Homeಮುಖಪುಟಬೇಡಿಕೆ ಕುಸಿತ - ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ - ಐ.ವಿ.ಗೌಲ್

ಬೇಡಿಕೆ ಕುಸಿತ – ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ – ಐ.ವಿ.ಗೌಲ್

- Advertisement -
- Advertisement -

ಮೊನ್ನೆ ಬಂದ ಮೂರು ಸಿನಿಮಾಗಳು ತಲಾ 120 ಕೋಟಿ ರೂಪಾಯಿ ಗಳಿಸಿವೆ. ಹೀಗಾಗಿ ನಮ್ಮ ದೇಶದ ಆರ್ಥಿಕ ಪರಿಸ್ಥಿತಿಗೆ ಯಾವುದೇ ತೊಂದರೆ ಆಗಿಲ್ಲ.

ಯುವ ಜನರಿಗೆ ಹೊಸ ವಿನ್ಯಾಸದ ಬಟ್ಟೆಗಳು ಬೇಕಾಗಿವೆ ಆದ್ದರಿಂದ ಅವರು ಹೊಸ ಬಟ್ಟೆ ಖರೀದಿಸುತ್ತಿಲ್ಲ.
ಮಧ್ಯ ವಯಸ್ಕರು ಓಲಾ, ಊಬರ್‌ಗಳಲ್ಲಿ ಓಡಾಡುತ್ತಿರುವುದರಿಂದ ಕಾರು, ಬೈಕು, ಟ್ರಕ್ಕು, ಟ್ರ್ಯಾಕ್ಟರು ಮಾರಾಟವಾಗುತ್ತಿಲ್ಲ

ಜಿಎಸ್‍ಟಿ ಸರಿಯಿಲ್ಲ. ಅದರಲ್ಲಿ ಕೆಲವು ಸಮಸ್ಯೆಗಳಿವೆ. ಅದರಿಂದ ತೆರಿಗೆ ಸಂಗ್ರಹ ಸರಿಯಾಗಬಹುದೆಂದು ಅಂದುಕೊಂಡಿದ್ದೆವು. ಆಗಲಿಲ್ಲ, ಸಾರಿ. ಆದರೆ ಏನು ಮಾಡುವುದು, ಅದು ದೇಶದ ಕಾನೂನು. ಪಾಲಿಸಲೇ ಬೇಕು.

ಇಂತಹ ಮುತ್ತಿನ ಹಾರದಂತಹ ಮಾತುಗಳು ನಮ್ಮ ಕಿವಿ ತುಂಬಿ ನಮಗೆ ಕರ್ಣಾನಂದವಾಗುತ್ತಿದೆ.
ಇವನ್ನು ಯಾರು ಯಾರಿಗೆ ಹೇಳಿದರು ಎನ್ನುವ ಪ್ರಶ್ನೆಗಳಿಗೆ ಪಾಸಿಂಗ್ ಮಾರ್ಕೂ ಬರುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತು.

ಒಟ್ಟಿನಲ್ಲಿ ಈಗ ಇಡೀ ದೇಶದ ತುಂಬ ಆರ್ಥಿಕ ಪರಿಸ್ಥಿತಿಯ ಸುದ್ದಿ. ಅರ್ಥದ ಸುದ್ದಿ ಹಾಗೂ ಅದರ ಅರ್ಥದ ಸುದ್ದಿ.
ಬರೀ ಅರ್ಥಾರ್ಥದ ಮಾತು.
ಯಾಕೆ?
ಹಿಗ್ಸ – ಬಾಸಾನ್ ಎಂಬ ಪರಮಾಣು ಭಾಗವನ್ನು, ದೇವ ಕಣ ಎಂದು ಕನ್ನಡ ಪತ್ರಿಕೆಗಳ ಭಾಷಾಂತರಕಾರರಿಂದ ಕರೆಯಲ್ಪಟ್ಟ ಅಣುವಿನ ತುಂಡಿನ ಬಗ್ಗೆ ಸಂಶೋಧಿಸಿದ ವಿಜ್ಞಾನಿ ಹಿಗ್ಸ ಅವರನ್ನು ಬ್ರಿಟಿಷ್ ಟಿವಿ ಚಾನಲ್ ಒಂದು ಮಾತಾಡಿಸಿತು.

