Homeಮುಖಪುಟತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

- Advertisement -
- Advertisement -

ಬಿಜೆಪಿ ದೇಶಾದ್ಯಂತ ಒಡೆದು ಆಳುವ ನೀತಿಯ ಮೂಲಕ ಅಧಿಕಾರವನ್ನು ಹಿಡಿಯುತ್ತದೆ ಎಂಬ ಆರೋಪ ದೇಶದ ಅನೇಕ ರಾಜ್ಯಗಳಲ್ಲಿ ಕೇಳಿಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಎಲ್‌ಜೆಪಿ ಪಕ್ಷವನ್ನು ಬಿಜೆಪಿ   ಒಡೆಯುವ ಪ್ರಯತ್ನಕ್ಕೆ ಕೈ ಹಾಕಿದೆ. ಹಾಗೇ ವರ್ಷಗಳ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟಿದ್ದರು. ಪಶ್ಚಿಮ ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಅಲ್ಲಿ ಕೂಡ ಪ್ರತ್ಯೇಕ ಉತ್ತರ ಪ್ರಾಂತ್ಯದ ರಚನೆಗೆ ಬಿಜೆಪಿ ಪುಷ್ಠಿ ನೀಡಿತ್ತು. ಈಗ ತಮಿಳು ನಾಡಿನಲ್ಲಿ ಕೂಡ ಪ್ರತ್ಯೇಕ ರಾಜ್ಯ ರಚನೆಯ ಚರ್ಚೆಯನ್ನು ಬಿಜೆಪಿಯೇ ಹುಟ್ಟುಹಾಕಿದೆ. ಕೊಂಗನಾಡು ಪ್ರತ್ಯೇಕ ರಾಜ್ಯ ಬೇಡಿಕೆಯ ಕೂಗು ಮತ್ತೊಮ್ಮೆ ತಮಿಳುನಾಡಿನಲ್ಲಿ ಆರಂಭವಾಗಿದೆ.

ಬಿಜೆಪಿ ತಮಿಳು ನಾಡು ರಾಜ್ಯಾಧ್ಯಕ್ಷ  ಎಲ್ ಮುರುಗನ್ ಅವರಿಗೆ  ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದೆ. ಇದೇ ಸಂದರ್ಭದಲ್ಲಿ ಕೊಂಗ ನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಮುನ್ನೆಲೆಗೆ ಬಂದಿರುವುದು ಕೇವಲ ಕಾಕತಾಳೀಯವಲ್ಲ. ಬಿಜೆಪಿ ಆರಂಭದಿಂದಲೂ ಕೊಂಗು ನಾಡು ಎಂದು ಕರೆಯಲ್ಪಡುವ ಪಶ್ಚಿಮ ತಮಿಳುನಾಡಿನ ನಾಯಕರನ್ನೇ ಪಕ್ಷದ ಮುಂಚೂಣಿಯಲ್ಲಿ ನಿಲ್ಲಿಸಿದೆ. ಬಿಜೆಪಿಯ ಮತ ಬ್ಯಾಂಕ್ ಇರುವುದೂ ಈ ಪ್ರಾಂತ್ಯದಲ್ಲಿಯೇ.

ದೆಹಲಿಯ ಅಧಿಕಾರ ಕೇಂದ್ರದ ಪಡಸಾಲೆಯಲ್ಲಿ ಕೆಲಸ ಮಾಡುವ ಕೆಲವರು  ವಾರದ ಆರಂಭದಲ್ಲಿ ತಮಿಳುನಾಡು ಟ್ವಿಟರ್ ವಲಯದಲ್ಲಿ ಪ್ರತ್ಯೇಕತೆಯ ಚರ್ಚೆಗೆ ಮುನ್ನಡಿ ಬರೆದಿದ್ದಾರೆ.  ಕೆಲವು ಅಧಿಕೃತ ಪ್ರಕಟಣೆಗಳಲ್ಲಿ, ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯ ಸಚಿವ  ಎಲ್ ಮುರುಗನ್ ಅವರ ಬಯೋ ಡೇಟಾದಲ್ಲಿ  ಹುಟ್ಟಿದ ಜಿಲ್ಲೆ ಊರುಗಳ ವಿಳಾಸದ ಬದಲಾಗಿ ಕೊಂಗು ನಾಡು ಎಂದು ನಮೂದಿಸಲಾಗಿದೆ. ಇದು ಆಕಸ್ಮಿಕವಾಗಿ ನಡೆದ ಬೆಳವಣಿಗೆಯಲ್ಲ. ಬಿಜೆಪಿ ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕೂಡ ಅಣ್ಣಾಮಲೈ ಅವರನ್ನು.  ಅಣ್ಣಾ ಮಲೈ ಕೂಡ ಇದೇ ಕೊಂಗು ನಾಡು ಪ್ರದೇಶದವರು.

