Homeಕರೋನಾ ತಲ್ಲಣಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಮಾಹಿತಿ ನೀಡಿದ್ದಾರೆ.

- Advertisement -
- Advertisement -

ದೇಶದಲ್ಲಿ ಕೊರೊನಾ 2ನೇ ಅಲೆ ಸೃಷ್ಟಿಸಿರುವ ಸಂಕಷ್ಟದಿಂದ ಅಲ್ಪಸ್ವಲ್ಪ ಚೇತರಿಸಿಕೊಳ್ಳುತ್ತಿರುವ ನಡುವೇಯೇ ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು. ಈಗ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಮೊದಲ ಪ್ರಕರಣ ಪತ್ತೆಯಾಗಿದೆ.

ಮಂಗಳವಾರದಿಂದ ಮೈಸೂರಿನಲ್ಲಿ ಕೊರೊನಾ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ಇರುವ ಕುರಿತು ಊಹಾಪೋಹಗಳು ಹರಿದಾಡುತ್ತಿದ್ದವು. ಮೈಸೂರಿನಲ್ಲೂ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿದೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುಧಾಕರ್, “ಮೈಸೂರಿನಲ್ಲಿ ಒಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ. ರೋಗಿಯನ್ನ ಐಸೋಲೇಟ್ ಮಾಡಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಇಲ್ಲ. ಸೋಂಕಿತರ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರುವವರಿಗೆ ಸೋಂಕು ಹರಡಿಲ್ಲ” ಎಂದು ಹೇಳಿದ್ದಾರೆ.

’ಈ ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

“ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಸೋಂಕಿತ ವ್ಯಕ್ತಿಗಳ ಮಾದರಿಗಳನ್ನು ತಕ್ಷಣವೇ INSACOG ನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲಾಗುವುದು. ಇದರಿಂದ ಕ್ಲಿನಿಕಲ್ ಸಾಂಕ್ರಾಮಿಕ ರೋಗ ಸಂಬಂಧಗಳನ್ನು ಮಾಡಬಹುದು” ಎಂದು ಸುಧಾಕರ್‌ ತಿಳಿಸಿದ್ದಾರೆ.

ಭಾರತ ಸೇರಿದಂತೆ ವಿಶ್ವದ 80 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ. ಒಂಬತ್ತು ದೇಶಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ. ಯುಎಸ್, ಯುಕೆ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಜಪಾನ್, ಪೋಲೆಂಡ್, ನೇಪಾಳ, ಚೀನಾ ಮತ್ತು ರಷ್ಯಾ ದೇಶಗಳಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎನ್ನಲಾಗಿದೆ

ಪ್ರಸ್ತುತ ದೇಶದಲ್ಲಿ 40 ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ರೂಪಂತರಿ ಪ್ರಕರಣಗಳಿವೆ, ಇದನ್ನು ಒಕ್ಕೂಟ ಸರ್ಕಾರವು “ವೇರಿಯಂಟ್ ಆಫ್ ಕನ್ಸರ್ನ್” ಎಂದು ಕರೆದಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

’ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡೂ ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿವೆ. ಹೀಗಾಗಿ ಪ್ರತಿಯೊಬ್ಬರು ಶೀಘ್ರವಾಗಿ ಲಸಿಕೆ ಪಡೆಯುವುದು ಉತ್ತಮ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆದರೆ, ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿವೆ. ಮುಂದೆ ಹೊಸ ಹೊಸ ಕೊರೊನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...