Homeಕರ್ನಾಟಕಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

- Advertisement -
- Advertisement -

ಜನಸಂಖ್ಯಾಗನುಗುಣವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಒಕ್ಕಲಿಗ ಸಮುದಾಯ ಹೋರಾಟದ ಸೂಚನೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.

ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ. ಕಾಲಮಿತಿಯೊಳಗೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಒಕ್ಕಲಿಗರೆಲ್ಲರೂ ಪಕ್ಷಭೇದ ಮರೆತು, ವೈಷಮ್ಯಗಳನ್ನು ಪಕ್ಕಕ್ಕಿಟ್ಟು ಪೂಜ್ಯರ ನಾಯಕತ್ವದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಕ್ಕಲಿಗರ ಮೀಸಲಾತಿ ವಿಚಾರವಾಗಿ ಎಲ್ಲರ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲು ಈ ಸಭೆ ನಡೆಸಲಾಗುತ್ತಿದೆ. ಈ ಸಭೆ ನೋಡಿದ ನಂತರ ನನಗೆ ಒಂದು ಮಾತು ನೆನಪಾಗುತ್ತಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಹೋರಾಟ ಮಾಡುವುದು ಯಶಸ್ಸು” ಎಂದಿದ್ದಾರೆ.

“ನಾವು ಹುಟ್ಟುವಾಗ ಇಂತಹುದೆ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಹುಟ್ಟುವಾಗ ಉಸಿರು ಇರುತ್ತದೆ, ಆದರೆ ಹೆಸರು ಇರುವುದಿಲ್ಲ. ಸತ್ತಾಗ ಹೆಸರು ಇರುತ್ತದೆ, ಆದರೆ ಉಸಿರೇ ಇರುವುದಿಲ್ಲ. ಹುಟ್ಟು ಸಾವಿನ ಮಧ್ಯೆ ನಾವು ನಮ್ಮ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟು ಹೋಗಬೇಕು” ಎಂದು ಆಶಿಸಿದ್ದಾರೆ.

“ನಮ್ಮ ತಂದೆ, ತಾಯಿಗಳಿಂದ ನಾವು ಒಕ್ಕಲಿಗ ಜಾತಿಯಲ್ಲಿ ಹುಟ್ಟಿ, ಬೆಳೆದು, ಸಂಘಟಿತರಾಗಿದ್ದೇವೆ. ಈ ವೇದಿಕೆಯಲ್ಲಿರುವ ನಮ್ಮೆಲ್ಲರನ್ನೂ ಸಮಾಜ ಹಾಗೂ ನಮ್ಮ ಪಕ್ಷದಲ್ಲಿ ಗುರುತಿಸುವುದೇ ಒಕ್ಕಲಿಗರು ಎಂದು. ನನ್ನನ್ನು ಕಾಂಗ್ರೆಸ್ ಪಕ್ಷ ರಾಜ್ಯದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಎಸ್.ಎಮ್. ಕೃಷ್ಣ ಅವರ ನಂತರ ನನ್ನನ್ನು ಈ ಸ್ಥಾನದಲ್ಲಿ ಕೂರಿಸಿದ್ದಾರೆ. ನನ್ನ ಸಂಘಟನೆಯ ಇತಿಹಾಸ ಒಂದು ಕಡೆಯಾದರೆ, ನಾನು ಒಕ್ಕಲಿಗ ಸಮುದಾಯದವನು ಎಂಬ ಕಾರಣಕ್ಕೆ ಆಯ್ಕೆ ಮಾಡಿರುವುದೂ ಮತ್ತೊಂದು ಸತ್ಯ” ಎಂದು ಹೇಳಿದ್ದಾರೆ.