ಇದನ್ನೂ ಓದಿ: ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2021ರ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸಿನ ಕನಸು ಕಾಣುತ್ತಿದ್ದ ಬಿಜೆಪಿಗೆ ಫಲಿತಾಂಶಗಳು ಅಷ್ಟು ಸಮಧಾನಕಾರಿಗಾಗಿ ಕಾಣಲಿಲ್ಲ. ತಮಿಳು ಸಂಸ್ಕೃತಿಯನ್ನು  ಹಿಂದುತ್ವದ ಅಜೆಂಡಾದ ಮೂಲಕ ಒಡೆಯಲು ಸಾಧ್ಯವಿಲ್ಲವೆಂಬ ವಿಷಯ ಅರಿವಾಗುತ್ತಿದ್ದಂತೆ ಬಿಜೆಪಿ ತಮಿಳರನ್ನು ತಮಿಳರಿಂದಲೇ ಒಡೆಯುವ ಪ್ರಯತ್ನಕ್ಕೆ ಕೈ ಹಾಕಿದೆ.

ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳು ನಾಡಿನಲ್ಲಿ ಅಧಿಕಾರವನ್ನು ಹಿಡಿಯುತ್ತಿದ್ದಂತೆ ಈ ಪ್ರತ್ಯೇಕತೆಯ ಕೂಗು ತೀವ್ರಗೊಂಡಿದೆ. ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒಕ್ಕೂಟ ಸರ್ಕಾರ ಎಂದು ಕರೆಯುವ ನಿರ್ಣಯ ಕೈಗೊಂಡಿರುವುದು ಹಾಗೂ ಜಿಎಸ್‌ಟಿ ಮತ್ತು ನೀಟ್‌ ಕುರಿತು ಪರಿಶೀಲನೆಗೆ ಸದನ ಸಮಿತಿಯನ್ನು ರಚಿಸಿರುವುದು ಕೇಂದ್ರ ಸರ್ಕಾರದ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಟಾಲಿನ್ ತಂತ್ರಕ್ಕೆ ಬಿಜೆಪಿ ಪ್ರತಿ ತಂತ್ರವಾಗಿ ಪ್ರತ್ಯೇಕ ಕೊಂಗುನಾಡು ಬೇಡಿಕೆಯನ್ನು ಹುಟ್ಟುಹಾಕಿದೆ.

ಕೊಂಗು ನಾಡು ರಾಜ್ಯದ ಬೇಡಿಕೆ ಆರಂಭವಾಗಿರುವುದು ಇದೇ ಮೊದಲಲ್ಲ. 2013 ರಲ್ಲಿಯೂ ಇದೇ ಕೂಗು ಮತ್ತು ಆಗ್ರಹಗಳು ತಮಿಳುನಾಡಿನಲ್ಲಿ ಕೇಳಿಬಂದಿದ್ದವು. 1950 ರಲ್ಲಿ ಪ್ರತ್ಯೇಕ ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಾಜ್ಯಗಳ ರಚನೆಯಾದಾಗಿನಿಂದಲೂ ಈ ಬೇಡಿಕೆ ಕೇಳಿ ಬರುತ್ತಿದೆ. ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಹಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಹುಟ್ಟಿಕೊಂಡಿವೆ. ಈ ಪಕ್ಷಗಳು ರಾಜಕೀಯದಲ್ಲಿ ಯಶಸ್ವಿಯಾಗದ್ದರಿಂದ ಮತ್ತು  ಡಿಎಂಕೆ  ಎಐಡಿಎಂಕೆಗಳ ಚೆನ್ನೈ ಕೇಂದ್ರಿತ ರಾಜಕಾರಣದಿಂದ ಕೊಂಗು ನಾಡು ಚರ್ಚೆ ಇದುವರೆಗೆ ಮುಖ್ಯವಾಹಿನಿಗೆ ಬಂದಿರಲಿಲ್ಲ. ಕಾಲ ಬದಲಾದಂತೆಲ್ಲ ತಮಿಳು ನಾಡಿನ ರಾಜಕೀಯ ಚಿತ್ರಣವೂ ಬದಲಾಗುತ್ತಿದೆ. 2 ದ್ರಾವಿಡ ಪಕ್ಷಗಳ ರಾಜಕೀಯ ಮೇಲಾಟದ ನಡುವೆ ರಾಜ್ಯದಲ್ಲಿ ಬೇರೂರಲು ಯತ್ನಿಸುತ್ತಿರುವ ಬಿಜೆಪಿಗೆ ಹದವಾದ ಮಣ್ಣು ಕೊಂಗು ನಾಡಿನಲ್ಲಿ ಕಾಣಿಸುತ್ತಿದೆ. ಬಿಜೆಪಿ ಈ ಪ್ರಾತ್ಯಂದಲ್ಲಿ ಪ್ರಬಲವಾದಂತೆಲ್ಲ ಪ್ರತ್ಯೇಕ ರಾಜ್ಯದ ಕೂಗು ಬಲಗಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