ಈ ದೇವಕಣದ ಬಗ್ಗೆ ನೀವು ಸರಳ ಭಾಷೆಯಲ್ಲಿ 30 ಸೆಕೆಂಡುಗಳಲ್ಲಿ ಎಲ್ಲರೂ ತಿಳಿಯುವಂತೆ ಹೇಳಬಲ್ಲಿರಾ ಎಂದು ಸಂದರ್ಶಕ ಕೇಳಿದ.

`ಇಲ್ಲ. ಸಾಧ್ಯವಿಲ್ಲ` ಎಂದು ಅವರು ಹೇಳಿದರು. ಇಬ್ಬರೂ ನಕ್ಕರು.
ಈಗ ಭಾರತದ ಆರ್ಥಿಕ ವ್ಯವಸ್ಥೆಯನ್ನು ಕಾಡುತ್ತಿರುವ ಸಮಸ್ಯೆಯನ್ನು ಸರಳವಾಗಿ, ಎಲ್ಲರಿಗೂ ತಿಳಿಯುಂತೆ, ಕೆಲವೇ ಶಬ್ದಗಳಲ್ಲಿ ತಿಳಿಸಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಆರ್ಥಿಕ ತಜ್ಞರು ಇಲ್ಲ, ಸಾಧ್ಯವೇ ಇಲ್ಲ ಅಂತ ಹೇಳಬಹುದೇನೋ. ಪ್ರಶ್ನೆ ಕೇಳಿದವರು, ಉತ್ತರ ಕೊಟ್ಟವರು, ಇಬ್ಬರೂ ನಗಲಾರದೇ ಮಾತು ಮುಗಿಸಬಹುದೇನೋ.

ನಮ್ಮ ವಾರ್ಷಿಕ ಬೆಳವಣಿಗೆಯ ದರ ಕಡಿಮೆ ಆಗಿರುವುದಕ್ಕೂ, ನಿರುದ್ಯೋಗ ಬೆಳೆಯುತ್ತಿರುವುದಕ್ಕೂ, ಸಾಲ ಹೆಚ್ಚಾಗಿ, ಉತ್ಪನ್ನ ಕಡಿಮೆಯಾಗಿ ಷೇರು ಮಾರುಕಟ್ಟೆ ನಷ್ಟ ಅನುಭವಿಸುತ್ತಿರುವುದಕ್ಕೂ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲು ನಮ್ಮ ರಫ್ತು ಭಾಗೀದಾರಿಕೆ ಕಡಿಮೆ ಆಗುತ್ತಿರುವುದಕ್ಕೂ ಅನೇಕ ಕಾರಣಗಳಿರಬಹುದು.
ತಿಳಿದವರು ಅದನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುತ್ತಿರಬಹುದು. ತಮ್ಮ ವಾದವನ್ನು ಬೆಂಬಲಿಸಲು ಅವರು ತಮ್ಮದೇ ಆದ ಸಿದ್ಧಾಂತಗಳನ್ನು ನೆಚ್ಚಿಕೊಂಡಿರಬಹುದು.

ಅಂತಹ ಅನೇಕ ವಾದಗಳಲ್ಲಿ ಒಂದು `ಡಿಮಾಂಡ್ ಸ್ಲಂಪ್` ಅಥವಾ `ಬೇಡಿಕೆ ಕುಸಿತದ` ಸಿದ್ಧಾಂತ.
ಅದು ಸರಿಯೋ ತಪ್ಪೋ ಎನ್ನುವ ಮಾತಿಗೆ ಹೋಗದೇ ಇಲ್ಲಿ ನೋಡೋಣ.

