Homeಕರ್ನಾಟಕಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

ಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

- Advertisement -
- Advertisement -

ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಹಾಸ್ಟೆಲ್‍ಗಳಲ್ಲಿ ಸಮರ್ಪಕ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜುಲೈ 18ರ ಗುರುವಾರದಂದು ರಾಜ್ಯದ ನಾನಾ ಭಾಗಗಳಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ಪ್ರತಿಭಟನೆ/ಮನವಿ ನೀಡುವ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಸಂಚಾಲಕ ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

1. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೂ ದಾಖಲಾತಿ ಖಾತ್ರಿ ಮಾಡಬೇಕು ಎನ್ನುವ ಆದೇಶವಿದ್ದರೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಅಲ್ಲದೆ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ದೂರದ ಅಂತರವೂ ಹೆಚ್ಚಿದ್ದು ವಿದ್ಯಾರ್ಥಿಗಳಿಗೆ ಸಹಜವಾಗಿಯೇ ತೊಂದರೆಯಾಗುತ್ತಿದೆ. ಹಾಗಾಗಿ ಈ ಶೈಕ್ಷಣಿಕ ವರ್ಷ ಪ್ರಾರಂಭದ ಮುಂಚಿತವಾಗಿಯೇ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ಎಲ್ಲಾ ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಶಿಫಾರಸ್ಸನ್ನು ಸರ್ಕಾರಕ್ಕೆ ಮಾಡಬೇಕು ಮತ್ತು ಈ ತಕ್ಷಣಕ್ಕೆ ಖಾಸಗಿ ಕಟ್ಟಡಗಳನ್ನಾದರೂ ಬಾಡಿಗೆ ಪಡೆದು ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೆ 3-4 ವಿದ್ಯಾರ್ಥಿಗಳು ಇರುವಂತ ಅಧ್ಯಾಯನ ಸ್ನೇಹಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಬೇಕು.

2. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ತಮ್ಮ ಶೈಕ್ಷಣಿಕ ಪಠ್ಯಗಳು, ನಿಯತಕಾಲಿಕ ಪತ್ರಿಕೆ ಹಾಗೂ ವೈಚಾರಿಕ ಸಾಹಿತ್ಯಗಳ ಪುಸ್ತಕಗಳು ದೊರೆಯುವಂತ ಗ್ರಂಥಾಲಯವನ್ನು ನಿರ್ಮಿಸಬೇಕು.

3. ಬೇಳೆಕಾಳುಗಳು, ಸೊಪ್ಪು ತರಕಾರಿಯುಕ್ತ ಗುಣಮಟ್ಟದ ಆಹಾರದ ಜೊತೆಗೆ, ವಾರಕ್ಕೊಂದು ಮೊಟ್ಟೆ, ಸಿಹಿಯೂಟ, ಬಾಳೆಹಣ್ಣು ಹಾಗೂ 15 ದಿನಕ್ಕೊಮ್ಮೆ ಮಾಂಸದೂಟವನ್ನು ನೀಡಬೇಕು.

4. ನಿಲಯದಲ್ಲಿ ಶುಚಿತ್ವ ಬಹಳ ಮುಖ್ಯವಾಗಿದ್ದು, ನಿಲಯದ ಆವರಣ, ಶೌಚಾಲಯವನ್ನು ನಿತ್ಯ ಶುಚಿ ಮಾಡುವದನ್ನು ಖಾತ್ರಿಗೊಳಿಸಬೇಕು. ಮತ್ತು ಶುಚಿಗೊಳಿಸುವ ನೌಕರರನ್ನು ಘನತೆಯುಕ್ತ ಸಂಬಳದ ಜೊತೆ ಖಾಯಂ ನೌಕಕರನ್ನಾಗಿ ಮಾಡಿಕೊಳ್ಳವ ನಿಟ್ಟಿನಲ್ಲಿ ಇಲಾಖೆಯು ಗಮನಹರಿಸಬೇಕು.

ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಹೈದರಾಬಾದ್‍ನಲ್ಲಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ: ಕಾಲೇಜು ಮುಚ್ಚಿದ ಆಡಳಿತ ಮಂಡಳಿ

ಹೈದರಾಬಾದ್ ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ (ಟಿಐಎಸ್ಎಸ್) ಆಡಳಿತವ ಮಂಡಳಿ ಮತ್ತು ಅಲ್ಲಿನ ವಿದ್ಯಾರ್ಥಿಗಳ ನಡುವೆ ಹಾಸ್ಟೆಲ್ ಫೀಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಈಗ ಮುಂದಿನ ಆದೇಶದವರೆಗೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇದಾದ ನಂತರ, ‘ಕ್ಯಾಂಪಸ್ ವಿದ್ಯಾರ್ಥಿ ಕ್ರಿಯಾ ಸಮಿತಿ’ ಸದಸ್ಯರು ತಮ್ಮ ಪ್ರತಿಭಟನೆಯನ್ನು ಹಾಸ್ಟೆಲ್‌ಗಳಿಂದ ಮುಂದುವರಿಸುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನಿಂದ ಹಾಸ್ಟೆಲ್ ಅನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಜೊತೆಗೆ ತಿಂಗಳಿಗೆ 8500ರೂನಂತೆ ಆರು ತಿಂಗಳ ಒಂದು ಸೆಮಿಸ್ಟರ್ ನ 52000 ಹಣವನ್ನು ಒಟ್ಟಿಗೆ ಮೊದಲೇ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಇಷ್ಟೊಂದು ಶುಲ್ಕ ಹೆಚ್ಚಳ ವನ್ನು ಖಂಡಿಸಿ ಜುಲೈ 8 ರಿಂದಲೂ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇದರಿಂದ ಕ್ರೋಧಗೊಂಡ ಆಡಳಿತ ಮಂಡಳಿ ಮುಂಬೈ ಶಾಖೆಯ ನಿರ್ದೇಶನದಂತೆ ಕಾಲೇಜುಗಳನ್ನು ಮುಚ್ಚಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಊರಿಗೋಗುವಂತೆ ಆದೇಶಿಸಲಾಗಿದೆ. ಅವರ ಪೋಷಕರಿಗೂ ಕೂಡ ಸಂದೇಶ ಕಳುಹಿಸಲಾಗಿದೆ.

ಈ ಧೀರೋದಾತ್ತ ಹೋರಾಟ ನಡೆಸಿದ ನನ್ನ ಗೆಳೆಯರಿಗೆಲ್ಲಾ ಅಭಿನಂದನೆಗಳನ್ನು ತಿಳಿಸುತ್ತೇನೆ. ವಿದ್ಯಾರ್ಥಿಗಳನ್ನು ಸುಲಿಗೆ ಮಾಡುವ ಮೂಲಕ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಸರ್ಕಾರ ಮತ್ತು ಆಡಳಿತ ಮಂಡಳಿಗಳು ಪ್ರಯತ್ನಿಸುತ್ತಿವೆ. ಇಂತಹ ದುರಂತ ಸಮಯದಲ್ಲಿ ವಿದ್ಯಾರ್ಥಿಗಳ ಹೋರಾಟವೊಂದೆ ನಮಗೆ ಬೆಳಕಾಗಿದೆ, ನಾವು ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಇಷ್ಟು ಮಾತ್ರ ಹಾಸ್ಟೆಲ್ ಗಳಲ್ಲಿರುವ ಸಮಸ್ಯೆಗಳಲ್ಲ.ಬಹಳ ಮುಖ್ಯವಾಗಿರುವಂತದ್ದು ಹಾಸ್ಟೆಲ್ ಗಳಲ್ಲಿ ಹೊರಗಿನ‌ ವಿದ್ಯಾರ್ಥಿಗಳು ತುಂಬಾ ಹೆಚ್ಚಿಗೆ ಉಳಿದು ಬಿಟ್ಟಿದೆ,ಅಲ್ಲಿನ ಯಾವುದೇ ಒಂದು ಮೇಲ್ವಿಚಾರಕ ರಾಗಿರಲಿ ಅಥವಾ ಸಹಭಾಗಿ ಯಾಗಿರುವಂತಹ ತಾಲೂಕು ಮೇಲ್ವಿಚಾರಕ ರಾಗಿರಲಿ ಇದರ ಬಗ್ಗೆ ಗಮನವನ್ನು ನೀಡುತ್ತಿಲ್ಲ.ಆ ಹೊರಗಿನ‌ ವಿದ್ಯಾರ್ಥಿಗಳು ಇರಲು ಇವರ ಸಹಕಾರವು ಇದೆ ಎನ್ನುವುದು ಖಚಿತ. ಈ ಗೆಸ್ಟ್ ಸ್ಟೂಡೆಂಟ್ಟ್ಸ್ (ಪ್ರವೇಶವಿಲ್ಲದ ವಿದ್ಯಾರ್ಥಿಗಳು) ಇವರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕುವಂತೆ ಕೂಡ ಸರ್ಕಾರಕ್ಕೆ ಒತ್ತಾಯ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...