Homeಮುಖಪುಟಬೇಡಿಕೆ ಕುಸಿತ - ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ - ಐ.ವಿ.ಗೌಲ್

ಬೇಡಿಕೆ ಕುಸಿತ – ಹಾಗೆಂದರೇನು? ’ಸುದ್ದಿಯೇನೇ, ಮನೋಲ್ಲಾಸಿನಿ’ – ಐ.ವಿ.ಗೌಲ್

- Advertisement -
- Advertisement -

ಮೊನ್ನೆ ಬಂದ ಮೂರು ಸಿನಿಮಾಗಳು ತಲಾ 120 ಕೋಟಿ ರೂಪಾಯಿ ಗಳಿಸಿವೆ. ಹೀಗಾಗಿ ನಮ್ಮ ದೇಶದ ಆರ್ಥಿಕ ಪರಿಸ್ಥಿತಿಗೆ ಯಾವುದೇ ತೊಂದರೆ ಆಗಿಲ್ಲ.

ಯುವ ಜನರಿಗೆ ಹೊಸ ವಿನ್ಯಾಸದ ಬಟ್ಟೆಗಳು ಬೇಕಾಗಿವೆ ಆದ್ದರಿಂದ ಅವರು ಹೊಸ ಬಟ್ಟೆ ಖರೀದಿಸುತ್ತಿಲ್ಲ.
ಮಧ್ಯ ವಯಸ್ಕರು ಓಲಾ, ಊಬರ್‌ಗಳಲ್ಲಿ ಓಡಾಡುತ್ತಿರುವುದರಿಂದ ಕಾರು, ಬೈಕು, ಟ್ರಕ್ಕು, ಟ್ರ್ಯಾಕ್ಟರು ಮಾರಾಟವಾಗುತ್ತಿಲ್ಲ

ಜಿಎಸ್‍ಟಿ ಸರಿಯಿಲ್ಲ. ಅದರಲ್ಲಿ ಕೆಲವು ಸಮಸ್ಯೆಗಳಿವೆ. ಅದರಿಂದ ತೆರಿಗೆ ಸಂಗ್ರಹ ಸರಿಯಾಗಬಹುದೆಂದು ಅಂದುಕೊಂಡಿದ್ದೆವು. ಆಗಲಿಲ್ಲ, ಸಾರಿ. ಆದರೆ ಏನು ಮಾಡುವುದು, ಅದು ದೇಶದ ಕಾನೂನು. ಪಾಲಿಸಲೇ ಬೇಕು.

ಇಂತಹ ಮುತ್ತಿನ ಹಾರದಂತಹ ಮಾತುಗಳು ನಮ್ಮ ಕಿವಿ ತುಂಬಿ ನಮಗೆ ಕರ್ಣಾನಂದವಾಗುತ್ತಿದೆ.
ಇವನ್ನು ಯಾರು ಯಾರಿಗೆ ಹೇಳಿದರು ಎನ್ನುವ ಪ್ರಶ್ನೆಗಳಿಗೆ ಪಾಸಿಂಗ್ ಮಾರ್ಕೂ ಬರುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತು.

ಒಟ್ಟಿನಲ್ಲಿ ಈಗ ಇಡೀ ದೇಶದ ತುಂಬ ಆರ್ಥಿಕ ಪರಿಸ್ಥಿತಿಯ ಸುದ್ದಿ. ಅರ್ಥದ ಸುದ್ದಿ ಹಾಗೂ ಅದರ ಅರ್ಥದ ಸುದ್ದಿ.
ಬರೀ ಅರ್ಥಾರ್ಥದ ಮಾತು.
ಯಾಕೆ?
ಹಿಗ್ಸ – ಬಾಸಾನ್ ಎಂಬ ಪರಮಾಣು ಭಾಗವನ್ನು, ದೇವ ಕಣ ಎಂದು ಕನ್ನಡ ಪತ್ರಿಕೆಗಳ ಭಾಷಾಂತರಕಾರರಿಂದ ಕರೆಯಲ್ಪಟ್ಟ ಅಣುವಿನ ತುಂಡಿನ ಬಗ್ಗೆ ಸಂಶೋಧಿಸಿದ ವಿಜ್ಞಾನಿ ಹಿಗ್ಸ ಅವರನ್ನು ಬ್ರಿಟಿಷ್ ಟಿವಿ ಚಾನಲ್ ಒಂದು ಮಾತಾಡಿಸಿತು.