ಏನಿದು ಕೊಂಗು ನಾಡು ?

ತಮಿಳು ನಾಡಿನ ಪಶ್ಚಿಮ ಭಾಗವನ್ನು ಕೊಂಗು ನಾಡು ಎಂದು ಕರೆಯಲಾಗುತ್ತದೆ. ಪ್ರಾಚೀನ ಕೊಂಗುನಾಡು  ಪ್ರದೇಶವು ಹಲವಾರು ಜಿಲ್ಲೆಗಳು ಮತ್ತು ತಾಲ್ಲೂಕುಗಳಿಂದ ಕೂಡಿದ್ದು, ಇವುಗಳನ್ನು ಪ್ರಸ್ತುತ ಪಳನಿ, ಕರುರು, ಧರಪುರಂ, ತಿರುಚೆಂಗೋಡು, ಈರೋಡ್, ಪೊಲ್ಲಾಚಿ, ನಮ್ಮಕ್ಕಲ್, ಸೇಲಂ, ಧರ್ಮಪುರಿ, ನೀಲಗಿರಿ, ಅವಿನಾಶಿ, ಸತ್ಯಮಂಗಲಂ, ಕೊಯಮತ್ತೂರು ಎಂದು ಕರೆಯಲಾಗುತ್ತದೆ.  ಬೃಹತ್ ಸಂಪತ್ತು, ಆಹ್ಲಾದಕರ ವಾತಾವರಣ ಮತ್ತು ವಿಶಿಷ್ಟ ಲಕ್ಷಣಗಳಿಂದ ಕೂಡಿರುವ ಕೊಂಗುನಾಡಿನಲ್ಲಿ ಚೇರ, ಪಾಂಡ್ಯ, ಚೋಳ, ಹೊಯ್ಸಳ, ಮುಸ್ಲಿಂ ಆಡಳಿತಗಾರರು ಮತ್ತು ಅಂತಿಮವಾಗಿ ಬ್ರಿಟಿಷರು ಆಳ್ವಿಕೆ ನಡೆಸಿದ್ದಾರೆ . ತಮಿಳುನಾಡಿನ ಇತರ ಭಾಗಗಳಿಂದ ಭಾಷಿಕ ಭಿನ್ನತೆ ಮತ್ತು ಭೌಗೋಳಿಕ ಭಿನ್ನತೆಯನ್ನು ಹೊಂದಿರುವ  ಈ ಪ್ರದೇಶ ಕರ್ನಾಟಕದ ಗಡಿಗೆ ಹೊಂದಿಕೊಂಡಂತೆಯೇ ಇರುವುದು ವಿಶೇಷ. ಪ್ರಾಕೃತಿಕ ಸಂಪತ್ತಿನಿಂದ ಕೂಡಿರುವ ಈ ಭಾಗದಲ್ಲಿ ಅನೇಕ ನದಿಗಳು ಹರಿಯುತ್ತಿದ್ದು ಸಮೃದ್ಧ ಕೃಷಿಗೆ ಕೊಂಗುನಾಡು ಪ್ರಸಿದ್ಧವಾಗಿದೆ.

 

ಪ್ರಾಚೀನ ಕೊಂಗುನಾಡು ದೇಶ ಒಳಗೊಂಡಿದ್ದ ಭೂಭಾಗ

ಇಂದು ಸೇಲಂ, ಕೃಷ್ಣಗಿರಿ, ಕೊಯಂಬತ್ತೂರು ನಗರಗಳು ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ ದೇಶಾದ್ಯಂತ ಪ್ರಸಿದ್ಧವಾಗಿವೆ.

