Homeಮುಖಪುಟಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆ ಪ್ರಕಟಿಸದ ಪಕ್ಷಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಆಯೋಗಕ್ಕೆ ಎಡಿಆರ್ ಪತ್ರ

ಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆ ಪ್ರಕಟಿಸದ ಪಕ್ಷಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಆಯೋಗಕ್ಕೆ ಎಡಿಆರ್ ಪತ್ರ

- Advertisement -
- Advertisement -

ಚುನಾವಣಾ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು ಪ್ರಕಟಿಸದೇ ಇರುವ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಚುನಾವಣಾ ಆಯೋಗಕ್ಕೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ ಸೋಮವಾರ ಪತ್ರ ಬರೆದಿದೆ.

2018ರ ಸೆಪ್ಟೆಂಬರ್‌ನಲ್ಲಿ ನೀಡಿದ ತೀರ್ಪಿನಲ್ಲಿ, ಕ್ರಿಮಿನಲ್ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು ಮತ್ತು ಅಂತಹ ನಾಯಕರನ್ನು ಅಭ್ಯರ್ಥಿಗಳಾಗಿ ನಾಮನಿರ್ದೇಶನ ಮಾಡುವ ಹಿಂದಿನ ಕಾರಣವನ್ನು ಸೂಚಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಫೆಬ್ರವರಿ 2020ರಲ್ಲಿ, ತನ್ನ ಆದೇಶವನ್ನು ಕಾರ್ಯಗತಗೊಳಿಸದ ಕುರಿತು ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಅಂತಹ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ 72 ಗಂಟೆಗಳ ಒಳಗೆ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹಿಂದಿನ ಕಾರಣಗಳನ್ನು ತಿಳಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಎಲ್ಲ ಪಕ್ಷಗಳು ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವುದನ್ನು ಕಡ್ಡಾಯಗೊಳಿಸಿ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಹಲವು ಪಕ್ಷಗಳು ತಮ್ಮ ರಾಜಕೀಯ ಜನಪ್ರಿಯತೆಯ ಹೊರತಾಗಿ ವಿವರಗಳನ್ನು ಪ್ರಕಟಿಸಲು ಸರಿಯಾದ ವೆಬ್‌ಸೈಟ್‌ಗಳನ್ನು ಹೊಂದಿಲ್ಲ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ.

2021 ಮತ್ತು 2023ರ ನಡುವಿನ 16 ವಿಧಾನಸಭಾ ಚುನಾವಣೆಗಳಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸಿದ ರಾಜಕೀಯ ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ  ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಒತ್ತಾಯಿಸಿದೆ.

”ಕೆಲವು ರಾಜಕೀಯ ಪಕ್ಷಗಳ ವೆಬ್‌ಸೈಟ್ ಲಿಂಕ್‌ಗಳು ಓಪನ್ ಕೂಡ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೂ  ಕೆಲವು ಪಕ್ಷಗಳ ವೆಬ್‌ಸೈನ್‌ನಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರಣಗಳನ್ನು ನೀಡುವಾಗ, ರಾಜಕೀಯ ಪಕ್ಷಗಳು ವಿಭಿನ್ನ ಅಭ್ಯರ್ಥಿಗಳಿಗೆ ಒಂದೇ ಕಾರಣವನ್ನು ಕಾಪಿ-ಪೇಸ್ಟ್ ಮಾಡಿವೆ” ಎಂದು ಪತ್ರದಲ್ಲಿ ತಿಳಿಸಿದೆ.

ನಿಯಮಗಳನ್ನು ಪಾಲಿಸದ ತಪ್ಪಿತಸ್ಥ ಪಕ್ಷಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲು, ಅವುಗಳ ನೋಂದಣಿ ರದ್ದುಪಡಿಸಲು ಮತ್ತು ನ್ಯಾಯಾಂಗ ನಿಂದನೆ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್‌ಗೆ ಹೋಗುವಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.

ಇದನ್ನೂ ಓದಿ: ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಣಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಮಾಲೋಚನಾ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಆಘಾತಕಾರಿ ಜಾತಿ ನಿಂದನೆ-ವರದಿ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...