Homeಮುಖಪುಟಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

ಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

- Advertisement -
- Advertisement -

ಮುಂದಿನ 30 ವರ್ಷಗಳ ಕಾಲ ನಡೆಸುವ ಯಾವುದೇ ಕ್ಷೇತ್ರ ಪುನರ್ವಿಂಗಡಣೆಯನ್ನು 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ನಡೆಸಬೇಕು ಎಂದು ತಮಿಳುನಾಡು ಸರ್ಕಾರವು ಬಯಸುತ್ತಿದೆ. ಆದರೆ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾದ ಆಂಧ್ರಪ್ರದೇಶದ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ)ವು ಇದಕ್ಕೆ ವ್ಯತಿರಿಕ್ತವಾಗಿದ್ದು, ತಮಿಳುನಾಡು ಸರ್ಕಾರದ ವಾದದಂತೆ ಮಾಡಿದರೆ ತನ್ನ ರಾಜ್ಯವನ್ನು ಅನಾನುಕೂಲಕ್ಕೆ ಸಿಲುಕಿಸುತ್ತದೆ ಎಂದು ವಾದಿಸುತ್ತಿದೆ. ಕ್ಷೇತ್ರ ಪುನರ್ವಿಂಗಡನೆಗೆ

ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ, 1971 ರ ಜನಗಣತಿಯ ಆಧಾರವಾಗಿ ಮಾಡಬೇಕು. ಅದಕ್ಕಾಗಿ ಸೂಕ್ತವಾದ ಸಾಂವಿಧಾನಿಕ ತಿದ್ದುಪಡಿ ಮಾಡಬೇಕು ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

ಅಲ್ಲದೆ, 2026 ರಿಂದ 30 ವರ್ಷಗಳ ಕಾಲ ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಗೆ 1971 ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು ಮತ್ತು ಪ್ರಧಾನಿ ಈ ಬಗ್ಗೆ ಸಂಸತ್ತಿಗೆ ಭರವಸೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸೀಟು ಕಡಿತವನ್ನು ತಡೆಯಲು ದಕ್ಷಿಣದ ಎಲ್ಲಾ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿಯನ್ನು ಸ್ಟಾಲಿನ್ ಇದೇ ವೇಳೆ ಪ್ರಸ್ತಾಪಿಸಿದ್ದಾರೆ.

ಆದರೆ ಸ್ಟಾಲಿನ್ ಅವರ ವಾದವನ್ನು ನಿರಾಕರಿಸಿರುವ ಟಿಡಿಪಿ ಸಂಸದ ಮತ್ತು ಸಂಸದೀಯ ಪಕ್ಷದ ನಾಯಕ ಲಾವು ಶ್ರೀ ಕೃಷ್ಣ ದೇವರಾಯಲು, 2014 ರಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶವಾಗಿ ವಿಭಜನೆಯಾಗುವುದರಿಂದ ಆಂಧ್ರಪ್ರದೇಶವು ಈ ವಿಚಾರದಲ್ಲಿ ಹಲವು ಅಂಶಗಳಲ್ಲಿ ಸೋಲುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡನೆಗೆ

ದಕ್ಷಿಣ ರಾಜ್ಯಗಳ ಆತಂಕಗಳನ್ನು ಪರಿಹರಿಸಲು ಪ್ರಸ್ತುತ ಕ್ಷೇತ್ರ ಪುನರ್ವಿಂಗಡಣೆಯ ಸೂತ್ರವನ್ನು ಪುನರ್ರಚಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರೂ, ಅದು ಇತ್ತೀಚಿನ ಜನಸಂಖ್ಯಾ ಅಂಕಿಅಂಶಗಳನ್ನು ಆಧರಿಸಿರಬೇಕು ಎಂದು ಹೇಳಿದ್ದಾರೆ.

“ಕ್ಷೇತ್ರ ಪುನರ್ವಿಂಗಡನೆಯು ಹೊಸ ಜನಗಣತಿಯನ್ನು ಆಧರಿಸಿರಬೇಕು. ಯಾಕೆಂದರೆ ನಮ್ಮ ಎಲ್ಲಾ ಕಲ್ಯಾಣ ಯೋಜನೆಗಳು ಹಳೆಯ ಜನಗಣತಿ ಮತ್ತು ಪರಸ್ಪರ ಸಂಬಂಧವಿಲ್ಲದ ಡೇಟಾವನ್ನು ಆಧರಿಸಿವೆ” ಎಂದು ಅವರು ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡನೆಯಲ್ಲಿ ದಕ್ಷಿಣ ರಾಜ್ಯಗಳು ಸೀಟುಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯನ್ನು ಸ್ವಾಗತಿಸಿದ ದೇವರಾಯಲು, ಜನಸಂಖ್ಯಾ ನಿಯಂತ್ರಣಕ್ಕೆ ಸ್ವಲ್ಪ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಜನಸಂಖ್ಯೆ ನಿಯಂತ್ರಣ ಮಾಡಿದ ರಾಜ್ಯಗಳು ನಿರಾಶೆಗೊಂಡಿವೆ ತಾನು ಎಂದು ಭಾವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...