ಈ ದೇವಕಣದ ಬಗ್ಗೆ ನೀವು ಸರಳ ಭಾಷೆಯಲ್ಲಿ 30 ಸೆಕೆಂಡುಗಳಲ್ಲಿ ಎಲ್ಲರೂ ತಿಳಿಯುವಂತೆ ಹೇಳಬಲ್ಲಿರಾ ಎಂದು ಸಂದರ್ಶಕ ಕೇಳಿದ.

`ಇಲ್ಲ. ಸಾಧ್ಯವಿಲ್ಲ` ಎಂದು ಅವರು ಹೇಳಿದರು. ಇಬ್ಬರೂ ನಕ್ಕರು.
ಈಗ ಭಾರತದ ಆರ್ಥಿಕ ವ್ಯವಸ್ಥೆಯನ್ನು ಕಾಡುತ್ತಿರುವ ಸಮಸ್ಯೆಯನ್ನು ಸರಳವಾಗಿ, ಎಲ್ಲರಿಗೂ ತಿಳಿಯುಂತೆ, ಕೆಲವೇ ಶಬ್ದಗಳಲ್ಲಿ ತಿಳಿಸಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಆರ್ಥಿಕ ತಜ್ಞರು ಇಲ್ಲ, ಸಾಧ್ಯವೇ ಇಲ್ಲ ಅಂತ ಹೇಳಬಹುದೇನೋ. ಪ್ರಶ್ನೆ ಕೇಳಿದವರು, ಉತ್ತರ ಕೊಟ್ಟವರು, ಇಬ್ಬರೂ ನಗಲಾರದೇ ಮಾತು ಮುಗಿಸಬಹುದೇನೋ.

ನಮ್ಮ ವಾರ್ಷಿಕ ಬೆಳವಣಿಗೆಯ ದರ ಕಡಿಮೆ ಆಗಿರುವುದಕ್ಕೂ, ನಿರುದ್ಯೋಗ ಬೆಳೆಯುತ್ತಿರುವುದಕ್ಕೂ, ಸಾಲ ಹೆಚ್ಚಾಗಿ, ಉತ್ಪನ್ನ ಕಡಿಮೆಯಾಗಿ ಷೇರು ಮಾರುಕಟ್ಟೆ ನಷ್ಟ ಅನುಭವಿಸುತ್ತಿರುವುದಕ್ಕೂ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲು ನಮ್ಮ ರಫ್ತು ಭಾಗೀದಾರಿಕೆ ಕಡಿಮೆ ಆಗುತ್ತಿರುವುದಕ್ಕೂ ಅನೇಕ ಕಾರಣಗಳಿರಬಹುದು.
ತಿಳಿದವರು ಅದನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳುತ್ತಿರಬಹುದು. ತಮ್ಮ ವಾದವನ್ನು ಬೆಂಬಲಿಸಲು ಅವರು ತಮ್ಮದೇ ಆದ ಸಿದ್ಧಾಂತಗಳನ್ನು ನೆಚ್ಚಿಕೊಂಡಿರಬಹುದು.

ಅಂತಹ ಅನೇಕ ವಾದಗಳಲ್ಲಿ ಒಂದು `ಡಿಮಾಂಡ್ ಸ್ಲಂಪ್` ಅಥವಾ `ಬೇಡಿಕೆ ಕುಸಿತದ` ಸಿದ್ಧಾಂತ.
ಅದು ಸರಿಯೋ ತಪ್ಪೋ ಎನ್ನುವ ಮಾತಿಗೆ ಹೋಗದೇ ಇಲ್ಲಿ ನೋಡೋಣ.

