Homeಕರ್ನಾಟಕಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

- Advertisement -
- Advertisement -

ಜನಸಂಖ್ಯಾಗನುಗುಣವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಒಕ್ಕಲಿಗ ಸಮುದಾಯ ಹೋರಾಟದ ಸೂಚನೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.

ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ. ಕಾಲಮಿತಿಯೊಳಗೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಒಕ್ಕಲಿಗರೆಲ್ಲರೂ ಪಕ್ಷಭೇದ ಮರೆತು, ವೈಷಮ್ಯಗಳನ್ನು ಪಕ್ಕಕ್ಕಿಟ್ಟು ಪೂಜ್ಯರ ನಾಯಕತ್ವದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಕ್ಕಲಿಗರ ಮೀಸಲಾತಿ ವಿಚಾರವಾಗಿ ಎಲ್ಲರ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲು ಈ ಸಭೆ ನಡೆಸಲಾಗುತ್ತಿದೆ. ಈ ಸಭೆ ನೋಡಿದ ನಂತರ ನನಗೆ ಒಂದು ಮಾತು ನೆನಪಾಗುತ್ತಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಹೋರಾಟ ಮಾಡುವುದು ಯಶಸ್ಸು” ಎಂದಿದ್ದಾರೆ.

“ನಾವು ಹುಟ್ಟುವಾಗ ಇಂತಹುದೆ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಹುಟ್ಟುವಾಗ ಉಸಿರು ಇರುತ್ತದೆ, ಆದರೆ ಹೆಸರು ಇರುವುದಿಲ್ಲ. ಸತ್ತಾಗ ಹೆಸರು ಇರುತ್ತದೆ, ಆದರೆ ಉಸಿರೇ ಇರುವುದಿಲ್ಲ. ಹುಟ್ಟು ಸಾವಿನ ಮಧ್ಯೆ ನಾವು ನಮ್ಮ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟು ಹೋಗಬೇಕು” ಎಂದು ಆಶಿಸಿದ್ದಾರೆ.

“ನಮ್ಮ ತಂದೆ, ತಾಯಿಗಳಿಂದ ನಾವು ಒಕ್ಕಲಿಗ ಜಾತಿಯಲ್ಲಿ ಹುಟ್ಟಿ, ಬೆಳೆದು, ಸಂಘಟಿತರಾಗಿದ್ದೇವೆ. ಈ ವೇದಿಕೆಯಲ್ಲಿರುವ ನಮ್ಮೆಲ್ಲರನ್ನೂ ಸಮಾಜ ಹಾಗೂ ನಮ್ಮ ಪಕ್ಷದಲ್ಲಿ ಗುರುತಿಸುವುದೇ ಒಕ್ಕಲಿಗರು ಎಂದು. ನನ್ನನ್ನು ಕಾಂಗ್ರೆಸ್ ಪಕ್ಷ ರಾಜ್ಯದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಎಸ್.ಎಮ್. ಕೃಷ್ಣ ಅವರ ನಂತರ ನನ್ನನ್ನು ಈ ಸ್ಥಾನದಲ್ಲಿ ಕೂರಿಸಿದ್ದಾರೆ. ನನ್ನ ಸಂಘಟನೆಯ ಇತಿಹಾಸ ಒಂದು ಕಡೆಯಾದರೆ, ನಾನು ಒಕ್ಕಲಿಗ ಸಮುದಾಯದವನು ಎಂಬ ಕಾರಣಕ್ಕೆ ಆಯ್ಕೆ ಮಾಡಿರುವುದೂ ಮತ್ತೊಂದು ಸತ್ಯ” ಎಂದು ಹೇಳಿದ್ದಾರೆ.

