Homeಕರೋನಾ ತಲ್ಲಣಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

- Advertisement -
- Advertisement -

ಕೊರೋನಾ ವೈರಸ್‌ನ ಡೆಲ್ಟಾ ರೂಪಾಂತರಿ ತಳಿಯು ದೇಶದಲ್ಲಿ ಆತಂಕವನ್ನು ಸೃಷ್ಟಿಸಿದ್ದು ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್‌ಗೆ ಮೊದಲ ಸಾವು ಸಂಭವಿಸಿದೆ. 80 ವರ್ಷ ವಯಸ್ಸಿನ ವೃದ್ಧೆಯೊಬ್ಬರು ರತ್ನಗಿರಿ ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ವೈರಸ್‌ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತ ಮಹಿಳೆ ವಿವಿಧ ಖಾಯಿಲೆಗಳಿಂದ ನರಳುತ್ತಿದ್ದರು ಎಂದು ಆಸ್ಪತ್ರೆ ಹೇಳಿದೆ.

ಇದುವರೆಗೆ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ಗೆ ಸಂಬಂಧಿಸಿದ 21 ಪ್ರಕರಣಗಳು ದಾಖಲಾಗಿವೆ. ಹೊಸ ಕೊರೋನಾ ರೂಪಾಂತರಿ ತಳಿಯ ವೈರಸ್‌ಗೆ ಮೊದಲು ಸಾವು ಸಂಭವಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಅನ್‌ಲಾಕ್ ಪ್ರಕ್ರಿಯೆಗಳನ್ನು ನಿಧಾನಗೊಳಿಸಲು ಮುಂದಾಗಿದ್ದು ಕೆಲವು ನಿರ್ಬಂಧಗಳನ್ನು ಮುಂದುವರೆಸುವುದಾಗಿ ಹೇಳಿದೆ.

ಶಾಪಿಂಗ್ ಮಾಲ್‌ಗಳು, ಬಾರ್‌ಗಳನ್ನು ತೆರೆಯಲು ಅವಕಾಶವಿರುವುದಿಲ್ಲ. ಸಂಜೆ 4 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವನ್ನು ನೀಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಥಾಣೆ ಮತ್ತು ಪುಣೆ ನಗರಗಳಲ್ಲಿ ಕಠಿಣ ನಿರ್ಬಂಧಗಳು ಮುಂದುವರೆಯಲಿವೆ ಎಂದು ಮಹಾರಾಷ್ಟ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ಗೆ 3 ಜನರು ಮೃತಪಟ್ಟಿದ್ದು ಮಧ್ಯಪ್ರದೇಶದಲ್ಲಿ 2 ಮತ್ತು ಮಹಾರಾಷ್ಟ್ರದಲ್ಲಿ 1 ಸಾವು ಸಂಭವಿಸಿದೆ.

ಕರ್ನಾಟಕ ಸೇರಿದಂತೆ ಭಾರತದ ಇತರ ರಾಜ್ಯಗಳಲ್ಲೂ ಡೆಲ್ಟಾ ಪ್ಲಸ್ ಕರೊನಾ ರೂಪಾಂತರಿ ತಳಿಯ ವೈರಸ್ ಪತ್ತೆಯಾಗಿದ್ದು ವೈದ್ಯರು ಮತ್ತು ತಜ್ಞರು ಹೊಸ ಮಾದರಿಯ ರೂಪಾಂತರಿ ವೈರಸ್ ಕುರಿತು ಕಠಿಣ ಎಚ್ಚರಿಕೆಗಳನ್ನು ನೀಡುತ್ತಿದ್ದಾರೆ.


ಇದನ್ನೂ ಓದಿ : ನೆರೆಹೊರೆ ನಿವಾಸಿಗಳಿಗೆ ಬೆದರಿಕೆ ಆರೋಪ: ನಟಿ ಪಾಯಲ್ ರೋಹ್ಟಗಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...