Homeಕರೋನಾ ತಲ್ಲಣವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

ವಿಶ್ವವನ್ನು ವ್ಯಾಪಿಸಿದ ಡೆಲ್ಟಾ ರೂಪಾಂತರಿ: 104 ದೇಶಗಳಲ್ಲಿ ಹೊಸ ತಳಿ ಪತ್ತೆ

- Advertisement -
- Advertisement -

ಕೊರೊನಾ ಎರಡನೇ ಅಲೆ ಕಳೆದು ಜಗತ್ತು  3 ಮೂರನೇ ಅಲೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಆಘಾತಕಾರಿ ಮಾಹಿತಿಯೊಂದನನ್ನು ನೀಡಿದೆ. ಜಗತ್ತಿನಲ್ಲಿ ಅತಿ ವೇಗವಾಗಿ ಹರುಡತ್ತಿರುವ ಡೆಲ್ಟಾ ರೂಪಾಂತರಿ ವೈರಸ್‌ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ಹರಡಿದೆ ಎಂದು ಹೆಳಿದೆ. ಇದುವರೆಗೆ ಅಪಾಯಕಾರಿ ಡೆಲ್ಟಾ ವೈರಸ್‌ ಜಗತ್ತಿನ 104 ದೇಶಗಳಲ್ಲಿ ಕಂಡು ಬಂದಿದೆ ಕೋವಿಡ್‌ ಆತಂಕ ಇನ್ನೂ ಕಳೆದಿಲ್ಲ ಎಂದು ಎಚ್ಚರಿಸಿದೆ.

ನಾಲ್ಕು ವಾರಗಳಿಂದ ಕೊರೋನಾ ವೈರಸ್‌ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಜೂನ್‌ ವೇಳೆಗೆ ಇಳಿಕೆಯಾಗಿದ್ದ ಸೋಂಕಿತರ ಸಂಖ್ಯೆ ಜುಲೈ  2ನೇ ವಾರದಲ್ಲಿ ಮತ್ತೆ ಏರಿಕೆ ಕಂಡಿದೆ. ಶಾವಿನ ಪ್ರಮಾಣದಲ್ಲೂ ವ್ಯಾಪಕ ಹೆಚ್ಚಳವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಗೆಬ್ರೇಷಿಯಸ್‌ ಎಚ್ಚರಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ  6 ವಲಯಗಳಲ್ಲಿ ಒಂದು ವಲಯದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ ಎಂದು ಅವರು ತಿಳಿಸಿದ್ದು, ವ್ಯಾಕ್ಸಿನೇಶನ್ ಕಡಿಮೆ ಇರುವ ದೇಶದಲ್ಲಿ ಸೋಂಕು ಹರಡುವಿಕೆಯ ಪ್ರಮಾಣ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಕೋವಿಡ್ 2ನೆ ಅಲೆ ಜಾಗತಿಕ ತೀವ್ರತೆಗೂ ಕಾರಣವಾಗಿದೆ: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಭಾರತದ ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕಳೆದ 1 ವಾರದಿಂದ ಸೊಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲಿ ತೀವ್ರ ಏರಿಕಾಯಾಗುತ್ತಿದೆ. ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಡೆಲ್ಟಾ ರೂಪಾಮತರಿ ಪ್ರಕರಣಗಳು ದಾಖಲಾಗತ್ತಿರುವುದು ಆತಂಕವನ್ನು ಸೃಷ್ಟಿಸಿದೆ. ಡೆಲ್ಟಾ ಪ್ಲಸ್‌, ಕಪ್ಪಾ, ಲಾಂಬಾ ರೂಪಾಂತರಿ ವೈರಸ್‌ಗಳು ಕೂಡ ದೇಶದಲ್ಲಿ ಪತ್ತೆಯಾಗಿವೆ.

ಕೋವಿಡ್ ಎರಡನೇ ಅಲೆಯ ನಂತರ ದೇಶದಲ್ಲಿ ಅನ್‌ಲಾಕ್ ಪ್ರಕ್ರಿಯೆಗಳು ಜಾರಿಯಲ್ಲಿದ್ದು ದೇಶದ ಬಹುತೇಕ ರಾಜ್ಯಗಳು ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿವೆ. ನಿರ್ಬಂಧ ತೆರವಾಗುತ್ತಿದ್ದಂತೆ ಜನರು ಪ್ರವಾಸಿ ತಾಣಗಳಿಗೆ ಮುಗಿ ಬೀಳುತ್ತಿರುವುದು ಹೊಸ ಆರೋಗ್ಯ ಸಮಸ್ಯೆಗೆ ಮುನ್ನುಡಿ ಎಂದು ಹಲವು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...