Homeಮುಖಪುಟಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ...

ಅದಾನಿ ಗುಂಪಿನ ವಿರುದ್ಧ ತನಿಖೆಗೆ ಆಗ್ರಹ: ಫೆ. 6ರಂದು ಎಲ್‌ಐಸಿ, ಎಸ್‌ಬಿಐ ಕಚೇರಿಗಳ ಮುಂದೆ ಪ್ರತಿಭಟನೆಗೆ ಕಾಂಗ್ರೆಸ್ ಕರೆ

- Advertisement -
- Advertisement -

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಅಥವಾ ಜಂಟಿ ಸಂಸದೀಯ ಸಮಿತಿ (JPC) ಅವರ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. ಅಷ್ಟೇ ಅಲ್ಲದೇ ಫೆಬ್ರವರಿ 6 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ನೀಡಿದೆ.

ನರೇಂದ್ರ ಮೋದಿ ಸರ್ಕಾರವು, ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಲು ಈ ಸಾರ್ವಜನಿಕ ಸಂಸ್ಥೆಗಳನ್ನು ಹೇಗೆ ಒತ್ತಾಯಿಸಿದೆ ಎಂಬುದನ್ನು ಎತ್ತಿ ತೋರಿಸಲು ಪ್ರತಿ ಜಿಲ್ಲೆಯಲ್ಲೂ ಪಕ್ಷದ ಕಾರ್ಯಕರ್ತರು ಫೆಬ್ರವರಿ 6 ರಂದು ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕಚೇರಿಗಳ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯಿಂದ ಅದಾನಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮಾಡಬೇಕು ಎಂದು ನಾವು ಬಯಸುತ್ತೇವೆ. ಈ ತನಿಖೆಯ ದಿನನಿತ್ಯದ ವರದಿಯೂ ನೀಡಬೇಕು” ಎಂದು ಹೇಳಿದರು.

”ದೇಶದ ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಪ್ರಧಾನಿಯವರ ಆಪ್ತ ಸ್ನೇಹಿತರ ಲಾಭಕ್ಕಾಗಿ ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಅದಾನಿ ಸಮೂಹದಲ್ಲಿ ಎಲ್ ಐಸಿ ಒಟ್ಟು ₹36,474.78 ಕೋಟಿ ಹೂಡಿಕೆ ಮಾಡಿದೆ. ಆದರೆ ಭಾರತೀಯ ಬ್ಯಾಂಕ್‌ಗಳು ಒಟ್ಟಾಗಿ ಸುಮಾರು ₹80,000 ಕೋಟಿಗಳಷ್ಟು ಮೊತ್ತವನ್ನು ಹೂಡಿಕೆ ಮಾಡಿವೆ. ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಇತರ ದುರುಪಯೋಗದ ಆರೋಪಗಳಿದ್ದಾಗಲೂ ಅವರು ಅದನ್ನು ಮುಂದುವರಿಸುತ್ತಾರೆ. ಬಹಿರಂಗಪಡಿಸಿದಾಗಿನಿಂದ ಗ್ರೂಪ್ $ 100 ಬಿಲಿಯನ್ ಕಳೆದುಕೊಂಡಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಮನವಿ ಮಾಡಲಾಗಿದ್ದು, ಹಿರಿಯ ನಾಯಕರ ಹೊರತಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಪಂಚಾಯತ್ ಮತ್ತು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಚಲನವನ್ನು ಪೂರ್ಣ ಪ್ರಮಾಣದಲ್ಲಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; ತನಿಖೆಗೆ ಆಗ್ರಹಿಸಿದ ವಿರೋಧ ಪಕ್ಷಗಳು

ಪಕ್ಷದ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ”ನಾವು ಯಾವುದೇ ನಿರ್ದಿಷ್ಟ ಭಾರತೀಯ ಕಾರ್ಪೊರೇಟ್ ಹೌಸ್ ವಿರೋಧಿಗಳಲ್ಲ, ನಾವು ಕ್ರೋನಿ ಕ್ಯಾಪಿಟಲಿಸಂ ವಿರೋಧಿಗಳು. ಆಯ್ದ ಬಿಲಿಯನೇರ್‌ಗಳಿಗೆ ಅನುಕೂಲವಾಗುವಂತೆ ನಿಯಮಗಳನ್ನು ಬದಲಾಯಿಸಿದಾಗ, ನಾವು ಅದನ್ನು ವಿರೋಧಿಸುತ್ತೇವೆ” ಎಂದರು.

”ಪ್ರಧಾನ ಮಾರ್ಗದರ್ಶಕರು ಈ ದೇಶದ ಅತಿದೊಡ್ಡ ಕಾರ್ಪೊರೇಟ್ ವಂಚನೆಯ ಆರೋಪ ಹೊತ್ತಿರುವ ಅದಾನಿ ಗುಂಪಿಗೆ ಎಲ್‌ಐಸಿ ಮತ್ತು ಎಸ್‌ಬಿಐನಲ್ಲಿ ಷೇರುಗಳನ್ನು ಹಸ್ತಾಂತರಿಸಿದರು. ಕೋಟಿಗಟ್ಟಲೆ ಭಾರತೀಯರ ಠೇವಣಿಗಳನ್ನು ಮುಳುಗಿಸುವಲ್ಲಿ ‘ಸಾಹೇಬರು’ ಯಾವುದೇ ಕಲ್ಲನ್ನು ಬಿಟ್ಟಿಲ್ಲ ಎಂದು ಪ್ರಧಾನಿ ಮೋದಿನ್ನು ಗುರಿಯಾಗಿಸಿಕೊಂಡು” ಕೆಹ್ರಾ ಹೇಳಿದರು.

ಈ ವಿಚಾರದಲ್ಲಿ ಸರ್ಕಾರದ ಮೌನವನ್ನು ಪ್ರಶ್ನಿಸಿದ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲಾ, ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಈ ವಿಷಯ ಏಕೆ ಕಾಣಿಸಿಕೊಂಡಿಲ್ಲ ಎಂದು ಕೇಳಿದರು. “ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆಪಾದನೆಯಿಂದ ದೊಡ್ಡ ವಂಚನೆ ಬೆಳಕಿಗೆ ಬಂದಿದೆ. ಆದರು ಪ್ರಧಾನಿ ಮಂತ್ರಿ ಅದಾನಿ ಗುಂಪಿನ ವಿರುದ್ಧ ಗಂಭೀರ ವಂಚನೆಗಳ ತನಿಖಾ ಕಚೇರಿ/ಜಾರಿ ನಿರ್ದೇಶನಾಲಯದಿಂದ ಸ್ವತಂತ್ರ ಲೆಕ್ಕಪರಿಶೋಧನೆ ಮತ್ತು ತನಿಖೆಯನ್ನು ಏಕೆ ಘೋಷಿಸಲಿಲ್ಲ?” ಎಂದು ಸುರ್ಜೆವಾಲಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಮೌಲ್ಯದ ಸವೆತದ ಹೊರತಾಗಿಯೂ #LIC, SBI ಲೈಫ್, SBI ಉದ್ಯೋಗಿಗಳ ಪಿಂಚಣಿ ನಿಧಿಯನ್ನು #AdaniFPO ನಲ್ಲಿ ₹525 ಕೋಟಿ ಹಣ ಹೂಡಿಕೆ ಮಾಡಲು ಮೋದಿ ಸರ್ಕಾರ ಏಕೆ ಅವಕಾಶ ಮಾಡಿಕೊಟ್ಟಿತು? ಜನವರಿ 24 ರಿಂದ ₹1,48,505 CR ನ LIC ಮತ್ತು SBI ನ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...