Homeಕರ್ನಾಟಕಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೋರಂಜನ್ ತಂದೆ ಮತ್ತು ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮೈಸೂರಿನ ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಗೆ ದೆಹಲಿ ಪೊಲೀಸರ ತಂಡ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಪೊಲೀಸರ ತಂಡದಲ್ಲಿ ಮಹಿಳಾ ಪೊಲೀಸರು ಕೂಡ ಇದ್ದರು. ಮನೋರಂಜನ್ ಕೊಠಡಿಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ವಸ್ತುಗಳನ್ನು ಪರಿಶೀಲಿಸಿದ್ದಾರೆ.

ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಲ್ಲದೆ ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದಲ್ಲದೆ ಮನೋರಂಜನ್ ಹಾಗೂ ಸಾಗರ್ ಶರ್ಮಾರ ಚಲನವಲನಗಳ ಬಗ್ಗೆ ತನಿಖೆ ನಡೆಯುತ್ತಿದೆ. ಲಕ್ನೋ ಮೂಲದ  ಸಾಗರ್ ಶರ್ಮಾ ಮೈಸೂರಿನಲ್ಲಿ ಎಲ್ಲಿ ವಾಸವಾಗಿದ್ದ? ಯಾಕೆ ಆತ ಮೈಸೂರಿಗೆ ಬಂದಿದ್ದ ಎಂಬ ಕುರಿತು ತನಿಖೆ ನಡೆಯುತ್ತಿದೆ.

 

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು. ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು  ಬಯಲಾಗಿದೆ. ಈ ಕುರಿತು ಸಂಸದ ಪ್ರತಾಪ್‌ ಸಿಂಹ ಹೇಳಿಕೆಯನ್ನು ಕೂಡ ತನಿಖಾಧಿಕಾರಿಗಳು ದಾಖಲಿಸಿಕೊಳ್ಳಲಿದ್ದಾರೆ.

ಸಂಸತ್ತಿನಲ್ಲಿ ಭದ್ರತಾಲೋಪ ಪ್ರಕರಣದ ಕುರಿತು ಗೃಹ ಸಚಿವರಾದ ಅಮಿತ್‌ ಶಾ ಅವರು ಹೇಳಿಕೆಯನ್ನು ನೀಡಬೇಕೆಂದು ಒತ್ತಾಯಿಸಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಿನ್ನೆ ಸಂಸದರು ಪಟ್ಟು ಹಿಡಿದಿದ್ದರು. ಈ ವೇಳೆ ಉಭಯ ಸದನಗಳ 92ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ; ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...