ಇದರ ಸರಳಾರ್ಥವೆಂದರೆ ಜನರ ದುಡ್ಡು ಮಾರುಕಟ್ಟೆಯಲ್ಲಿ ಖರ್ಚಾಗುತ್ತಿಲ್ಲ. ಜನ ಖರೀದಿ ಮಾಡುತ್ತಿಲ್ಲ. ಇರಲಾರದವರಿಗೆ ದುಡ್ಡು ಹುಟ್ಟುತ್ತಿಲ್ಲ, ಇದ್ದವರಿಗೆ ಮುಂದೇನಾಗಬಹುದೋ ಎಂಬ ಆತಂಕದಿಂದ ಸುಮ್ಮನಿದ್ದಾರೆ. ಒಂದರಿಂದ ಶುರುವಾದ ಸೋಂಕು ಇನ್ನೊಂದಕ್ಕೆ ಹರಡುವಂತೆ, ಒಂದು ಕ್ಷೇತ್ರದ ಹಿಂಜರಿತ ಇನ್ನೊಂದು ಕ್ಷೇತ್ರಕ್ಕೆ ಹರಡಿ ಇಡೀ ದೇಶವನ್ನು ಆವರಿಸಿಕೊಂಡಿದೆ ಎನ್ನುವರಿದ್ದಾರೆ.
ಅವರ ಪ್ರಕಾರ ಇದರ ಮೂಲ ಕಾರಣಗಳು ಇವು.

ಮೊದಲನೇಯದಾಗಿ ದುಡಿಯುವ ಜನರ ಕೈಗೆ ಕೆಲಸ ಕೊಟ್ಟು ಸಂಪತ್ತು ಸೃಷ್ಟಿಸುವುದನ್ನು ಬಿಟ್ಟು ಬಂಡವಾಳ ಮೂಲಗಳು ನೌಕರರ ಸಂಖ್ಯೆಯನ್ನು ಕಮ್ಮಿ ಮಾಡಿ ಹೂಡಿಕೆದಾರರ ಹಿತಾಸಕ್ತಿಯನ್ನು ಸಂರಕ್ಷಿಸುವ ಏಕೈಕ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಸೃಷ್ಟಿಸಿದ್ದು.

ವಿಶ್ವವನ್ನೇ ಒಂದು ಮಾರುಕಟ್ಟೆ ಮಾಡುವ ಉದ್ದೇಶದಿಂದ ಸೃಜಿಸಲಾದ ವಿಶ್ವ ಬ್ಯಾಂಕು, ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರದೇಶವಾರು ಮಾರುಕಟ್ಟೆ ಒಪ್ಪಂದಗಳು, ಇವೆಲ್ಲ ಸೇರಿ ಯಾವುದೇ ದೇಶಕ್ಕೆ ಆರ್ಥಿಕ ಸ್ವಾತಂತ್ರ್ಯ ಇಲ್ಲದೇ ಹೋದದ್ದು. ಈ ಗುಂಪುಗಳ ಕೆಲವು ಸದಸ್ಯರಾಷ್ಟ್ರಗಳ ಬಲಹೀನತೆಗಳು ಎಲ್ಲ ಸದಸ್ಯರನ್ನೂ, ಸದಸ್ಯರಲ್ಲದವರನ್ನೂ ಕಾಡಲು ಆರಂಭಿಸಿದ್ದು.

ಬ್ಯಾಂಕಿಂಗ್, ವಿಮೆ, ಗೃಹೋಪಯೋಗಿ ವಸ್ತುಗಳ ಉತ್ಪಾದನೆ ಇತ್ಯಾದಿ ಕೆಲ ಕ್ಷೇತ್ರಗಳ ಸಂಸ್ಥೆಗಳ ಅತಿ ಮೌಲ್ಯೀಕರಣ ಓವರ್ ವ್ಯಾಲುಏಷನ್. ಇವುಗಳಿಗೆ ತಾವು ಅರಗಿಸಿಕೊಳ್ಳಲು ಸಾಧ್ಯವಿರುವುದಕ್ಕಿಂತ ಹೆಚ್ಚಿನ ಬಂಡವಾಳ ಹರಿದು ಬಂದು, ನಿರೀಕ್ಷಿತ ಲಾಭ ಅಥವಾ ಉತ್ಪನ್ನ ಬರದೇ ಹೋದದ್ದು
ಕೊಳ್ಳುಬಾಕುತನ ಅತಿಯಾಗಿ ಜನ ಖರೀದಿಸಲು ಸಾಧ್ಯವಿದ್ದಕ್ಕಿಂತ ಹೆಚ್ಚು ಉತ್ಪಾದನೆ ಆಗಿ ಸಾಮಾನುಗಳು ಮಾರುಕಟ್ಟೆಯಲ್ಲಿ ಬಿಕರಿಯಾಗದೇ ಉಳಿದಿರುವುದು
ಇತ್ಯಾದಿ

