Homeಕರೋನಾ ತಲ್ಲಣಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

- Advertisement -
- Advertisement -

ಇಡೀ ದೇಶವೇ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿರುವಾಗಲೇ, ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿವೆ.

ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು ‘ಡೆಲ್ಟಾ ಪ್ಲಸ್ ಅಥವಾ ಎವೈ.1(AY.1) ರೂಪಾಂತರವಾಗಿ ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ 21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಕಾಣಿಸಿಕೊಂಡಿವೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಇವುಗಳಲ್ಲಿ 9 ಪ್ರಕರಣಗಳು ರತ್ನಗಿರಿಯಲ್ಲಿ, 7 ಪ್ರಕರಣಗಳು ಜಲ್ಗೋನ್‌ನಲ್ಲಿ, 2 ಪ್ರಕರಣಗಳು ಮುಂಬೈನಲ್ಲಿ ಮತ್ತು ಸಿಂದುದರ್ಗ್​​, ಥಾಣೆ ಮತ್ತು ಪಾಲ್ಗಾರ್​ ಜಿಲ್ಲೆಗಳಲ್ಲಿ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಟೋಪೆ  ತಿಳಿಸಿದ್ದಾರೆ.

21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಪತ್ತೆಯಾಗಿರುವ ಹಿನ್ನೆಲ್ಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 100 ಸ್ಯಾಂಪಲ್‌ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಕಳೆದ ಮೇ 15 ರಿಂದ 7,500 ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 21 ಕೇಸ್​​ಗಳಲ್ಲಿ ಡೆಲ್ಟಾ ಪ್ಲಸ್​ ವೈರಸ್​​ ಕಂಡು ಬಂದಿದೆ. ಸೋಂಕಿತರ ವ್ಯಾಕ್ಸಿನೇಷನ್​ ಸ್ಥಿತಿ ಮತ್ತು ಅವರ ಟ್ರಾವೆಲ್​ ಹಿಸ್ಟರಿಯನ್ನು ಕಲೆ ಹಾಕಲಾಗಿದೆ ಎಂದು ರಾಜೇಶ್​ ಟೋಪೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಕೇರಳದ ಪಲಕ್ಕಾಡ್​​​​ ಮತ್ತು ಪತನಮಿತ್ತ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತನಮಿತ್ತ ಜಿಲ್ಲೆಯ ಕಡಪರಾ ಪಂಚಾಯತ್ ಮೂಲದ 4 ವರ್ಷದ ಬಾಲಕನಲ್ಲಿ, ಪಲಕ್ಕಾಡ್​ನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಧ್ಯಪ್ರದೇಶದ ಭೂಪಾಲ್​ನ 65 ವರ್ಷದ ಮಹಿಳೆಯಲ್ಲಿ ಮೊದಲ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪ್ರಕರಣ ಪತ್ತೆಯಾಗಿತ್ತು. ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೋಂ ಐಸೋಲೇಷನ್‌ನಲ್ಲಿದ್ದ, ಎರಡು ಡೋಸ್ ವ್ಯಾಕ್ಸಿನ್​ ಪಡೆದಿದ್ದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಜೂನ್​ 17ರಂದು ಮಹಿಳೆಗೆ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಇರುವುದು ದೃಢಪಟ್ಟಿತ್ತು. ಆದರೆ ಆ ಸೋಂಕಿತೆ ಮಾಹಿತಿ ನೀಡಲು ನಿರಾಕರಿಸಿದರು ಎಂದು ಮಧ್ಯಪ್ರದೇಶದ ವೈದ್ಯಕೀಯ ಶೈಕ್ಷಣಿಕ ಸಚಿವ ವಿಶ್ವಾಸ್ ಸಾರಂಗ್​​ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...