Homeಮುಖಪುಟಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಘೋಷಿಸಿದ ನಂತರ ದೆಹಲಿ ಗಡಿಗಳಿಂದ ಜನರು ವಾಪಸಾಗುತ್ತಿಲ್ಲ, ಬದಲಿಗೆ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಗಡಿಗಳತ್ತ ಬಂದು ಸೇರುತ್ತಿದ್ದಾರೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಘೋಷಿಸಿದ ನಂತರ ದೆಹಲಿ ಗಡಿಗಳಿಂದ ರೈತರು ವಾಪಸಾಗುತ್ತಿಲ್ಲ, ಬದಲಿಗೆ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಗಡಿಗಳತ್ತ ಬಂದು ಸೇರುತ್ತಿರುವ ವಿದ್ಯಮಾನ ಜರುಗುತ್ತಿದೆ. ಕಾಯ್ದೆ ವಾಪಸಾತಿಯಿಂದ ರೈತರ ಖುಷಿ ದ್ವಿಗುಣಗೊಂಡಿದ್ದು, ಸಂಭ್ರಮ ಆಚರಿಸಲು ಮತ್ತು ಎಂಎಸ್‌ಪಿ ಕಾಯ್ದೆ ಜಾರಿ ಮಾಡಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಗಳತ್ತ ಹೊರಟಿದ್ದಾರೆ.

ನವೆಂಬರ್ 26ಕ್ಕೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯ ರೈತರು ಮುಖ್ಯವಾಗಿ ಪಂಜಾಬ್ ಮತ್ತು ಹರಿಯಾಣಗಳಿಂದ ದೆಹಲಿ ಗಡಿಗಳತ್ತ ಬಸ್, ಟ್ರಾಕ್ಟರ್ ಮತ್ತು ರೈಲುಗಳಲ್ಲಿ ಬಂದು ಸೇರುತ್ತಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಮೋದಿ ಘೋಷಿಸಿದ್ದರೂ ರೈತರ ಚಿತ್ತವೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲೆ ನೆಟ್ಟಿದೆ. ಚುನಾವಣಾ ಭರವಸೆಯಲ್ಲಿ ಎಂಎಸ್‌ಪಿ ನೀಡುವುದಾಗಿ, ರೈತರ ಆದಾಯ ಡಬಲ್ ಮಾಡುವುದಾಗಿ ಘೋಷಿಸಿದ್ದ ಪ್ರಧಾನಿ ಈಗ ಅದನ್ನು ಜಾರಿಗೊಳಿಸಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ.

ಸಮಗ್ರ ಉತ್ಪಾದನಾ ವೆಚ್ಚದ (C2+50%) ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಲ್ಲಾ ರೈತರಿಗೆ ಕಾನೂನುಬದ್ಧ ಅರ್ಹತೆಯಾಗಿ ಮಾಡಬೇಕು. ಸರ್ಕಾರವು ಪ್ರಸ್ತಾಪಿಸಿರುವ “ವಿದ್ಯುತ್ ತಿದ್ದುಪಡಿ ಮಸೂದೆ, 2020/2021” ಕರಡನ್ನು ಹಿಂತೆಗೆದುಕೊಳ್ಳಬೇಕು ಎಂದು ರೈತರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಹಲವಾರು ಇತರ ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ರೈತರ ಮೇಲೆ ನೂರಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೂಡಲೇ ಈ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಸಹ ರೈತರು ಒತ್ತಾಯಿಸಿದ್ದಾರೆ.

ಲಖಿಂಪುರ ಖೇರಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಟೆನಿ ಇನ್ನೂ ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ನಿಮ್ಮ ಸಂಪುಟದಲ್ಲಿ ಸಚಿವರಾಗಿ ಉಳಿದಿದ್ದಾರೆ.  ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಿ ಬಂಧಿಸಬೇಕು ಮತ್ತು ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನು ತಮ್ಮ ಪರಮ ತ್ಯಾಗವಾಗಿ ಅರ್ಪಿಸಿದ್ದಾರೆ.  ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು.  ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.

ಈ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವಂಬರ್ 29 ರಂದು ಸಂಸತ್ ಚಲೋ ಕಾರ್ಯಕ್ರಮಕ್ಕೆ ರೈತರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...