ಇದರ ಉಪಾಯಗಳೇನು?
ಅರ್ಥಶಾಸ್ತ್ರಜ್ಞೆ ಜಯಂತಿ ಘೋಷ್, ಶ್ರೀನಿವಾಸ್ ರಾಘವನ್ ಮತ್ತು ಇತರರು ಮೊನ್ನೆ ಒಂದು ವಿಚಾರ ಸಂಕಿರಣದಲ್ಲಿ ಹೇಳಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾರ್ವಜನಿಕ ಕ್ಷೇತ್ರದಲ್ಲಿ ಖರ್ಚನ್ನು ಹೆಚ್ಚಿಸಿ, ಸರಕಾರಿ ಉದ್ದಿಮೆಗಳನ್ನು ಚುರುಕಾಗಿಸಿ, ಉದ್ಯೋಗ ಖಾತ್ರಿ ಯಂತಹ ಯೋಜನೆಗಳಿಂದ ಹಳ್ಳಿಗಳ ಜನರ ಕೈಯಲ್ಲಿ ಹೆಚ್ಚಿನ ಹಣ ಹರಿಯುವಂತೆ ಮಾಡುವುದು, ಒಂದು ಉಪಾಯ. ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಸೃಷ್ಟಿ ಮುಂತಾದ ಕ್ಷೇತ್ರಗಳಲ್ಲಿ ಸರಕಾರಿ ಖರ್ಚನ್ನು ಹೆಚ್ಚಿಸುವುದು ಇನ್ನೊಂದು ಉಪಾಯ
ಭಾರತೀಯ ಅರ್ಥವ್ಯವಸ್ಥೆ ತೇಜಿ ಇರುವ ಚುರುಕಾದ, ಲಾಭ ಗಳಿಸಿಕೊಳ್ಳಬಲ್ಲಂತಹ ವ್ಯವಸ್ಥೆ ಎಂದು ಹೂಡಿಕೆದಾರರಿರಗೆ ಮನವರಿಕೆ ಮಾಡಿಕೊಡುವಂತಹ ಆತ್ಮ ವಿಶ್ವಾಸ ಹೆಚ್ಚಿಸುವ ಕ್ರಮ ಕೈಗೊಳ್ಳುವುದು ಇತ್ಯಾದಿ.

ಈ ನೆಲದ ಅರ್ಥಶಾಸ್ತ್ರಜ್ಞ ಡಾ. ಡಿ. ಎಂ ನಂಜುಂಡಪ್ಪ ನವರ ಮಾತಿನಂತೆ ಭಾರತದ ಎಲ್ಲಾ ಸಮಸ್ಯೆಗಳಿಗೆ ಇರುವ ಉಪಾಯಗಳು ಸರಳ. ಜನರ ದುಡಿಮೆಗೆ ತಕ್ಕ ಪ್ರತಿಫಲ ದೊರಕಬೇಕು, ಅವರು ಹೆಚ್ಚಿನ ಹಣ ಉಳಿಸಬೇಕು, ಹಾಗೂ ವಸ್ತುಗಳು ಹಾಗೂ ಸೇವೆಗಳಿಗೆ ಬೇಡಿಕೆ ಕುಗ್ಗದಂತೆ ನೋಡುವುದು ಎಂಬ ಅವರ ಮಾತು ನಮ್ಮನ್ನು ಉಳಿಸೀತು.

