Homeಚಳವಳಿಖಾಯಮಾತಿಗೆ ಆಗ್ರಹ: ನವೆಂಬರ್ 06ರಂದು ಪೌರಕಾರ್ಮಿಕರ ಸಮಾವೇಶ

ಖಾಯಮಾತಿಗೆ ಆಗ್ರಹ: ನವೆಂಬರ್ 06ರಂದು ಪೌರಕಾರ್ಮಿಕರ ಸಮಾವೇಶ

- Advertisement -
- Advertisement -

ಕಸ ಗುಡಿಸುವ ಪೌರಕಾರ್ಮಿಕರು, ವಾಹನ ಚಾಲಕರು, ಲೋಡರ್‌ಗಳು, ಸ್ವಚ್ಛತಾ ಕಾರ್ಮಿಕರು, ಯುಜಿಡಿ ಕಾರ್ಮಿಕರನ್ನು ಒಳಗೊಂಡಂತೆ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಮಾಡಬೇಕು ಹಾಗೂ ಪೌರಕಾರ್ಮಿಕರಿಗೆ ಉಚಿತ ವಸತಿ ಒದಗಿಸಬೇಕು ಸೇರಿದಂತೆ ಇತರ ಹಕ್ಕೊತ್ತಾಯಗಳ ಈಡೇರಿಕೆಗಾಗಿ ನವೆಂಬರ್ 06ರಂದು ಬೆಂಗಳೂರಿನಲ್ಲಿ ಪೌರಕಾರ್ಮಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟಗಾರ್ತಿ ಅಕ್ಕಮ್ಮ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನಿರಂತರ ಹೋರಾಟದಿಂದ ಸರ್ಕಾರ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುವ ಆಶ್ವಾಸನೆ ನೀಡಿತ್ತು. ಆದರೆ ರಾಜ್ಯಾದ್ಯಂತ ಕೇವಲ 11,133 ಪೌರಕಾರ್ಮಿಕರನ್ನು ಮಾತ್ರ ಖಾಯಂ ಮಾಡಿಕೊಳ್ಳಲು ಹೊರಟಿದೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗುವುದಿಲ್ಲ ಎಂದಿರುವ ಕಾರ್ಮಿಕರು ಎಲ್ಲರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ AICCTU ಸಂಘದ ನೇತೃತ್ವದಲ್ಲಿನ ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರ ಕಾರ್ಮಿಕರ ಸಂಘದ ಮುಂದಾಳತ್ವದಲ್ಲಿ ಸಮಾವೇಶಕ್ಕೆ ಸಿದ್ದತೆ ನಡೆಸಿದೆ” ಎಂದರು.

ಹೋರಾಟಗಾರ್ತಿ ನಿರ್ಮಲರವರು ಮಾತನಾಡಿ, “ಸಚಿವ ಸಂಪುಟದ ನಿರ್ಣಯವನ್ನು ಉಲ್ಲಂಘಿಸಿ ನಾಡಿನ ಸ್ವಚ್ಛತಾ ಕಾರ್ಮಿಕರಿಗೆ ಮೋಸ ಮಾಡಲಾಗುತ್ತಿದೆ. ಹಾಗಾಗಿ ಖಾಯಮಾತಿ, ವಸತಿ, ಮಕ್ಕಳ ಶಿಕ್ಷಣ, ಉತ್ತಮ ಆರೋಗ್ಯ ಸೌಲಭ್ಯಗಳಿಗಾಗಿ ಪೌರಕಾರ್ಮಿಕರ ಘನತೆಯ ಜೀವನಕ್ಕಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದರು.

ಎಲ್ಲಾ ಸ್ವಚ್ಛತಾ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಹಣಕಾಸಿನ ನೆರವು ನೀಡಬೇಕು, ನಿವೃತ್ತಿ ಹೊಂದಿದ ಎಲ್ಲಾ ಕಾರ್ಮಿಕರಿಗೆ ತಲಾ 10 ಲಕ್ಷ ರೂ ಮತ್ತು ಮಾಸಿಕ 10,000 ರೂ ಪಿಂಚಣಿ ನೀಡಬೇಕು, ಮೃತಪಟ್ಟ ಪೌರಕಾರ್ಮಿಕರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಮತ್ತು ಉದ್ಯೋಗ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

‘ಪೌರಕಾರ್ಮಿಕರ ಸಮಾವೇಶ’ವು ನವೆಂಬರ್ 06ರ ಬೆಳಿಗ್ಗೆ ಬೆಂಗಳೂರಿನ ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಇದನ್ನೂ ಓದಿ; ಪೌರಕಾರ್ಮಿಕರ ಕಾಯಮಾತಿಗೆ ತೊಡಕಾಗಿರುವ ಬೆಂಗಳೂರಿನ ಕಸದ ಮಾಫಿಯಾ ಮತ್ತು ಕಾಂಟ್ರಾಕ್ಟರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...