Homeಕರೋನಾ ತಲ್ಲಣವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

ವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

- Advertisement -
- Advertisement -

ಕೊರೊನಾ ಎರಡನೇ ಅಲೆ ಕಳೆದು ಜಗತ್ತು  3 ಮೂರನೇ ಅಲೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಆಘಾತಕಾರಿ ಮಾಹಿತಿಯೊಂದನನ್ನು ನೀಡಿದೆ. ಜಗತ್ತಿನಲ್ಲಿ ಅತಿ ವೇಗವಾಗಿ ಹರುಡತ್ತಿರುವ ಡೆಲ್ಟಾ ರೂಪಾಂತರಿ ವೈರಸ್‌ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ಹರಡಿದೆ ಎಂದು ಹೆಳಿದೆ. ಇದುವರೆಗೆ ಅಪಾಯಕಾರಿ ಡೆಲ್ಟಾ ವೈರಸ್‌ ಜಗತ್ತಿನ 104 ದೇಶಗಳಲ್ಲಿ ಕಂಡು ಬಂದಿದೆ ಕೋವಿಡ್‌ ಆತಂಕ ಇನ್ನೂ ಕಳೆದಿಲ್ಲ ಎಂದು ಎಚ್ಚರಿಸಿದೆ.

ನಾಲ್ಕು ವಾರಗಳಿಂದ ಕೊರೋನಾ ವೈರಸ್‌ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಜೂನ್‌ ವೇಳೆಗೆ ಇಳಿಕೆಯಾಗಿದ್ದ ಸೋಂಕಿತರ ಸಂಖ್ಯೆ ಜುಲೈ  2ನೇ ವಾರದಲ್ಲಿ ಮತ್ತೆ ಏರಿಕೆ ಕಂಡಿದೆ. ಶಾವಿನ ಪ್ರಮಾಣದಲ್ಲೂ ವ್ಯಾಪಕ ಹೆಚ್ಚಳವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಗೆಬ್ರೇಷಿಯಸ್‌ ಎಚ್ಚರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ  6 ವಲಯಗಳಲ್ಲಿ ಒಂದು ವಲಯದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ ಎಂದು ಅವರು ತಿಳಿಸಿದ್ದು, ವ್ಯಾಕ್ಸಿನೇಶನ್ ಕಡಿಮೆ ಇರುವ ದೇಶದಲ್ಲಿ ಸೋಂಕು ಹರಡುವಿಕೆಯ ಪ್ರಮಾಣ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಕೋವಿಡ್ 2ನೆ ಅಲೆ ಜಾಗತಿಕ ತೀವ್ರತೆಗೂ ಕಾರಣವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಭಾರತದ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕಳೆದ 1 ವಾರದಿಂದ ಸೊಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲಿ ತೀವ್ರ ಏರಿಕಾಯಾಗುತ್ತಿದೆ. ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಡೆಲ್ಟಾ ರೂಪಾಮತರಿ ಪ್ರಕರಣಗಳು ದಾಖಲಾಗತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಡೆಲ್ಟಾ ಪ್ಲಸ್‌, ಕಪ್ಪಾ, ಲಾಂಬಾ ರೂಪಾಂತರಿ ವೈರಸ್‌ಗಳು ಕೂಡ ದೇಶದಲ್ಲಿ ಪತ್ತೆಯಾಗಿವೆ.

ಕೋವಿಡ್ ಎರಡನೇ ಅಲೆಯ ನಂತರ ದೇಶದಲ್ಲಿ ಅನ್‌ಲಾಕ್ ಪ್ರಕ್ರಿಯೆಗಳು ಜಾರಿಯಲ್ಲಿದ್ದು ದೇಶದ ಬಹುತೇಕ ರಾಜ್ಯಗಳು ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿವೆ. ನಿರ್ಬಂಧ ತೆರವಾಗುತ್ತಿದ್ದಂತೆ ಜನರು ಪ್ರವಾಸಿ ತಾಣಗಳಿಗೆ ಮುಗಿ ಬೀಳುತ್ತಿರುವುದು ಹೊಸ ಆರೋಗ್ಯ ಸಮಸ್ಯೆಗೆ ಮುನ್ನುಡಿ ಎಂದು ಹಲವು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...