Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...