Homeಚಳವಳಿನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿದ್ದ ಮೈಷುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಅದನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ’ ಎಂದು ಘೋಷಿಸಿದ್ದಾರೆ.

ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದು ಕಿಡಿಕಾರಿದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಪ್ರತಿಭಟನೆಗೆ ಲಾರಿ ಮಾಲೀಕರು ಸಂಘ, ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಸೇನೆ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ದಲಿತ ಮುಖಂಡರಾದ ಎಂ.ಬಿ ಶ್ರೀನಿವಾಸ್, ಸಿಐಟಿಯುನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...