Homeಕರೋನಾ ತಲ್ಲಣಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

ಡೆಲ್ಟಾ ಪ್ಲಸ್‌ ರೂಪಾಂತರಿಗೆ ಮಹಾರಾಷ್ಟ್ರದಲ್ಲಿ ಮೊದಲ ಸಾವು: ನಿರ್ಬಂಧಗಳ ಸಡಿಲಿಕೆಯಿಂದ ಹಿಂದೆ ಸರಿದ ಸರ್ಕಾರ

- Advertisement -
- Advertisement -

ಕೊರೋನಾ ವೈರಸ್‌ನ ಡೆಲ್ಟಾ ರೂಪಾಂತರಿ ತಳಿಯು ದೇಶದಲ್ಲಿ ಆತಂಕವನ್ನು ಸೃಷ್ಟಿಸಿದ್ದು ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್‌ಗೆ ಮೊದಲ ಸಾವು ಸಂಭವಿಸಿದೆ. 80 ವರ್ಷ ವಯಸ್ಸಿನ ವೃದ್ಧೆಯೊಬ್ಬರು ರತ್ನಗಿರಿ ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ವೈರಸ್‌ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತ ಮಹಿಳೆ ವಿವಿಧ ಖಾಯಿಲೆಗಳಿಂದ ನರಳುತ್ತಿದ್ದರು ಎಂದು ಆಸ್ಪತ್ರೆ ಹೇಳಿದೆ.

ಇದುವರೆಗೆ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ಗೆ ಸಂಬಂಧಿಸಿದ 21 ಪ್ರಕರಣಗಳು ದಾಖಲಾಗಿವೆ. ಹೊಸ ಕೊರೋನಾ ರೂಪಾಂತರಿ ತಳಿಯ ವೈರಸ್‌ಗೆ ಮೊದಲು ಸಾವು ಸಂಭವಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಅನ್‌ಲಾಕ್ ಪ್ರಕ್ರಿಯೆಗಳನ್ನು ನಿಧಾನಗೊಳಿಸಲು ಮುಂದಾಗಿದ್ದು ಕೆಲವು ನಿರ್ಬಂಧಗಳನ್ನು ಮುಂದುವರೆಸುವುದಾಗಿ ಹೇಳಿದೆ.

ಶಾಪಿಂಗ್ ಮಾಲ್‌ಗಳು, ಬಾರ್‌ಗಳನ್ನು ತೆರೆಯಲು ಅವಕಾಶವಿರುವುದಿಲ್ಲ. ಸಂಜೆ 4 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವನ್ನು ನೀಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಥಾಣೆ ಮತ್ತು ಪುಣೆ ನಗರಗಳಲ್ಲಿ ಕಠಿಣ ನಿರ್ಬಂಧಗಳು ಮುಂದುವರೆಯಲಿವೆ ಎಂದು ಮಹಾರಾಷ್ಟ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ಗೆ 3 ಜನರು ಮೃತಪಟ್ಟಿದ್ದು ಮಧ್ಯಪ್ರದೇಶದಲ್ಲಿ 2 ಮತ್ತು ಮಹಾರಾಷ್ಟ್ರದಲ್ಲಿ 1 ಸಾವು ಸಂಭವಿಸಿದೆ.

ಕರ್ನಾಟಕ ಸೇರಿದಂತೆ ಭಾರತದ ಇತರ ರಾಜ್ಯಗಳಲ್ಲೂ ಡೆಲ್ಟಾ ಪ್ಲಸ್ ಕರೊನಾ ರೂಪಾಂತರಿ ತಳಿಯ ವೈರಸ್ ಪತ್ತೆಯಾಗಿದ್ದು ವೈದ್ಯರು ಮತ್ತು ತಜ್ಞರು ಹೊಸ ಮಾದರಿಯ ರೂಪಾಂತರಿ ವೈರಸ್ ಕುರಿತು ಕಠಿಣ ಎಚ್ಚರಿಕೆಗಳನ್ನು ನೀಡುತ್ತಿದ್ದಾರೆ.


ಇದನ್ನೂ ಓದಿ : ನೆರೆಹೊರೆ ನಿವಾಸಿಗಳಿಗೆ ಬೆದರಿಕೆ ಆರೋಪ: ನಟಿ ಪಾಯಲ್ ರೋಹ್ಟಗಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...