Homeಕರೋನಾ ತಲ್ಲಣಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಮಾಹಿತಿ ನೀಡಿದ್ದಾರೆ.

- Advertisement -
- Advertisement -

ದೇಶದಲ್ಲಿ ಕೊರೊನಾ 2ನೇ ಅಲೆ ಸೃಷ್ಟಿಸಿರುವ ಸಂಕಷ್ಟದಿಂದ ಅಲ್ಪಸ್ವಲ್ಪ ಚೇತರಿಸಿಕೊಳ್ಳುತ್ತಿರುವ ನಡುವೇಯೇ ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು. ಈಗ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಮೊದಲ ಪ್ರಕರಣ ಪತ್ತೆಯಾಗಿದೆ.

ಮಂಗಳವಾರದಿಂದ ಮೈಸೂರಿನಲ್ಲಿ ಕೊರೊನಾ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ಇರುವ ಕುರಿತು ಊಹಾಪೋಹಗಳು ಹರಿದಾಡುತ್ತಿದ್ದವು. ಮೈಸೂರಿನಲ್ಲೂ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿದೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುಧಾಕರ್, “ಮೈಸೂರಿನಲ್ಲಿ ಒಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ. ರೋಗಿಯನ್ನ ಐಸೋಲೇಟ್ ಮಾಡಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಇಲ್ಲ. ಸೋಂಕಿತರ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರುವವರಿಗೆ ಸೋಂಕು ಹರಡಿಲ್ಲ” ಎಂದು ಹೇಳಿದ್ದಾರೆ.

’ಈ ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

“ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಸೋಂಕಿತ ವ್ಯಕ್ತಿಗಳ ಮಾದರಿಗಳನ್ನು ತಕ್ಷಣವೇ INSACOG ನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲಾಗುವುದು. ಇದರಿಂದ ಕ್ಲಿನಿಕಲ್ ಸಾಂಕ್ರಾಮಿಕ ರೋಗ ಸಂಬಂಧಗಳನ್ನು ಮಾಡಬಹುದು” ಎಂದು ಸುಧಾಕರ್‌ ತಿಳಿಸಿದ್ದಾರೆ.

ಭಾರತ ಸೇರಿದಂತೆ ವಿಶ್ವದ 80 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ. ಒಂಬತ್ತು ದೇಶಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ. ಯುಎಸ್, ಯುಕೆ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಜಪಾನ್, ಪೋಲೆಂಡ್, ನೇಪಾಳ, ಚೀನಾ ಮತ್ತು ರಷ್ಯಾ ದೇಶಗಳಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎನ್ನಲಾಗಿದೆ

ಪ್ರಸ್ತುತ ದೇಶದಲ್ಲಿ 40 ಕ್ಕೂ ಹೆಚ್ಚು ಡೆಲ್ಟಾ ಪ್ಲಸ್ ರೂಪಂತರಿ ಪ್ರಕರಣಗಳಿವೆ, ಇದನ್ನು ಒಕ್ಕೂಟ ಸರ್ಕಾರವು “ವೇರಿಯಂಟ್ ಆಫ್ ಕನ್ಸರ್ನ್” ಎಂದು ಕರೆದಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

’ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡೂ ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿವೆ. ಹೀಗಾಗಿ ಪ್ರತಿಯೊಬ್ಬರು ಶೀಘ್ರವಾಗಿ ಲಸಿಕೆ ಪಡೆಯುವುದು ಉತ್ತಮ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆದರೆ, ವಿಶ್ವ ಆರೊಗ್ಯ ಸಂಸ್ಥೆ (WHO) ಆಘಾತಕಾರಿ ವಿಷಯವೊಂದನ್ನು ಹೊರಹಾಕಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಡೆಲ್ಟಾ ಪ್ಲಸ್‌ ರೂಪಾಂತರಿ ವಿರುದ್ಧ ಹೋರಾಡುವಲ್ಲಿ ಈಗಿರುವ ವ್ಯಾಕ್ಸಿನ್‌ಗಳು ದುರ್ಬಲವಾಗಿವೆ. ಮುಂದೆ ಹೊಸ ಹೊಸ ಕೊರೊನಾ ರೂಪಾಂತರಿಗಳು ಕಾಣಿಸಿಕೊಂಡರೆ ಅವುಗಳ ವಿರುದ್ಧ ವ್ಯಾಕ್ಸಿನ್‌ಗಳು ಯಾವುದೇ ಪರಿಣಾಮವನ್ನು ಬೀರದೇ ಇರುವ ಸಾಧ್ಯತೆಗಳಿವೆ ಎಂದು ವಿಶ್ವ ಆರೊಗ್ಯ ಸಂಸ್ಥೆಯು ಸೋಮವಾರ ಜೂನ್‌ 21 ರಂದು ತಿಳಿಸಿದೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....