Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ ಕಳೆದಿವೆ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗಿಲ್ಲ, ಇದಕ್ಕೆ ನಿಧಾನಗತಿಯ ವಿಚಾರಣೆಯೇ ಕಾರಣವಾಗಿದೆ. ಹಾಗಾಗಿ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲುಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕು ಎಂದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಈ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು?’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್‌ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಚಿಂತಕ, ವಿಚಾರಾವಾದಿ, ಹಿರಿಯ ಪತ್ರಕರ್ತ ಶಿವಸುಂದರ್ ಅವರು, ”ಸಧ್ಯ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ತುಂಬಾ ವಿಳಂಬವಾಗುತ್ತದೆ. ಏಕೆಂದರೆ, 2022ರ ಜುಲೈನಲ್ಲಿ ವಿಚಾರಣೆ ಆರಂಭವಾಗಿದ್ದು, 2023ರ ಅಗಷ್ಟ್ ವರೆಗೆ ಅಂದರೆ ಒಂದು ವರ್ಷದ ಅವಧಿಯಲ್ಲಿ ಕೇವಲ 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆದರೆ, ಚಾರ್ಜ್‌ಶೀಟ್‌ನಲ್ಲಿ 500 ಸಾಕ್ಷಿ ಹಾಗೂ ಪುರಾವೆಗಳಿದ್ದು, ಅವುಗಳಲ್ಲಿ 200 ಸಾಕ್ಷಿಗಳನ್ನು ಕೈಬಿಡಲಾಗಿದೆ. ಉಳಿದ 300 ಸಾಕ್ಷಿ ವಿಚಾರಣೆ ಪೂರ್ಣಗೊಳ್ಳಬೇಕಾದರೆ ಸುಮಾರು 3-4 ವರ್ಷ ಸಮಯ ತಗೆದುಕೊಳ್ಳುತ್ತದೆ. ಈಗಾಗಲೇ 6 ವರ್ಷ ಕಳೆದುಹೋಗಿದೆ” ಎಂದರು.

”ಒಂದು ಪ್ರಕರಣಕ್ಕೆ ನ್ಯಾಯ ಸಿಗಲು 10 ವರ್ಷಗಳು ಬೇಕಾ? ಎನ್ನುವ ಪ್ರಶ್ನೆ ಮೂಡುತ್ತದೆ. ಸಾಕ್ಷಿಗಳ ವಿಚಾರಣೆ ಇಷ್ಟೊಂದು ನಿಧಾನಗತಿಯಲ್ಲಿ ಸಾಗಿದರೆ ಅದರಿಂದ ನ್ಯಾಯಕ್ಕೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಆರೋಪಿಗಳಿಗೂ ತೊಂದರೆ ಉಂಟಾಗುತ್ತದೆ. ಮಹಜರು ಮಾಡಿದ ಸಾಕ್ಷ್ಯದ ಗುಣಮಟ್ಟ ಕಳೆದುಹೋಗುತ್ತದೆ. ನ್ಯಾಯಬದ್ಧ ವಿಚಾರಣೆಯೂ ಸಾಧ್ಯವಾಗುವುದಿಲ್ಲ. ವಿಚಾರಣೆಯೇ ನಡೆಯದೆ ಆರೋಪಿಗಳು ಜೈಲಿನಲ್ಲಿ ಇರುವುದು ಸರಿಯಲ್ಲ. ಆರೋಪಿಗಳ ವಿಚಾರಣೆ ಬೇಗ ನಡೆದರೆ ಅಪರಾಧಿಗಳಿಗೆ ಶಿಕ್ಷೆಯಾಗಿ ನಿರಪರಾಧಿಗಳು ಹೊರಬರುತ್ತಾರೆ. ಹಾಗಾಗಿ ಎರಡೂ ದೃಷ್ಟಿಕೋನದಿಂದ ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಲಯದ ಅಗತ್ಯವಿದೆ” ಎಂದು ಶಿವಸುಂದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

ಪ್ರಕರಣದ ವಿಚಾರಣೆ:

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್‌ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...