Homeಕರ್ನಾಟಕಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

ಹಾಸ್ಟೆಲ್‍ಗಳಲ್ಲಿ ಗುಣಮಟ್ಟದ ಸೌಲಭ್ಯಗಳಿಗಾಗಿ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ಕೆವಿಎಸ್ ನಿಂದ ಪ್ರತಿಭಟನೆ

- Advertisement -
- Advertisement -

ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಹಾಸ್ಟೆಲ್‍ಗಳಲ್ಲಿ ಸಮರ್ಪಕ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜುಲೈ 18ರ ಗುರುವಾರದಂದು ರಾಜ್ಯದ ನಾನಾ ಭಾಗಗಳಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ಪ್ರತಿಭಟನೆ/ಮನವಿ ನೀಡುವ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಸಂಚಾಲಕ ಸರೋವರ್ ಬೆಂಕೀಕೆರೆ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

1. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೂ ದಾಖಲಾತಿ ಖಾತ್ರಿ ಮಾಡಬೇಕು ಎನ್ನುವ ಆದೇಶವಿದ್ದರೂ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಅಲ್ಲದೆ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ದೂರದ ಅಂತರವೂ ಹೆಚ್ಚಿದ್ದು ವಿದ್ಯಾರ್ಥಿಗಳಿಗೆ ಸಹಜವಾಗಿಯೇ ತೊಂದರೆಯಾಗುತ್ತಿದೆ. ಹಾಗಾಗಿ ಈ ಶೈಕ್ಷಣಿಕ ವರ್ಷ ಪ್ರಾರಂಭದ ಮುಂಚಿತವಾಗಿಯೇ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ಎಲ್ಲಾ ಪದವಿ ಶಿಕ್ಷಣ ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಶಿಫಾರಸ್ಸನ್ನು ಸರ್ಕಾರಕ್ಕೆ ಮಾಡಬೇಕು ಮತ್ತು ಈ ತಕ್ಷಣಕ್ಕೆ ಖಾಸಗಿ ಕಟ್ಟಡಗಳನ್ನಾದರೂ ಬಾಡಿಗೆ ಪಡೆದು ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೆ 3-4 ವಿದ್ಯಾರ್ಥಿಗಳು ಇರುವಂತ ಅಧ್ಯಾಯನ ಸ್ನೇಹಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಬೇಕು.

2. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ತಮ್ಮ ಶೈಕ್ಷಣಿಕ ಪಠ್ಯಗಳು, ನಿಯತಕಾಲಿಕ ಪತ್ರಿಕೆ ಹಾಗೂ ವೈಚಾರಿಕ ಸಾಹಿತ್ಯಗಳ ಪುಸ್ತಕಗಳು ದೊರೆಯುವಂತ ಗ್ರಂಥಾಲಯವನ್ನು ನಿರ್ಮಿಸಬೇಕು.

3. ಬೇಳೆಕಾಳುಗಳು, ಸೊಪ್ಪು ತರಕಾರಿಯುಕ್ತ ಗುಣಮಟ್ಟದ ಆಹಾರದ ಜೊತೆಗೆ, ವಾರಕ್ಕೊಂದು ಮೊಟ್ಟೆ, ಸಿಹಿಯೂಟ, ಬಾಳೆಹಣ್ಣು ಹಾಗೂ 15 ದಿನಕ್ಕೊಮ್ಮೆ ಮಾಂಸದೂಟವನ್ನು ನೀಡಬೇಕು.

4. ನಿಲಯದಲ್ಲಿ ಶುಚಿತ್ವ ಬಹಳ ಮುಖ್ಯವಾಗಿದ್ದು, ನಿಲಯದ ಆವರಣ, ಶೌಚಾಲಯವನ್ನು ನಿತ್ಯ ಶುಚಿ ಮಾಡುವದನ್ನು ಖಾತ್ರಿಗೊಳಿಸಬೇಕು. ಮತ್ತು ಶುಚಿಗೊಳಿಸುವ ನೌಕರರನ್ನು ಘನತೆಯುಕ್ತ ಸಂಬಳದ ಜೊತೆ ಖಾಯಂ ನೌಕಕರನ್ನಾಗಿ ಮಾಡಿಕೊಳ್ಳವ ನಿಟ್ಟಿನಲ್ಲಿ ಇಲಾಖೆಯು ಗಮನಹರಿಸಬೇಕು.

ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಹೈದರಾಬಾದ್‍ನಲ್ಲಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ: ಕಾಲೇಜು ಮುಚ್ಚಿದ ಆಡಳಿತ ಮಂಡಳಿ

ಹೈದರಾಬಾದ್ ನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ (ಟಿಐಎಸ್ಎಸ್) ಆಡಳಿತವ ಮಂಡಳಿ ಮತ್ತು ಅಲ್ಲಿನ ವಿದ್ಯಾರ್ಥಿಗಳ ನಡುವೆ ಹಾಸ್ಟೆಲ್ ಫೀಸಿನ ವಿಚಾರಕ್ಕೆ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು ಈಗ ಮುಂದಿನ ಆದೇಶದವರೆಗೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇದಾದ ನಂತರ, ‘ಕ್ಯಾಂಪಸ್ ವಿದ್ಯಾರ್ಥಿ ಕ್ರಿಯಾ ಸಮಿತಿ’ ಸದಸ್ಯರು ತಮ್ಮ ಪ್ರತಿಭಟನೆಯನ್ನು ಹಾಸ್ಟೆಲ್‌ಗಳಿಂದ ಮುಂದುವರಿಸುವುದಾಗಿ ಹೇಳಿದ್ದಾರೆ.

ಸದ್ಯಕ್ಕೆ ಟಿಐಎಸ್ಎಸ್ ಹೈದರಾಬಾದ್ ಕ್ಯಾಂಪಸ್ ನಿಂದ ಹಾಸ್ಟೆಲ್ ಅನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಜೊತೆಗೆ ತಿಂಗಳಿಗೆ 8500ರೂನಂತೆ ಆರು ತಿಂಗಳ ಒಂದು ಸೆಮಿಸ್ಟರ್ ನ 52000 ಹಣವನ್ನು ಒಟ್ಟಿಗೆ ಮೊದಲೇ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಇಷ್ಟೊಂದು ಶುಲ್ಕ ಹೆಚ್ಚಳ ವನ್ನು ಖಂಡಿಸಿ ಜುಲೈ 8 ರಿಂದಲೂ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇದರಿಂದ ಕ್ರೋಧಗೊಂಡ ಆಡಳಿತ ಮಂಡಳಿ ಮುಂಬೈ ಶಾಖೆಯ ನಿರ್ದೇಶನದಂತೆ ಕಾಲೇಜುಗಳನ್ನು ಮುಚ್ಚಿದೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಊರಿಗೋಗುವಂತೆ ಆದೇಶಿಸಲಾಗಿದೆ. ಅವರ ಪೋಷಕರಿಗೂ ಕೂಡ ಸಂದೇಶ ಕಳುಹಿಸಲಾಗಿದೆ.

ಈ ಧೀರೋದಾತ್ತ ಹೋರಾಟ ನಡೆಸಿದ ನನ್ನ ಗೆಳೆಯರಿಗೆಲ್ಲಾ ಅಭಿನಂದನೆಗಳನ್ನು ತಿಳಿಸುತ್ತೇನೆ. ವಿದ್ಯಾರ್ಥಿಗಳನ್ನು ಸುಲಿಗೆ ಮಾಡುವ ಮೂಲಕ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಸರ್ಕಾರ ಮತ್ತು ಆಡಳಿತ ಮಂಡಳಿಗಳು ಪ್ರಯತ್ನಿಸುತ್ತಿವೆ. ಇಂತಹ ದುರಂತ ಸಮಯದಲ್ಲಿ ವಿದ್ಯಾರ್ಥಿಗಳ ಹೋರಾಟವೊಂದೆ ನಮಗೆ ಬೆಳಕಾಗಿದೆ, ನಾವು ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇವಲ ಇಷ್ಟು ಮಾತ್ರ ಹಾಸ್ಟೆಲ್ ಗಳಲ್ಲಿರುವ ಸಮಸ್ಯೆಗಳಲ್ಲ.ಬಹಳ ಮುಖ್ಯವಾಗಿರುವಂತದ್ದು ಹಾಸ್ಟೆಲ್ ಗಳಲ್ಲಿ ಹೊರಗಿನ‌ ವಿದ್ಯಾರ್ಥಿಗಳು ತುಂಬಾ ಹೆಚ್ಚಿಗೆ ಉಳಿದು ಬಿಟ್ಟಿದೆ,ಅಲ್ಲಿನ ಯಾವುದೇ ಒಂದು ಮೇಲ್ವಿಚಾರಕ ರಾಗಿರಲಿ ಅಥವಾ ಸಹಭಾಗಿ ಯಾಗಿರುವಂತಹ ತಾಲೂಕು ಮೇಲ್ವಿಚಾರಕ ರಾಗಿರಲಿ ಇದರ ಬಗ್ಗೆ ಗಮನವನ್ನು ನೀಡುತ್ತಿಲ್ಲ.ಆ ಹೊರಗಿನ‌ ವಿದ್ಯಾರ್ಥಿಗಳು ಇರಲು ಇವರ ಸಹಕಾರವು ಇದೆ ಎನ್ನುವುದು ಖಚಿತ. ಈ ಗೆಸ್ಟ್ ಸ್ಟೂಡೆಂಟ್ಟ್ಸ್ (ಪ್ರವೇಶವಿಲ್ಲದ ವಿದ್ಯಾರ್ಥಿಗಳು) ಇವರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕುವಂತೆ ಕೂಡ ಸರ್ಕಾರಕ್ಕೆ ಒತ್ತಾಯ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....