“ಆರ್. ಅಶೋಕ್ ಸೇರಿದಂತೆ ಇಲ್ಲಿರುವ ಮಂತ್ರಿಗಳು ಈ ಸ್ಥಾನಕ್ಕೆ ಬರಲು ಕಾರಣ ಅವರು ಒಕ್ಕಲಿಗ ಸಮಾಜದ ಪ್ರತಿನಿಧಿಯಾಗಿರುವುದಕ್ಕೆ. ಇದನ್ನು ನಾವೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು. ನಾವು ನಮ್ಮ ಹಕ್ಕು ಕೇಳಲು ಇಲ್ಲಿ ನಿಂತಿದ್ದೇವೆ. ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಬಂದ ನಂತರ, ನಮ್ಮ ಸಮಾಜದ ಕಾನೂನು ತಜ್ಞರು ಅಧ್ಯಯನ ಮಾಡಿ, ಸ್ವಾಮೀಜಿಗಳ ಜತೆ ಚರ್ಚೆ ಮಾಡಿದ್ದಾರೆ. ನಾವು ಬೇರೆಯವರ ಹಕ್ಕನ್ನು ಕೇಳುತ್ತಿಲ್ಲ. ಈ ಸಮಾಜದ ಜನಸಂಖ್ಯೆ ಎಷ್ಟಿದೆಯೋ ಅದರ ಆಧಾರದ ಮೇಲೆ ನಮಗೆ ಮೀಸಲಾತಿ ನೀಡಿ ಎಂದು ಕೇಳುತ್ತಿದ್ದೇವೆ. ನಾವು ಯಾರಿಗೂ ತೊಂದರೆ ಮಾಡುವವರಲ್ಲ” ಎಂದಿದ್ದಾರೆ.

ಸಭೆಯಲ್ಲಿದ್ದ ಕಂದಾಯ ಸಚಿವ ಆರ್‌. ಅಶೋಕ ಅವರಿಗೆ ನಿರ್ಮಲಾನಂದನಾಥ ಸ್ವಾಮೀಜಿ ಹಕ್ಕೊತ್ತಾಯದ ಮನವಿಯನ್ನು ನೀಡಿದರು. ‘ಮೀಸಲಾತಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಒಕ್ಕಲಿಗ ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಸಮುದಾಯದ ಪರವಾಗಿ ನಿಲ್ಲುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಅಶೋಕ್‌ ಪ್ರತಿಕ್ರಿಯಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, “ಈ ಸಭೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಇಲ್ಲ ಎಂದು ಯಾರೂ ಅಂದುಕೊಳ್ಳಬಾರದು. ಪಂಚರತ್ನ ಯಾತ್ರೆಯಲ್ಲಿರುವ ಕುಮಾರಸ್ವಾಮಿ, ನನ್ನ ಜೊತೆ 3–4 ಬಾರಿ ಮಾತನಾಡಿದ್ದಾರೆ. ದೇವೇಗೌಡರ ಆರೋಗ್ಯ ಇತ್ತೀಚೆಗೆ ಸ್ವಲ್ಪ ಏರುಪೇರಾಗುತ್ತಿದೆ. ಅವರು ಕೂಡಾ ಪತ್ರ ಬರೆದು ತಮ್ಮ ಬೆಂಬಲವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಮಾತನಾಡಿ, “ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಶೇ 16ರಷ್ಟಿದೆ. ಆದರೆ, ಮೀಸಲಾತಿ ಶೇ 4ರಷ್ಟು ಮಾತ್ರ. ನಾಡಿಗೇ ಆಹಾರ ಭದ್ರತೆ ಕೊಟ್ಟಿರುವ ಸಮಾಜ ನಮ್ಮದು. ನಮ್ಮ ಸಮುದಾಯದ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಾಂಗದ ಹಿತದೃಷ್ಟಿಯಿಂದ ಸರ್ಕಾರ ನಮಗೆ ಮೀಸಲಾತಿ ಹೆಚ್ಚಿಸಬೇಕು. ‌ಶೇ 15ರವರೆಗೂ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕು” ಎಂದು ಒತ್ತಾಯಿಸಿದರು.

ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, “ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರಸರ್ಕಾರ ಘೋಷಿಸಿರುವ ಶೇ 10 ಮೀಸಲಾತಿ ನಮ್ಮ ಸಮುದಾಯಕ್ಕೆ ಸಿಗದೇ ಅನ್ಯಾಯ ಆಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ದೇವೇಗೌಡರ ನೇತೃತ್ವದಲ್ಲಿ, ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...