ಇದರ ಸರಳಾರ್ಥವೆಂದರೆ ಜನರ ದುಡ್ಡು ಮಾರುಕಟ್ಟೆಯಲ್ಲಿ ಖರ್ಚಾಗುತ್ತಿಲ್ಲ. ಜನ ಖರೀದಿ ಮಾಡುತ್ತಿಲ್ಲ. ಇರಲಾರದವರಿಗೆ ದುಡ್ಡು ಹುಟ್ಟುತ್ತಿಲ್ಲ, ಇದ್ದವರಿಗೆ ಮುಂದೇನಾಗಬಹುದೋ ಎಂಬ ಆತಂಕದಿಂದ ಸುಮ್ಮನಿದ್ದಾರೆ. ಒಂದರಿಂದ ಶುರುವಾದ ಸೋಂಕು ಇನ್ನೊಂದಕ್ಕೆ ಹರಡುವಂತೆ, ಒಂದು ಕ್ಷೇತ್ರದ ಹಿಂಜರಿತ ಇನ್ನೊಂದು ಕ್ಷೇತ್ರಕ್ಕೆ ಹರಡಿ ಇಡೀ ದೇಶವನ್ನು ಆವರಿಸಿಕೊಂಡಿದೆ ಎನ್ನುವರಿದ್ದಾರೆ.
ಅವರ ಪ್ರಕಾರ ಇದರ ಮೂಲ ಕಾರಣಗಳು ಇವು.

ಮೊದಲನೇಯದಾಗಿ ದುಡಿಯುವ ಜನರ ಕೈಗೆ ಕೆಲಸ ಕೊಟ್ಟು ಸಂಪತ್ತು ಸೃಷ್ಟಿಸುವುದನ್ನು ಬಿಟ್ಟು ಬಂಡವಾಳ ಮೂಲಗಳು ನೌಕರರ ಸಂಖ್ಯೆಯನ್ನು ಕಮ್ಮಿ ಮಾಡಿ ಹೂಡಿಕೆದಾರರ ಹಿತಾಸಕ್ತಿಯನ್ನು ಸಂರಕ್ಷಿಸುವ ಏಕೈಕ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಸೃಷ್ಟಿಸಿದ್ದು.

ವಿಶ್ವವನ್ನೇ ಒಂದು ಮಾರುಕಟ್ಟೆ ಮಾಡುವ ಉದ್ದೇಶದಿಂದ ಸೃಜಿಸಲಾದ ವಿಶ್ವ ಬ್ಯಾಂಕು, ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರದೇಶವಾರು ಮಾರುಕಟ್ಟೆ ಒಪ್ಪಂದಗಳು, ಇವೆಲ್ಲ ಸೇರಿ ಯಾವುದೇ ದೇಶಕ್ಕೆ ಆರ್ಥಿಕ ಸ್ವಾತಂತ್ರ್ಯ ಇಲ್ಲದೇ ಹೋದದ್ದು. ಈ ಗುಂಪುಗಳ ಕೆಲವು ಸದಸ್ಯರಾಷ್ಟ್ರಗಳ ಬಲಹೀನತೆಗಳು ಎಲ್ಲ ಸದಸ್ಯರನ್ನೂ, ಸದಸ್ಯರಲ್ಲದವರನ್ನೂ ಕಾಡಲು ಆರಂಭಿಸಿದ್ದು.

ಬ್ಯಾಂಕಿಂಗ್, ವಿಮೆ, ಗೃಹೋಪಯೋಗಿ ವಸ್ತುಗಳ ಉತ್ಪಾದನೆ ಇತ್ಯಾದಿ ಕೆಲ ಕ್ಷೇತ್ರಗಳ ಸಂಸ್ಥೆಗಳ ಅತಿ ಮೌಲ್ಯೀಕರಣ ಓವರ್ ವ್ಯಾಲುಏಷನ್. ಇವುಗಳಿಗೆ ತಾವು ಅರಗಿಸಿಕೊಳ್ಳಲು ಸಾಧ್ಯವಿರುವುದಕ್ಕಿಂತ ಹೆಚ್ಚಿನ ಬಂಡವಾಳ ಹರಿದು ಬಂದು, ನಿರೀಕ್ಷಿತ ಲಾಭ ಅಥವಾ ಉತ್ಪನ್ನ ಬರದೇ ಹೋದದ್ದು
ಕೊಳ್ಳುಬಾಕುತನ ಅತಿಯಾಗಿ ಜನ ಖರೀದಿಸಲು ಸಾಧ್ಯವಿದ್ದಕ್ಕಿಂತ ಹೆಚ್ಚು ಉತ್ಪಾದನೆ ಆಗಿ ಸಾಮಾನುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗದೇ ಉಳಿದಿರುವುದು
ಇತ್ಯಾದಿ

