Homeಮುಖಪುಟಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

ಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

- Advertisement -
- Advertisement -

ಮುಂದಿನ 30 ವರ್ಷಗಳ ಕಾಲ ನಡೆಸುವ ಯಾವುದೇ ಕ್ಷೇತ್ರ ಪುನರ್ವಿಂಗಡಣೆಯನ್ನು 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ನಡೆಸಬೇಕು ಎಂದು ತಮಿಳುನಾಡು ಸರ್ಕಾರವು ಬಯಸುತ್ತಿದೆ. ಆದರೆ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾದ ಆಂಧ್ರಪ್ರದೇಶದ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ)ವು ಇದಕ್ಕೆ ವ್ಯತಿರಿಕ್ತವಾಗಿದ್ದು, ತಮಿಳುನಾಡು ಸರ್ಕಾರದ ವಾದದಂತೆ ಮಾಡಿದರೆ ತನ್ನ ರಾಜ್ಯವನ್ನು ಅನಾನುಕೂಲಕ್ಕೆ ಸಿಲುಕಿಸುತ್ತದೆ ಎಂದು ವಾದಿಸುತ್ತಿದೆ. ಕ್ಷೇತ್ರ ಪುನರ್ವಿಂಗಡನೆಗೆ

ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ, 1971 ರ ಜನಗಣತಿಯ ಆಧಾರವಾಗಿ ಮಾಡಬೇಕು. ಅದಕ್ಕಾಗಿ ಸೂಕ್ತವಾದ ಸಾಂವಿಧಾನಿಕ ತಿದ್ದುಪಡಿ ಮಾಡಬೇಕು ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

ಅಲ್ಲದೆ, 2026 ರಿಂದ 30 ವರ್ಷಗಳ ಕಾಲ ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಗೆ 1971 ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು ಮತ್ತು ಪ್ರಧಾನಿ ಈ ಬಗ್ಗೆ ಸಂಸತ್ತಿಗೆ ಭರವಸೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸೀಟು ಕಡಿತವನ್ನು ತಡೆಯಲು ದಕ್ಷಿಣದ ಎಲ್ಲಾ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿಯನ್ನು ಸ್ಟಾಲಿನ್ ಇದೇ ವೇಳೆ ಪ್ರಸ್ತಾಪಿಸಿದ್ದಾರೆ.

ಆದರೆ ಸ್ಟಾಲಿನ್ ಅವರ ವಾದವನ್ನು ನಿರಾಕರಿಸಿರುವ ಟಿಡಿಪಿ ಸಂಸದ ಮತ್ತು ಸಂಸದೀಯ ಪಕ್ಷದ ನಾಯಕ ಲಾವು ಶ್ರೀ ಕೃಷ್ಣ ದೇವರಾಯಲು, 2014 ರಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶವಾಗಿ ವಿಭಜನೆಯಾಗುವುದರಿಂದ ಆಂಧ್ರಪ್ರದೇಶವು ಈ ವಿಚಾರದಲ್ಲಿ ಹಲವು ಅಂಶಗಳಲ್ಲಿ ಸೋಲುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡನೆಗೆ

ದಕ್ಷಿಣ ರಾಜ್ಯಗಳ ಆತಂಕಗಳನ್ನು ಪರಿಹರಿಸಲು ಪ್ರಸ್ತುತ ಕ್ಷೇತ್ರ ಪುನರ್ವಿಂಗಡಣೆಯ ಸೂತ್ರವನ್ನು ಪುನರ್ರಚಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರೂ, ಅದು ಇತ್ತೀಚಿನ ಜನಸಂಖ್ಯಾ ಅಂಕಿಅಂಶಗಳನ್ನು ಆಧರಿಸಿರಬೇಕು ಎಂದು ಹೇಳಿದ್ದಾರೆ.

“ಕ್ಷೇತ್ರ ಪುನರ್ವಿಂಗಡನೆಯು ಹೊಸ ಜನಗಣತಿಯನ್ನು ಆಧರಿಸಿರಬೇಕು. ಯಾಕೆಂದರೆ ನಮ್ಮ ಎಲ್ಲಾ ಕಲ್ಯಾಣ ಯೋಜನೆಗಳು ಹಳೆಯ ಜನಗಣತಿ ಮತ್ತು ಪರಸ್ಪರ ಸಂಬಂಧವಿಲ್ಲದ ಡೇಟಾವನ್ನು ಆಧರಿಸಿವೆ” ಎಂದು ಅವರು ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡನೆಯಲ್ಲಿ ದಕ್ಷಿಣ ರಾಜ್ಯಗಳು ಸೀಟುಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯನ್ನು ಸ್ವಾಗತಿಸಿದ ದೇವರಾಯಲು, ಜನಸಂಖ್ಯಾ ನಿಯಂತ್ರಣಕ್ಕೆ ಸ್ವಲ್ಪ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಜನಸಂಖ್ಯೆ ನಿಯಂತ್ರಣ ಮಾಡಿದ ರಾಜ್ಯಗಳು ನಿರಾಶೆಗೊಂಡಿವೆ ತಾನು ಎಂದು ಭಾವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...