Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ...

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಕರೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಅಷ್ಟೇ ಅಲ್ಲದೇ ಫೆಬ್ರವರಿ 6 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿದೆ.

ನರೇಂದ್ರ ಮೋದಿ ಸರ್ಕಾರವು, ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಲು ಈ ಸಾರ್ವಜನಿಕ ಸಂಸ್ಥೆಗಳನ್ನು ಹೇಗೆ ಒತ್ತಾಯಿಸಿದೆ ಎಂಬುದನ್ನು ಎತ್ತಿ ತೋರಿಸಲು ಪ್ರತಿ ಜಿಲ್ಲೆಯಲ್ಲೂ ಪಕ್ಷದ ಕಾರ್ಯಕರ್ತರು ಫೆಬ್ರವರಿ 6 ರಂದು ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕಚೇರಿಗಳ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯಿಂದ ಅದಾನಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮಾಡಬೇಕು ಎಂದು ನಾವು ಬಯಸುತ್ತೇವೆ. ಈ ತನಿಖೆಯ ದಿನನಿತ್ಯದ ವರದಿಯೂ ನೀಡಬೇಕು” ಎಂದು ಹೇಳಿದರು.

”ದೇಶದ ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಪ್ರಧಾನಿಯವರ ಆಪ್ತ ಸ್ನೇಹಿತರ ಲಾಭಕ್ಕಾಗಿ ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಅದಾನಿ ಸಮೂಹದಲ್ಲಿ ಎಲ್ ಐಸಿ ಒಟ್ಟು ₹36,474.78 ಕೋಟಿ ಹೂಡಿಕೆ ಮಾಡಿದೆ. ಆದರೆ ಭಾರತೀಯ ಬ್ಯಾಂಕ್‌ಗಳು ಒಟ್ಟಾಗಿ ಸುಮಾರು ₹80,000 ಕೋಟಿಗಳಷ್ಟು ಮೊತ್ತವನ್ನು ಹೂಡಿಕೆ ಮಾಡಿವೆ. ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಇತರ ದುರುಪಯೋಗದ ಆರೋಪಗಳಿದ್ದಾಗಲೂ ಅವರು ಅದನ್ನು ಮುಂದುವರಿಸುತ್ತಾರೆ. ಬಹಿರಂಗಪಡಿಸಿದಾಗಿನಿಂದ ಗ್ರೂಪ್ $ 100 ಬಿಲಿಯನ್ ಕಳೆದುಕೊಂಡಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಮನವಿ ಮಾಡಲಾಗಿದ್ದು, ಹಿರಿಯ ನಾಯಕರ ಹೊರತಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಪಂಚಾಯತ್ ಮತ್ತು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಚಲನವನ್ನು ಪೂರ್ಣ ಪ್ರಮಾಣದಲ್ಲಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; ತನಿಖೆಗೆ ಆಗ್ರಹಿಸಿದ ವಿರೋಧ ಪಕ್ಷಗಳು

ಪಕ್ಷದ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ”ನಾವು ಯಾವುದೇ ನಿರ್ದಿಷ್ಟ ಭಾರತೀಯ ಕಾರ್ಪೊರೇಟ್ ಹೌಸ್ ವಿರೋಧಿಗಳಲ್ಲ, ನಾವು ಕ್ರೋನಿ ಕ್ಯಾಪಿಟಲಿಸಂ ವಿರೋಧಿಗಳು. ಆಯ್ದ ಬಿಲಿಯನೇರ್‌ಗಳಿಗೆ ಅನುಕೂಲವಾಗುವಂತೆ ನಿಯಮಗಳನ್ನು ಬದಲಾಯಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ” ಎಂದರು.

”ಪ್ರಧಾನ ಮಾರ್ಗದರ್ಶಕರು ಈ ದೇಶದ ಅತಿದೊಡ್ಡ ಕಾರ್ಪೊರೇಟ್ ವಂಚನೆಯ ಆರೋಪ ಹೊತ್ತಿರುವ ಅದಾನಿ ಗುಂಪಿಗೆ ಎಲ್‌ಐಸಿ ಮತ್ತು ಎಸ್‌ಬಿಐನಲ್ಲಿ ಷೇರುಗಳನ್ನು ಹಸ್ತಾಂತರಿಸಿದರು. ಕೋಟಿಗಟ್ಟಲೆ ಭಾರತೀಯರ ಠೇವಣಿಗಳನ್ನು ಮುಳುಗಿಸುವಲ್ಲಿ ‘ಸಾಹೇಬರು’ ಯಾವುದೇ ಕಲ್ಲನ್ನು ಬಿಟ್ಟಿಲ್ಲ ಎಂದು ಪ್ರಧಾನಿ ಮೋದಿನ್ನು ಗುರಿಯಾಗಿಸಿಕೊಂಡು” ಕೆಹ್ರಾ ಹೇಳಿದರು.

ಈ ವಿಚಾರದಲ್ಲಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲಾ, ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಈ ವಿಷಯ ಏಕೆ ಕಾಣಿಸಿಕೊಂಡಿಲ್ಲ ಎಂದು ಕೇಳಿದರು. “ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆಪಾದನೆಯಿಂದ ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಆದರು ಪ್ರಧಾನಿ ಮಂತ್ರಿ ಅದಾನಿ ಗುಂಪಿನ ವಿರುದ್ಧ ಗಂಭೀರ ವಂಚನೆಗಳ ತನಿಖಾ ಕಚೇರಿ/ಜಾರಿ ನಿರ್ದೇಶನಾಲಯದಿಂದ ಸ್ವತಂತ್ರ ಲೆಕ್ಕಪರಿಶೋಧನೆ ಮತ್ತು ತನಿಖೆಯನ್ನು ಏಕೆ ಘೋಷಿಸಲಿಲ್ಲ?” ಎಂದು ಸುರ್ಜೆವಾಲಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಮೌಲ್ಯದ ಸವೆತದ ಹೊರತಾಗಿಯೂ #LIC, SBI ಲೈಫ್, SBI ಉದ್ಯೋಗಿಗಳ ಪಿಂಚಣಿ ನಿಧಿಯನ್ನು #AdaniFPO ನಲ್ಲಿ ₹525 ಕೋಟಿ ಹಣ ಹೂಡಿಕೆ ಮಾಡಲು ಮೋದಿ ಸರ್ಕಾರ ಏಕೆ ಅವಕಾಶ ಮಾಡಿಕೊಟ್ಟಿತು? ಜನವರಿ 24 ರಿಂದ ₹1,48,505 CR ನ LIC ಮತ್ತು SBI ನ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...