Homeಚಳವಳಿನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿದ್ದ ಮೈಷುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಅದನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ’ ಎಂದು ಘೋಷಿಸಿದ್ದಾರೆ.

ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದು ಕಿಡಿಕಾರಿದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಪ್ರತಿಭಟನೆಗೆ ಲಾರಿ ಮಾಲೀಕರು ಸಂಘ, ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಸೇನೆ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ದಲಿತ ಮುಖಂಡರಾದ ಎಂ.ಬಿ ಶ್ರೀನಿವಾಸ್, ಸಿಐಟಿಯುನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....