“ಆರ್. ಅಶೋಕ್ ಸೇರಿದಂತೆ ಇಲ್ಲಿರುವ ಮಂತ್ರಿಗಳು ಈ ಸ್ಥಾನಕ್ಕೆ ಬರಲು ಕಾರಣ ಅವರು ಒಕ್ಕಲಿಗ ಸಮಾಜದ ಪ್ರತಿನಿಧಿಯಾಗಿರುವುದಕ್ಕೆ. ಇದನ್ನು ನಾವೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು. ನಾವು ನಮ್ಮ ಹಕ್ಕು ಕೇಳಲು ಇಲ್ಲಿ ನಿಂತಿದ್ದೇವೆ. ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಬಂದ ನಂತರ, ನಮ್ಮ ಸಮಾಜದ ಕಾನೂನು ತಜ್ಞರು ಅಧ್ಯಯನ ಮಾಡಿ, ಸ್ವಾಮೀಜಿಗಳ ಜತೆ ಚರ್ಚೆ ಮಾಡಿದ್ದಾರೆ. ನಾವು ಬೇರೆಯವರ ಹಕ್ಕನ್ನು ಕೇಳುತ್ತಿಲ್ಲ. ಈ ಸಮಾಜದ ಜನಸಂಖ್ಯೆ ಎಷ್ಟಿದೆಯೋ ಅದರ ಆಧಾರದ ಮೇಲೆ ನಮಗೆ ಮೀಸಲಾತಿ ನೀಡಿ ಎಂದು ಕೇಳುತ್ತಿದ್ದೇವೆ. ನಾವು ಯಾರಿಗೂ ತೊಂದರೆ ಮಾಡುವವರಲ್ಲ” ಎಂದಿದ್ದಾರೆ.

ಸಭೆಯಲ್ಲಿದ್ದ ಕಂದಾಯ ಸಚಿವ ಆರ್‌. ಅಶೋಕ ಅವರಿಗೆ ನಿರ್ಮಲಾನಂದನಾಥ ಸ್ವಾಮೀಜಿ ಹಕ್ಕೊತ್ತಾಯದ ಮನವಿಯನ್ನು ನೀಡಿದರು. ‘ಮೀಸಲಾತಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಒಕ್ಕಲಿಗ ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಸಮುದಾಯದ ಪರವಾಗಿ ನಿಲ್ಲುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಅಶೋಕ್‌ ಪ್ರತಿಕ್ರಿಯಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, “ಈ ಸಭೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಇಲ್ಲ ಎಂದು ಯಾರೂ ಅಂದುಕೊಳ್ಳಬಾರದು. ಪಂಚರತ್ನ ಯಾತ್ರೆಯಲ್ಲಿರುವ ಕುಮಾರಸ್ವಾಮಿ, ನನ್ನ ಜೊತೆ 3–4 ಬಾರಿ ಮಾತನಾಡಿದ್ದಾರೆ. ದೇವೇಗೌಡರ ಆರೋಗ್ಯ ಇತ್ತೀಚೆಗೆ ಸ್ವಲ್ಪ ಏರುಪೇರಾಗುತ್ತಿದೆ. ಅವರು ಕೂಡಾ ಪತ್ರ ಬರೆದು ತಮ್ಮ ಬೆಂಬಲವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಮಾತನಾಡಿ, “ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಶೇ 16ರಷ್ಟಿದೆ. ಆದರೆ, ಮೀಸಲಾತಿ ಶೇ 4ರಷ್ಟು ಮಾತ್ರ. ನಾಡಿಗೇ ಆಹಾರ ಭದ್ರತೆ ಕೊಟ್ಟಿರುವ ಸಮಾಜ ನಮ್ಮದು. ನಮ್ಮ ಸಮುದಾಯದ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಾಂಗದ ಹಿತದೃಷ್ಟಿಯಿಂದ ಸರ್ಕಾರ ನಮಗೆ ಮೀಸಲಾತಿ ಹೆಚ್ಚಿಸಬೇಕು. ‌ಶೇ 15ರವರೆಗೂ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕು” ಎಂದು ಒತ್ತಾಯಿಸಿದರು.

ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, “ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರಸರ್ಕಾರ ಘೋಷಿಸಿರುವ ಶೇ 10 ಮೀಸಲಾತಿ ನಮ್ಮ ಸಮುದಾಯಕ್ಕೆ ಸಿಗದೇ ಅನ್ಯಾಯ ಆಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ದೇವೇಗೌಡರ ನೇತೃತ್ವದಲ್ಲಿ, ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...