Homeಚಳವಳಿನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿದ್ದ ಮೈಷುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಅದನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ’ ಎಂದು ಘೋಷಿಸಿದ್ದಾರೆ.

ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದು ಕಿಡಿಕಾರಿದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಪ್ರತಿಭಟನೆಗೆ ಲಾರಿ ಮಾಲೀಕರು ಸಂಘ, ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಸೇನೆ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ದಲಿತ ಮುಖಂಡರಾದ ಎಂ.ಬಿ ಶ್ರೀನಿವಾಸ್, ಸಿಐಟಿಯುನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...