Homeಕರ್ನಾಟಕಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

ಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

- Advertisement -
- Advertisement -

ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಹಾಸ್ಟೆಲ್‍ಗಳಲ್ಲಿ ಸಮರ್ಪಕ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜುಲೈ 18ರ ಗುರುವಾರದಂದು ರಾಜ್ಯದ ನಾನಾ ಭಾಗಗಳಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ಪ್ರತಿಭಟನೆ/ಮನವಿ ನೀಡುವ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಸಂಚಾಲಕ ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

1. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೂ ದಾಖಲಾತಿ ಖಾತ್ರಿ ಮಾಡಬೇಕು ಎನ್ನುವ ಆದೇಶವಿದ್ದರೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಅಲ್ಲದೆ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ದೂರದ ಅಂತರವೂ ಹೆಚ್ಚಿದ್ದು ವಿದ್ಯಾರ್ಥಿಗಳಿಗೆ ಸಹಜವಾಗಿಯೇ ತೊಂದರೆಯಾಗುತ್ತಿದೆ. ಹಾಗಾಗಿ ಈ ಶೈಕ್ಷಣಿಕ ವರ್ಷ ಪ್ರಾರಂಭದ ಮುಂಚಿತವಾಗಿಯೇ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ಎಲ್ಲಾ ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಶಿಫಾರಸ್ಸನ್ನು ಸರ್ಕಾರಕ್ಕೆ ಮಾಡಬೇಕು ಮತ್ತು ಈ ತಕ್ಷಣಕ್ಕೆ ಖಾಸಗಿ ಕಟ್ಟಡಗಳನ್ನಾದರೂ ಬಾಡಿಗೆ ಪಡೆದು ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೆ 3-4 ವಿದ್ಯಾರ್ಥಿಗಳು ಇರುವಂತ ಅಧ್ಯಾಯನ ಸ್ನೇಹಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಬೇಕು.

2. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ತಮ್ಮ ಶೈಕ್ಷಣಿಕ ಪಠ್ಯಗಳು, ನಿಯತಕಾಲಿಕ ಪತ್ರಿಕೆ ಹಾಗೂ ವೈಚಾರಿಕ ಸಾಹಿತ್ಯಗಳ ಪುಸ್ತಕಗಳು ದೊರೆಯುವಂತ ಗ್ರಂಥಾಲಯವನ್ನು ನಿರ್ಮಿಸಬೇಕು.

3. ಬೇಳೆಕಾಳುಗಳು, ಸೊಪ್ಪು ತರಕಾರಿಯುಕ್ತ ಗುಣಮಟ್ಟದ ಆಹಾರದ ಜೊತೆಗೆ, ವಾರಕ್ಕೊಂದು ಮೊಟ್ಟೆ, ಸಿಹಿಯೂಟ, ಬಾಳೆಹಣ್ಣು ಹಾಗೂ 15 ದಿನಕ್ಕೊಮ್ಮೆ ಮಾಂಸದೂಟವನ್ನು ನೀಡಬೇಕು.

4. ನಿಲಯದಲ್ಲಿ ಶುಚಿತ್ವ ಬಹಳ ಮುಖ್ಯವಾಗಿದ್ದು, ನಿಲಯದ ಆವರಣ, ಶೌಚಾಲಯವನ್ನು ನಿತ್ಯ ಶುಚಿ ಮಾಡುವದನ್ನು ಖಾತ್ರಿಗೊಳಿಸಬೇಕು. ಮತ್ತು ಶುಚಿಗೊಳಿಸುವ ನೌಕರರನ್ನು ಘನತೆಯುಕ್ತ ಸಂಬಳದ ಜೊತೆ ಖಾಯಂ ನೌಕಕರನ್ನಾಗಿ ಮಾಡಿಕೊಳ್ಳವ ನಿಟ್ಟಿನಲ್ಲಿ ಇಲಾಖೆಯು ಗಮನಹರಿಸಬೇಕು.

ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಹೈದರಾಬಾದ್‍ನಲ್ಲಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ: ಕಾಲೇಜು ಮುಚ್ಚಿದ ಆಡಳಿತ ಮಂಡಳಿ

ಹೈದರಾಬಾದ್ ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ (ಟಿಐಎಸ್ಎಸ್) ಆಡಳಿತವ ಮಂಡಳಿ ಮತ್ತು ಅಲ್ಲಿನ ವಿದ್ಯಾರ್ಥಿಗಳ ನಡುವೆ ಹಾಸ್ಟೆಲ್ ಫೀಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಈಗ ಮುಂದಿನ ಆದೇಶದವರೆಗೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇದಾದ ನಂತರ, ‘ಕ್ಯಾಂಪಸ್ ವಿದ್ಯಾರ್ಥಿ ಕ್ರಿಯಾ ಸಮಿತಿ’ ಸದಸ್ಯರು ತಮ್ಮ ಪ್ರತಿಭಟನೆಯನ್ನು ಹಾಸ್ಟೆಲ್‌ಗಳಿಂದ ಮುಂದುವರಿಸುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನಿಂದ ಹಾಸ್ಟೆಲ್ ಅನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಜೊತೆಗೆ ತಿಂಗಳಿಗೆ 8500ರೂನಂತೆ ಆರು ತಿಂಗಳ ಒಂದು ಸೆಮಿಸ್ಟರ್ ನ 52000 ಹಣವನ್ನು ಒಟ್ಟಿಗೆ ಮೊದಲೇ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಇಷ್ಟೊಂದು ಶುಲ್ಕ ಹೆಚ್ಚಳ ವನ್ನು ಖಂಡಿಸಿ ಜುಲೈ 8 ರಿಂದಲೂ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇದರಿಂದ ಕ್ರೋಧಗೊಂಡ ಆಡಳಿತ ಮಂಡಳಿ ಮುಂಬೈ ಶಾಖೆಯ ನಿರ್ದೇಶನದಂತೆ ಕಾಲೇಜುಗಳನ್ನು ಮುಚ್ಚಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಊರಿಗೋಗುವಂತೆ ಆದೇಶಿಸಲಾಗಿದೆ. ಅವರ ಪೋಷಕರಿಗೂ ಕೂಡ ಸಂದೇಶ ಕಳುಹಿಸಲಾಗಿದೆ.

ಈ ಧೀರೋದಾತ್ತ ಹೋರಾಟ ನಡೆಸಿದ ನನ್ನ ಗೆಳೆಯರಿಗೆಲ್ಲಾ ಅಭಿನಂದನೆಗಳನ್ನು ತಿಳಿಸುತ್ತೇನೆ. ವಿದ್ಯಾರ್ಥಿಗಳನ್ನು ಸುಲಿಗೆ ಮಾಡುವ ಮೂಲಕ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಸರ್ಕಾರ ಮತ್ತು ಆಡಳಿತ ಮಂಡಳಿಗಳು ಪ್ರಯತ್ನಿಸುತ್ತಿವೆ. ಇಂತಹ ದುರಂತ ಸಮಯದಲ್ಲಿ ವಿದ್ಯಾರ್ಥಿಗಳ ಹೋರಾಟವೊಂದೆ ನಮಗೆ ಬೆಳಕಾಗಿದೆ, ನಾವು ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಇಷ್ಟು ಮಾತ್ರ ಹಾಸ್ಟೆಲ್ ಗಳಲ್ಲಿರುವ ಸಮಸ್ಯೆಗಳಲ್ಲ.ಬಹಳ ಮುಖ್ಯವಾಗಿರುವಂತದ್ದು ಹಾಸ್ಟೆಲ್ ಗಳಲ್ಲಿ ಹೊರಗಿನ‌ ವಿದ್ಯಾರ್ಥಿಗಳು ತುಂಬಾ ಹೆಚ್ಚಿಗೆ ಉಳಿದು ಬಿಟ್ಟಿದೆ,ಅಲ್ಲಿನ ಯಾವುದೇ ಒಂದು ಮೇಲ್ವಿಚಾರಕ ರಾಗಿರಲಿ ಅಥವಾ ಸಹಭಾಗಿ ಯಾಗಿರುವಂತಹ ತಾಲೂಕು ಮೇಲ್ವಿಚಾರಕ ರಾಗಿರಲಿ ಇದರ ಬಗ್ಗೆ ಗಮನವನ್ನು ನೀಡುತ್ತಿಲ್ಲ.ಆ ಹೊರಗಿನ‌ ವಿದ್ಯಾರ್ಥಿಗಳು ಇರಲು ಇವರ ಸಹಕಾರವು ಇದೆ ಎನ್ನುವುದು ಖಚಿತ. ಈ ಗೆಸ್ಟ್ ಸ್ಟೂಡೆಂಟ್ಟ್ಸ್ (ಪ್ರವೇಶವಿಲ್ಲದ ವಿದ್ಯಾರ್ಥಿಗಳು) ಇವರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕುವಂತೆ ಕೂಡ ಸರ್ಕಾರಕ್ಕೆ ಒತ್ತಾಯ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...