Homeಕರ್ನಾಟಕಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

ಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

- Advertisement -
- Advertisement -

ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಹಾಸ್ಟೆಲ್‍ಗಳಲ್ಲಿ ಸಮರ್ಪಕ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜುಲೈ 18ರ ಗುರುವಾರದಂದು ರಾಜ್ಯದ ನಾನಾ ಭಾಗಗಳಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ಪ್ರತಿಭಟನೆ/ಮನವಿ ನೀಡುವ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಸಂಚಾಲಕ ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

1. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೂ ದಾಖಲಾತಿ ಖಾತ್ರಿ ಮಾಡಬೇಕು ಎನ್ನುವ ಆದೇಶವಿದ್ದರೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಅಲ್ಲದೆ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ದೂರದ ಅಂತರವೂ ಹೆಚ್ಚಿದ್ದು ವಿದ್ಯಾರ್ಥಿಗಳಿಗೆ ಸಹಜವಾಗಿಯೇ ತೊಂದರೆಯಾಗುತ್ತಿದೆ. ಹಾಗಾಗಿ ಈ ಶೈಕ್ಷಣಿಕ ವರ್ಷ ಪ್ರಾರಂಭದ ಮುಂಚಿತವಾಗಿಯೇ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ಎಲ್ಲಾ ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಶಿಫಾರಸ್ಸನ್ನು ಸರ್ಕಾರಕ್ಕೆ ಮಾಡಬೇಕು ಮತ್ತು ಈ ತಕ್ಷಣಕ್ಕೆ ಖಾಸಗಿ ಕಟ್ಟಡಗಳನ್ನಾದರೂ ಬಾಡಿಗೆ ಪಡೆದು ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೆ 3-4 ವಿದ್ಯಾರ್ಥಿಗಳು ಇರುವಂತ ಅಧ್ಯಾಯನ ಸ್ನೇಹಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಬೇಕು.

2. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ತಮ್ಮ ಶೈಕ್ಷಣಿಕ ಪಠ್ಯಗಳು, ನಿಯತಕಾಲಿಕ ಪತ್ರಿಕೆ ಹಾಗೂ ವೈಚಾರಿಕ ಸಾಹಿತ್ಯಗಳ ಪುಸ್ತಕಗಳು ದೊರೆಯುವಂತ ಗ್ರಂಥಾಲಯವನ್ನು ನಿರ್ಮಿಸಬೇಕು.

3. ಬೇಳೆಕಾಳುಗಳು, ಸೊಪ್ಪು ತರಕಾರಿಯುಕ್ತ ಗುಣಮಟ್ಟದ ಆಹಾರದ ಜೊತೆಗೆ, ವಾರಕ್ಕೊಂದು ಮೊಟ್ಟೆ, ಸಿಹಿಯೂಟ, ಬಾಳೆಹಣ್ಣು ಹಾಗೂ 15 ದಿನಕ್ಕೊಮ್ಮೆ ಮಾಂಸದೂಟವನ್ನು ನೀಡಬೇಕು.

4. ನಿಲಯದಲ್ಲಿ ಶುಚಿತ್ವ ಬಹಳ ಮುಖ್ಯವಾಗಿದ್ದು, ನಿಲಯದ ಆವರಣ, ಶೌಚಾಲಯವನ್ನು ನಿತ್ಯ ಶುಚಿ ಮಾಡುವದನ್ನು ಖಾತ್ರಿಗೊಳಿಸಬೇಕು. ಮತ್ತು ಶುಚಿಗೊಳಿಸುವ ನೌಕರರನ್ನು ಘನತೆಯುಕ್ತ ಸಂಬಳದ ಜೊತೆ ಖಾಯಂ ನೌಕಕರನ್ನಾಗಿ ಮಾಡಿಕೊಳ್ಳವ ನಿಟ್ಟಿನಲ್ಲಿ ಇಲಾಖೆಯು ಗಮನಹರಿಸಬೇಕು.

ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಹೈದರಾಬಾದ್‍ನಲ್ಲಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ: ಕಾಲೇಜು ಮುಚ್ಚಿದ ಆಡಳಿತ ಮಂಡಳಿ

ಹೈದರಾಬಾದ್ ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ (ಟಿಐಎಸ್ಎಸ್) ಆಡಳಿತವ ಮಂಡಳಿ ಮತ್ತು ಅಲ್ಲಿನ ವಿದ್ಯಾರ್ಥಿಗಳ ನಡುವೆ ಹಾಸ್ಟೆಲ್ ಫೀಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಈಗ ಮುಂದಿನ ಆದೇಶದವರೆಗೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇದಾದ ನಂತರ, ‘ಕ್ಯಾಂಪಸ್ ವಿದ್ಯಾರ್ಥಿ ಕ್ರಿಯಾ ಸಮಿತಿ’ ಸದಸ್ಯರು ತಮ್ಮ ಪ್ರತಿಭಟನೆಯನ್ನು ಹಾಸ್ಟೆಲ್‌ಗಳಿಂದ ಮುಂದುವರಿಸುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನಿಂದ ಹಾಸ್ಟೆಲ್ ಅನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಜೊತೆಗೆ ತಿಂಗಳಿಗೆ 8500ರೂನಂತೆ ಆರು ತಿಂಗಳ ಒಂದು ಸೆಮಿಸ್ಟರ್ ನ 52000 ಹಣವನ್ನು ಒಟ್ಟಿಗೆ ಮೊದಲೇ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಇಷ್ಟೊಂದು ಶುಲ್ಕ ಹೆಚ್ಚಳ ವನ್ನು ಖಂಡಿಸಿ ಜುಲೈ 8 ರಿಂದಲೂ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇದರಿಂದ ಕ್ರೋಧಗೊಂಡ ಆಡಳಿತ ಮಂಡಳಿ ಮುಂಬೈ ಶಾಖೆಯ ನಿರ್ದೇಶನದಂತೆ ಕಾಲೇಜುಗಳನ್ನು ಮುಚ್ಚಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಊರಿಗೋಗುವಂತೆ ಆದೇಶಿಸಲಾಗಿದೆ. ಅವರ ಪೋಷಕರಿಗೂ ಕೂಡ ಸಂದೇಶ ಕಳುಹಿಸಲಾಗಿದೆ.

ಈ ಧೀರೋದಾತ್ತ ಹೋರಾಟ ನಡೆಸಿದ ನನ್ನ ಗೆಳೆಯರಿಗೆಲ್ಲಾ ಅಭಿನಂದನೆಗಳನ್ನು ತಿಳಿಸುತ್ತೇನೆ. ವಿದ್ಯಾರ್ಥಿಗಳನ್ನು ಸುಲಿಗೆ ಮಾಡುವ ಮೂಲಕ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಸರ್ಕಾರ ಮತ್ತು ಆಡಳಿತ ಮಂಡಳಿಗಳು ಪ್ರಯತ್ನಿಸುತ್ತಿವೆ. ಇಂತಹ ದುರಂತ ಸಮಯದಲ್ಲಿ ವಿದ್ಯಾರ್ಥಿಗಳ ಹೋರಾಟವೊಂದೆ ನಮಗೆ ಬೆಳಕಾಗಿದೆ, ನಾವು ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಇಷ್ಟು ಮಾತ್ರ ಹಾಸ್ಟೆಲ್ ಗಳಲ್ಲಿರುವ ಸಮಸ್ಯೆಗಳಲ್ಲ.ಬಹಳ ಮುಖ್ಯವಾಗಿರುವಂತದ್ದು ಹಾಸ್ಟೆಲ್ ಗಳಲ್ಲಿ ಹೊರಗಿನ‌ ವಿದ್ಯಾರ್ಥಿಗಳು ತುಂಬಾ ಹೆಚ್ಚಿಗೆ ಉಳಿದು ಬಿಟ್ಟಿದೆ,ಅಲ್ಲಿನ ಯಾವುದೇ ಒಂದು ಮೇಲ್ವಿಚಾರಕ ರಾಗಿರಲಿ ಅಥವಾ ಸಹಭಾಗಿ ಯಾಗಿರುವಂತಹ ತಾಲೂಕು ಮೇಲ್ವಿಚಾರಕ ರಾಗಿರಲಿ ಇದರ ಬಗ್ಗೆ ಗಮನವನ್ನು ನೀಡುತ್ತಿಲ್ಲ.ಆ ಹೊರಗಿನ‌ ವಿದ್ಯಾರ್ಥಿಗಳು ಇರಲು ಇವರ ಸಹಕಾರವು ಇದೆ ಎನ್ನುವುದು ಖಚಿತ. ಈ ಗೆಸ್ಟ್ ಸ್ಟೂಡೆಂಟ್ಟ್ಸ್ (ಪ್ರವೇಶವಿಲ್ಲದ ವಿದ್ಯಾರ್ಥಿಗಳು) ಇವರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕುವಂತೆ ಕೂಡ ಸರ್ಕಾರಕ್ಕೆ ಒತ್ತಾಯ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...