Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...