ವಿಶ್ವ ಕಂಡ ಅತ್ಯಂತ ದೊಡ್ಡ ಆರ್ಥಿಕ ಹಿಂಜರಿತ ವೆನ್ನಲಾಗುವ ಗ್ರೇಟ್ ಡಿಪ್ರೆಷನ್ ಅಮೇರಿಕೆ ಯನ್ನು 1930ರ ದಶಕದಲ್ಲಿ ಕಾಡಿತು. ಜಗತ್ತಿನ ದೊಡ್ಡಣ್ಣ ಎನ್ನಿಸಿಕೊಂಡ ದೇಶ ಇತರರ ಕಣ್ಣಲ್ಲಿ ಸಣ್ಣವರಾಗಬೇಕಾಗಿ ಬಂತು.
ಅದನ್ನು ನಿಭಾಯಿಸಿ ಅಮೇರಿಕೆಯ ಆರ್ಥಿಕತೆಯನ್ನೂ ಹಾಗೂ ಅದರೊಟ್ಟಿಗೆ ವಿಶ್ವದ ಆರ್ಥಿಕತೆಯನ್ನು ಸಂಭಾಳಿಸಿದ ನಾಯಕ ಎಂದು ಅಮೇರಿಕೆಯ ಅಧ್ಯಕ್ಷ ಫ್ರ್ಯಾಂಕ್ಲಿನ್ ರೂಸವೆಲ್ಟ್ ನನ್ನು ಗುರುತಿಸಲಾಗುತ್ತದೆ.
ಅವನ ಒಂದು ಮಾತು ಇಲ್ಲಿ ನೆನಪಾಗುತ್ತದೆ.

ರೂಸವೆಲ್ಟ್ ಅವರು ತಮ್ಮ ಬೆಂಬಲಿಗರ ಸಭೆಯಲ್ಲಿ ಮಾತನಾಡುತ್ತಾ ಅಮೇರಿಕನ್ನರು ಖರೀದಿ ಮಾಡಬೇಕು. ಅವರ ಖರೀದಿ ಯೊಂದೇ ನಮ್ಮನ್ನು ಉಳಿಸಲು ಸಾಧ್ಯ ಎಂದರು. ಆಗ ಲಿಂಡಾ ಜೇಮ್ಸ್ ಎಂಬ ಪತ್ರಕರ್ತರೊಬ್ಬರು ಏನನ್ನು ಖರೀದಿಸಬೇಕು ಎಂದು ಕೇಳಿದರಂತೆ. `ಏನಾದರೂ ಆಗಬಹುದು` ಅಂತ ಅಧ್ಯಕ್ಷರು ಉತ್ತರಿಸಿದರಂತೆ. ಮರುದಿನ ಪತ್ರಿಕೆಗಳಲ್ಲಿ `ಬೈ ಎನಿಥಿಂಗ್. ದ್ಯಾಟ್ ಈಸ್ ದ ನ್ಯೂ ಡೀಲ್’ (`ಏನನ್ನಾದರೂ ಖರೀದಿಸಿ. ಅದೊಂದೇ ಉಪಾಯ`) ಎಂಬ ಶೀರ್ಷಿಕೆ ರಾರಾಜಿಸಿತ್ತಂತೆ.

ಅವರ ಈ ಮಾತಿನಿಂದಲೇ ಕೊಳ್ಳುಬಾಕತನದ ಪರಿ ಆರಂಭವಾಯಿತು ಎನ್ನುವವರೂ ಇದ್ದಾರೆ.

ಇಂದಿನ ಭಾರತದ ವಿಷಯಕ್ಕೆ ಬಂದರೆ ಏನಾದರೂ ಆಗಿ ಮಾರುಕಟ್ಟೆ ಚೇತರಿಸಿಕೊಂಡರೆ ಸಾಕು. ಏನಾದರೂ ಆಗಲಿ ಅನ್ನುವವರಿದ್ದಾರೆ. ಅಷ್ಟೊಂದು ಪರಾಕಾಷ್ಟೆ ಬೇಡ.

ಚೇತರಿಕೆ ಆಗಲಿ, ಅದರೊಂದಿಗೆ ಸ್ವಲ್ಪ ಕೂಳುಬಾಕತನ ಕಮ್ಮಿಯಾಗಲಿ ಅಂತಲೂ ಅನ್ನಿಸುತ್ತದೆ. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...