ಇದರ ಉಪಾಯಗಳೇನು?
ಅರ್ಥಶಾಸ್ತ್ರಜ್ಞೆ ಜಯಂತಿ ಘೋಷ್, ಶ್ರೀನಿವಾಸ್ ರಾಘವನ್ ಮತ್ತು ಇತರರು ಮೊನ್ನೆ ಒಂದು ವಿಚಾರ ಸಂಕಿರಣದಲ್ಲಿ ಹೇಳಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾರ್ವಜನಿಕ ಕ್ಷೇತ್ರದಲ್ಲಿ ಖರ್ಚನ್ನು ಹೆಚ್ಚಿಸಿ, ಸರಕಾರಿ ಉದ್ದಿಮೆಗಳನ್ನು ಚುರುಕಾಗಿಸಿ, ಉದ್ಯೋಗ ಖಾತ್ರಿ ಯಂತಹ ಯೋಜನೆಗಳಿಂದ ಹಳ್ಳಿಗಳ ಜನರ ಕೈಯಲ್ಲಿ ಹೆಚ್ಚಿನ ಹಣ ಹರಿಯುವಂತೆ ಮಾಡುವುದು, ಒಂದು ಉಪಾಯ. ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಸೃಷ್ಟಿ ಮುಂತಾದ ಕ್ಷೇತ್ರಗಳಲ್ಲಿ ಸರಕಾರಿ ಖರ್ಚನ್ನು ಹೆಚ್ಚಿಸುವುದು ಇನ್ನೊಂದು ಉಪಾಯ
ಭಾರತೀಯ ಅರ್ಥವ್ಯವಸ್ಥೆ ತೇಜಿ ಇರುವ ಚುರುಕಾದ, ಲಾಭ ಗಳಿಸಿಕೊಳ್ಳಬಲ್ಲಂತಹ ವ್ಯವಸ್ಥೆ ಎಂದು ಹೂಡಿಕೆದಾರರಿರಗೆ ಮನವರಿಕೆ ಮಾಡಿಕೊಡುವಂತಹ ಆತ್ಮ ವಿಶ್ವಾಸ ಹೆಚ್ಚಿಸುವ ಕ್ರಮ ಕೈಗೊಳ್ಳುವುದು ಇತ್ಯಾದಿ.

ಈ ನೆಲದ ಅರ್ಥಶಾಸ್ತ್ರಜ್ಞ ಡಾ. ಡಿ. ಎಂ ನಂಜುಂಡಪ್ಪ ನವರ ಮಾತಿನಂತೆ ಭಾರತದ ಎಲ್ಲಾ ಸಮಸ್ಯೆಗಳಿಗೆ ಇರುವ ಉಪಾಯಗಳು ಸರಳ. ಜನರ ದುಡಿಮೆಗೆ ತಕ್ಕ ಪ್ರತಿಫಲ ದೊರಕಬೇಕು, ಅವರು ಹೆಚ್ಚಿನ ಹಣ ಉಳಿಸಬೇಕು, ಹಾಗೂ ವಸ್ತುಗಳು ಹಾಗೂ ಸೇವೆಗಳಿಗೆ ಬೇಡಿಕೆ ಕುಗ್ಗದಂತೆ ನೋಡುವುದು ಎಂಬ ಅವರ ಮಾತು ನಮ್ಮನ್ನು ಉಳಿಸೀತು.

