Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...