Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ ಕಳೆದಿವೆ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗಿಲ್ಲ, ಇದಕ್ಕೆ ನಿಧಾನಗತಿಯ ವಿಚಾರಣೆಯೇ ಕಾರಣವಾಗಿದೆ. ಹಾಗಾಗಿ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲುಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕು ಎಂದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಈ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು?’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್‌ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಚಿಂತಕ, ವಿಚಾರಾವಾದಿ, ಹಿರಿಯ ಪತ್ರಕರ್ತ ಶಿವಸುಂದರ್ ಅವರು, ”ಸಧ್ಯ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ತುಂಬಾ ವಿಳಂಬವಾಗುತ್ತದೆ. ಏಕೆಂದರೆ, 2022ರ ಜುಲೈನಲ್ಲಿ ವಿಚಾರಣೆ ಆರಂಭವಾಗಿದ್ದು, 2023ರ ಅಗಷ್ಟ್ ವರೆಗೆ ಅಂದರೆ ಒಂದು ವರ್ಷದ ಅವಧಿಯಲ್ಲಿ ಕೇವಲ 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆದರೆ, ಚಾರ್ಜ್‌ಶೀಟ್‌ನಲ್ಲಿ 500 ಸಾಕ್ಷಿ ಹಾಗೂ ಪುರಾವೆಗಳಿದ್ದು, ಅವುಗಳಲ್ಲಿ 200 ಸಾಕ್ಷಿಗಳನ್ನು ಕೈಬಿಡಲಾಗಿದೆ. ಉಳಿದ 300 ಸಾಕ್ಷಿ ವಿಚಾರಣೆ ಪೂರ್ಣಗೊಳ್ಳಬೇಕಾದರೆ ಸುಮಾರು 3-4 ವರ್ಷ ಸಮಯ ತಗೆದುಕೊಳ್ಳುತ್ತದೆ. ಈಗಾಗಲೇ 6 ವರ್ಷ ಕಳೆದುಹೋಗಿದೆ” ಎಂದರು.

”ಒಂದು ಪ್ರಕರಣಕ್ಕೆ ನ್ಯಾಯ ಸಿಗಲು 10 ವರ್ಷಗಳು ಬೇಕಾ? ಎನ್ನುವ ಪ್ರಶ್ನೆ ಮೂಡುತ್ತದೆ. ಸಾಕ್ಷಿಗಳ ವಿಚಾರಣೆ ಇಷ್ಟೊಂದು ನಿಧಾನಗತಿಯಲ್ಲಿ ಸಾಗಿದರೆ ಅದರಿಂದ ನ್ಯಾಯಕ್ಕೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಆರೋಪಿಗಳಿಗೂ ತೊಂದರೆ ಉಂಟಾಗುತ್ತದೆ. ಮಹಜರು ಮಾಡಿದ ಸಾಕ್ಷ್ಯದ ಗುಣಮಟ್ಟ ಕಳೆದುಹೋಗುತ್ತದೆ. ನ್ಯಾಯಬದ್ಧ ವಿಚಾರಣೆಯೂ ಸಾಧ್ಯವಾಗುವುದಿಲ್ಲ. ವಿಚಾರಣೆಯೇ ನಡೆಯದೆ ಆರೋಪಿಗಳು ಜೈಲಿನಲ್ಲಿ ಇರುವುದು ಸರಿಯಲ್ಲ. ಆರೋಪಿಗಳ ವಿಚಾರಣೆ ಬೇಗ ನಡೆದರೆ ಅಪರಾಧಿಗಳಿಗೆ ಶಿಕ್ಷೆಯಾಗಿ ನಿರಪರಾಧಿಗಳು ಹೊರಬರುತ್ತಾರೆ. ಹಾಗಾಗಿ ಎರಡೂ ದೃಷ್ಟಿಕೋನದಿಂದ ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಲಯದ ಅಗತ್ಯವಿದೆ” ಎಂದು ಶಿವಸುಂದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

ಪ್ರಕರಣದ ವಿಚಾರಣೆ:

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್‌ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...