ವಿಶ್ವ ಕಂಡ ಅತ್ಯಂತ ದೊಡ್ಡ ಆರ್ಥಿಕ ಹಿಂಜರಿತ ವೆನ್ನಲಾಗುವ ಗ್ರೇಟ್ ಡಿಪ್ರೆಷನ್ ಅಮೇರಿಕೆ ಯನ್ನು 1930ರ ದಶಕದಲ್ಲಿ ಕಾಡಿತು. ಜಗತ್ತಿನ ದೊಡ್ಡಣ್ಣ ಎನ್ನಿಸಿಕೊಂಡ ದೇಶ ಇತರರ ಕಣ್ಣಲ್ಲಿ ಸಣ್ಣವರಾಗಬೇಕಾಗಿ ಬಂತು.
ಅದನ್ನು ನಿಭಾಯಿಸಿ ಅಮೇರಿಕೆಯ ಆರ್ಥಿಕತೆಯನ್ನೂ ಹಾಗೂ ಅದರೊಟ್ಟಿಗೆ ವಿಶ್ವದ ಆರ್ಥಿಕತೆಯನ್ನು ಸಂಭಾಳಿಸಿದ ನಾಯಕ ಎಂದು ಅಮೇರಿಕೆಯ ಅಧ್ಯಕ್ಷ ಫ್ರ್ಯಾಂಕ್ಲಿನ್ ರೂಸವೆಲ್ಟ್ ನನ್ನು ಗುರುತಿಸಲಾಗುತ್ತದೆ.
ಅವನ ಒಂದು ಮಾತು ಇಲ್ಲಿ ನೆನಪಾಗುತ್ತದೆ.

ರೂಸವೆಲ್ಟ್ ಅವರು ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಾ ಅಮೇರಿಕನ್ನರು ಖರೀದಿ ಮಾಡಬೇಕು. ಅವರ ಖರೀದಿ ಯೊಂದೇ ನಮ್ಮನ್ನು ಉಳಿಸಲು ಸಾಧ್ಯ ಎಂದರು. ಆಗ ಲಿಂಡಾ ಜೇಮ್ಸ್ ಎಂಬ ಪತ್ರಕರ್ತರೊಬ್ಬರು ಏನನ್ನು ಖರೀದಿಸಬೇಕು ಎಂದು ಕೇಳಿದರಂತೆ. `ಏನಾದರೂ ಆಗಬಹುದು` ಅಂತ ಅಧ್ಯಕ್ಷರು ಉತ್ತರಿಸಿದರಂತೆ. ಮರುದಿನ ಪತ್ರಿಕೆಗಳಲ್ಲಿ `ಬೈ ಎನಿಥಿಂಗ್. ದ್ಯಾಟ್ ಈಸ್ ದ ನ್ಯೂ ಡೀಲ್’ (`ಏನನ್ನಾದರೂ ಖರೀದಿಸಿ. ಅದೊಂದೇ ಉಪಾಯ`) ಎಂಬ ಶೀರ್ಷಿಕೆ ರಾರಾಜಿಸಿತ್ತಂತೆ.

ಅವರ ಈ ಮಾತಿನಿಂದಲೇ ಕೊಳ್ಳುಬಾಕತನದ ಪರಿ ಆರಂಭವಾಯಿತು ಎನ್ನುವವರೂ ಇದ್ದಾರೆ.

ಇಂದಿನ ಭಾರತದ ವಿಷಯಕ್ಕೆ ಬಂದರೆ ಏನಾದರೂ ಆಗಿ ಮಾರುಕಟ್ಟೆ ಚೇತರಿಸಿಕೊಂಡರೆ ಸಾಕು. ಏನಾದರೂ ಆಗಲಿ ಅನ್ನುವವರಿದ್ದಾರೆ. ಅಷ್ಟೊಂದು ಪರಾಕಾಷ್ಟೆ ಬೇಡ.

ಚೇತರಿಕೆ ಆಗಲಿ, ಅದರೊಂದಿಗೆ ಸ್ವಲ್ಪ ಕೂಳುಬಾಕತನ ಕಮ್ಮಿಯಾಗಲಿ ಅಂತಲೂ ಅನ್ನಿಸುತ್ತದೆ. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...