ ತಾಪಮಾನದಿಂದಾಗಿ ಮಾಲಿನ್ಯಕಾರಕಗಳು ಚದುರದೆ ಭೂಮಿಗೆ ಹತ್ತಿರವೇ ಬಂಧಿತವಾಗಿವೆ. ಇದರಿಂದಾಗಿ ದಟ್ಟವಾದ ಮಂಜು ಮತ್ತು ಧೂಳಿನ ಪದರ ನಗರವನ್ನು ಆವರಿಸಿದೆ. ವಜೀರ್‌ಪುರ್ ಮೇಲ್ವಿಚಾರಣಾ ಕೇಂದ್ರವು ದಿನದಲ್ಲಿ ಗರಿಷ್ಠ ಸಾಧ್ಯವಾದ ಎಕ್ಯೂಐ ಮಟ್ಟ 500 ದಾಖಲಿಸಿದೆ. ಇದರ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದತ್ತಾಂಶವನ್ನು ದಾಖಲು ಮಾಡುವುದಿಲ್ಲ. ಇದು ಅತ್ಯಂತ ಅಪಾಯಕಾರಿ ಸ್ಥಿತಿಯನ್ನು ಸೂಚಿಸುತ್ತದೆ. ಮಾಲಿನ್ಯಕಾರಕಗಳು ತೀವ್ರವಾಗಿ ಕೇಂದ್ರೀಕೃತವಾಗಿರುವುದನ್ನು ತೋರಿಸುತ್ತದೆ.

ನಗರದ ಒಟ್ಟು ಎಕ್ಯೂಐ ಸುಮಾರು 493-498 ತಲುಪಿ ‘ತೀವ್ರ ಗಂಭೀರ’ ಮಟ್ಟದಲ್ಲಿದೆ. ರೋಹಿಣಿ, ಆಶೋಕ್ ವಿಹಾರ್, ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಕೂಡ ವಾಯುಗುಣಮಟ್ಟ 500ಕ್ಕೆ ಹತ್ತಿರ ತಲುಪಿದೆ.

ವಾಯು ಗುಣಮಟ್ಟದ ಪೂರ್ವ ಎಚ್ಚರಿಕೆ ವ್ಯವಸ್ಥೆ (ಎಕ್ಯೂಇಡಬ್ಲ್ಯುಎಸ್‌) ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟವು ಸದ್ಯಕ್ಕೆ ‘ಗಂಭೀರ ಮಟ್ಟದಲ್ಲೇ’ ಉಳಿಯುವ ಸಾಧ್ಯತೆ ಇದೆ. ಮುಂದಿನ ಆರು ದಿನಗಳಲ್ಲಿ ಪರಿಸ್ಥಿತಿ ತುಂಬಾ ಕಳಪೆಯಾಗಿರಲಿದೆ.

ಹವಾಮಾನ ವೈಪರೀತ್ಯದಿಂದಾಗಿ, ಸೋಮವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣವು ವಿಮಾನ ಕಾರ್ಯಾಚರಣೆಗಳಲ್ಲಿ ಸಂಭವನೀಯ ವಿಳಂಬದ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಿದೆ.

ದಟ್ಟವಾದ ಮಂಜು ಮತ್ತು ಧೂಳಿನಿಂದ ಕೂಡಿದ ಹೊಗೆ ನಗರವನ್ನು ಆವರಿಸಿದ್ದು, ಅನೇಕ ಕಡೆಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇಂಡಿಯಾ ಗೇಟ್, ಕರ್ತವ್ಯ ಪಥ, ಅಕ್ಷರಧಾಮ, ಬರಾಪುಲ್ಲಾ ಫ್ಲೈಓವರ್ ಸಂಪೂರ್ಣ ಮರೆಯಾಗಿವೆ. ಇದರಿಂದ ರಸ್ತೆ ಸಂಚಾರ ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇಂಡಿಗೋ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ವಿಮಾನ ಸ್ಥಿತಿ ಪರಿಶೀಲಿಸುವಂತೆ ಸಲಹೆ ನೀಡಿವೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಜಿಆರ್‌ಎಪಿ ಹಂತ 4 ಜಾರಿಗೊಳಿಸಲಾಗಿದೆ. ಇದರಡಿ ಹೆಚ್ಚಿನ ನಿರ್ಮಾಣ/ಧ್ವಂಸ ಕಾರ್ಯಗಳನ್ನು ನಿಷೇಧಿಸಲಾಗಿದೆ. ಅಗತ್ಯವಲ್ಲದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳು 11ರವರೆಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ.

ಕಲುಷಿತ ಗಾಳಿ ಹಿನ್ನೆಲೆ ಮಕ್ಕಳು ಮತ್ತು ಹಿರಿಯರು, ಉಸಿರಾಟ ಸಮಸ್ಯೆಗಳುಳ್ಳವರು ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯೊಳಗೆ ಇರುವಂತೆ ಮತ್ತು ಮಾಸ್ಕ್/ಏರ್ ಪ್ಯೂರಿಫೈಯರ್ ಬಳಸುವಂತೆ ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...