ಇದನ್ನೂ ಓದಿ: ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

ತಮಿಳು ನಾಡಿನಲ್ಲಿ ಕಳೆದ 10 ವರ್ಷಗಳಲ್ಲಿ ಬಿಜೆಪಿಗೆ ನೆಲೆ ಸಿಕ್ಕಿರುವುದು ಇಲ್ಲಿ ಮಾತ್ರ. ಬಿಜೆಪಿ ತನ್ನ ಮತಬ್ಯಾಂಕ್ ವಿಸ್ತರಣೆಯ ಉದ್ದೇಶಕ್ಕೆ ಪ್ರತ್ಯೇಕತೆಯ ಕೂಗನ್ನು ಸಶಕ್ತವಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂಬುದು  ಪ್ರತ್ಯೇಕ ರಾಜ್ಯವನ್ನು  ವಿರೋಧಿಸುವವರ ಆರೋಪವಾಗಿದೆ.

ಸುಮಾರು 61 ವಿಧಾನಸಭಾ ಕ್ಷೇತ್ರಗಳು ಹಾಗೂ 10 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕೊಂಗು ನಾಡು ಪ್ರಾಂತ್ಯವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವುದು ಅಥವಾ ಪುದಚ್ಚೇರಿ ಮಾದರಿಯಲ್ಲಿ ಕೇಂದ್ರಾಡಳಿತ ಪ್ರದೇಶವನ್ನಾಗಿಸುವುದು ಬೆಜೆಪಿಯ ಲೆಕ್ಕಾಚಾರ. ಹೆಚ್ಚುವರಿಯಾಗಿ ಸುತ್ತಲಿನ ಒಂದೆರಡು ಜಿಲ್ಲೆಗಳನ್ನು ಸೇರಿಸಿ 90 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ 15 ಲೋಕಸಭಾ ಕ್ಷೇತ್ರಗಳನ್ನು ಒಗ್ಗೂಡಿಸಿ ಒಂದು ಹೊಸ ರಾಜ್ಯ ರಚನೆ ಮಾಡುವ ಚಿಂತನೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಲಯದಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯೇಕ ಕೊಂಗು ನಾಡು ಬೇಡಿಕೆಗೆ ಹಲವು ಸಂಘಟನೆಗಳು, ಚಿಂತಕರು, ಸಾಹಿತಿಗಳು, ವಿದ್ಯಾರ್ಥಿಗಳು ಕೂಡ ಬೇಡಿಕೆಗೆ ಧ್ವನಿಗೂಡಿಸಿ ಕೊಂಗು ನಾಡು ಚರ್ಚೆ ಕಾವೇರಲು ಕಾರಣರಾಗಿದ್ದಾರೆ. ಬಿಜೆಪಿಯ ವಿಸ್ತರಣಾ ವಾದದ ಸಾಂದರ್ಭಿಕ ಶಿಶುವಾಗಿ ಕೊಂಗು ನಾಡು ರಾಜ್ಯ ರಚನೆಯಾಗಬಹುದೇ ? ಅಥವಾ ಡಿಎಂಕೆ ಮತ್ತು ಬಿಜೆಪಿ ನಡುವಿನ ರಾಜಕೀಯ ತಿಕ್ಕಾಟ ಪ್ರತ್ಯೇಕ ರಾಜ್ಯದ ರಚನೆಗೆ ದಾರಿ ಮಾಡಿ ಕೊಡಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

-ರಾಜೇಶ್ ಹೆಬ್ಬಾರ್‌

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 26 ಕೋಟಿ ಜನಸಂಖ್ಯೆ ಇರುವ ಜಂಗಲ್ ರಾಜ್ಯ ಉತ್ತರ ಪ್ರದೇಶವನ್ನು 4 ಅಥವಾ 5 ರಾಜ್ಯವಾಗಿ ವಿಭಜಿಸಿ ಅಲ್ಲಿ ಅಭಿವ್ರಿದ್ಧಿಗೆ ಇಂಬು ಕೊಡುವ ಬದಲು , ದಕ್ಷಿಣದ ದ್ರಾವಿಡರನ್ನು ಒಡೆಯಲು ಕುತಂತ್ರಿ ಚಡ್ಡಿಗಳು ಪ್ರಯತ್ನಿಸುತ್ತಿರುವುದನ್ನು ಎಲ್ಲಾ
    ದಕ್ಷಿಣ ಭಾರತೀಯರು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...