Homeಕರ್ನಾಟಕಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೋರಂಜನ್ ತಂದೆ ಮತ್ತು ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮೈಸೂರಿನ ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಗೆ ದೆಹಲಿ ಪೊಲೀಸರ ತಂಡ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಪೊಲೀಸರ ತಂಡದಲ್ಲಿ ಮಹಿಳಾ ಪೊಲೀಸರು ಕೂಡ ಇದ್ದರು. ಮನೋರಂಜನ್ ಕೊಠಡಿಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ವಸ್ತುಗಳನ್ನು ಪರಿಶೀಲಿಸಿದ್ದಾರೆ.

ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಲ್ಲದೆ ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದಲ್ಲದೆ ಮನೋರಂಜನ್ ಹಾಗೂ ಸಾಗರ್ ಶರ್ಮಾರ ಚಲನವಲನಗಳ ಬಗ್ಗೆ ತನಿಖೆ ನಡೆಯುತ್ತಿದೆ. ಲಕ್ನೋ ಮೂಲದ  ಸಾಗರ್ ಶರ್ಮಾ ಮೈಸೂರಿನಲ್ಲಿ ಎಲ್ಲಿ ವಾಸವಾಗಿದ್ದ? ಯಾಕೆ ಆತ ಮೈಸೂರಿಗೆ ಬಂದಿದ್ದ ಎಂಬ ಕುರಿತು ತನಿಖೆ ನಡೆಯುತ್ತಿದೆ.

 

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು. ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು  ಬಯಲಾಗಿದೆ. ಈ ಕುರಿತು ಸಂಸದ ಪ್ರತಾಪ್‌ ಸಿಂಹ ಹೇಳಿಕೆಯನ್ನು ಕೂಡ ತನಿಖಾಧಿಕಾರಿಗಳು ದಾಖಲಿಸಿಕೊಳ್ಳಲಿದ್ದಾರೆ.

ಸಂಸತ್ತಿನಲ್ಲಿ ಭದ್ರತಾಲೋಪ ಪ್ರಕರಣದ ಕುರಿತು ಗೃಹ ಸಚಿವರಾದ ಅಮಿತ್‌ ಶಾ ಅವರು ಹೇಳಿಕೆಯನ್ನು ನೀಡಬೇಕೆಂದು ಒತ್ತಾಯಿಸಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಿನ್ನೆ ಸಂಸದರು ಪಟ್ಟು ಹಿಡಿದಿದ್ದರು. ಈ ವೇಳೆ ಉಭಯ ಸದನಗಳ 92ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ; ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...