Homeಕರ್ನಾಟಕಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

- Advertisement -
- Advertisement -

ಶುಶ್ರೂಷಾಧಿಕಾರಿಗಳಿಗೆ ಮೂಲವೇತನ ನೀಡಿದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹ ದಿನದಂದೇ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಬೆಂಗಳೂರಿನಲ್ಲಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಸಂಘದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಮಾಡಲಾಗುವುದು ಎಂದು ತಿಳಿಸಿದ್ದರು. ಸಚಿವರ ಆಶ್ವಾಸನೆಯಂತೆ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆದಿರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗಧಿಪಡಿಸಬೇಕು. ಕನಿಷ್ಠ ಪಕ್ಷ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ವೈದ್ಯಾಧಿಕಾರಿಗಳಿರುವ ಮೂಲ ವೇತನ ಮಾದರಿಯಂತೆ ವೇತನ ನಿಗದಿ ಪಡಿಸಬೇಕು. ಮುಂಬರುವ ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮಿತಿ ಸಡಲಿಕೆಯನ್ನು ನೀಡಬೇಕು ಹಾಗು ಸೇವೆಯನ್ನು ಖಾಯಂ ಮಾಡಿ ಉದ್ಯೋಗ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗುತ್ತಿಗೆ ವೈದ್ಯಾಧಿಕಾರಿಗಳಿಗೆ 30 ಕೃಪಾಂಕ ನೀಡಿದಂತೆ, ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ವರ್ಷಕ್ಕೆ 3 ಕೃಪಾಂಕಗಳಂತೆ ಗರಿಷ್ಠ 30 ಕೃಪಾಂಕ ನೀಡಬೇಕು. ಎರಡು ವರ್ಷಗಳಿಂದ ಹಲವು ಸಭೆಗಳೆನ್ನೂ ನಡೆಸುತ್ತಿದ್ದರೂ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕುರಿತಂತೆ ಯಾವುದೇ ನೀತಿ ರೂಪಿಸಿಲ್ಲ. ತಕ್ಷಣ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು. ಗುತ್ತಿಗೆ ಶುಶ್ರೂಷಾಧಿಕಾರಿಗಳ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಲು ಆದೇಶ ಹೊರಡಿಸಿದರೂ ಜಾರಿಗೆ ಬರಲಿಲ್ಲ. ತಕ್ಷಣ ಆದೇಶವನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದ್ದಾರೆ.

ಮಾರ್ಚ್‌ 10ರಂದು ನಡೆಯುವ ಮಹತ್ವದ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರೇ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್‌ 12ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಚಳವಳಿ ಮಾಡಿ, ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇವೆ ಎಂದು ರಾಧಾ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....