Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...