Homeಕರ್ನಾಟಕಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

- Advertisement -
- Advertisement -

ಶುಶ್ರೂಷಾಧಿಕಾರಿಗಳಿಗೆ ಮೂಲವೇತನ ನೀಡಿದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹ ದಿನದಂದೇ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಬೆಂಗಳೂರಿನಲ್ಲಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಸಂಘದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಮಾಡಲಾಗುವುದು ಎಂದು ತಿಳಿಸಿದ್ದರು. ಸಚಿವರ ಆಶ್ವಾಸನೆಯಂತೆ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆದಿರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗಧಿಪಡಿಸಬೇಕು. ಕನಿಷ್ಠ ಪಕ್ಷ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ವೈದ್ಯಾಧಿಕಾರಿಗಳಿರುವ ಮೂಲ ವೇತನ ಮಾದರಿಯಂತೆ ವೇತನ ನಿಗದಿ ಪಡಿಸಬೇಕು. ಮುಂಬರುವ ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮಿತಿ ಸಡಲಿಕೆಯನ್ನು ನೀಡಬೇಕು ಹಾಗು ಸೇವೆಯನ್ನು ಖಾಯಂ ಮಾಡಿ ಉದ್ಯೋಗ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗುತ್ತಿಗೆ ವೈದ್ಯಾಧಿಕಾರಿಗಳಿಗೆ 30 ಕೃಪಾಂಕ ನೀಡಿದಂತೆ, ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ವರ್ಷಕ್ಕೆ 3 ಕೃಪಾಂಕಗಳಂತೆ ಗರಿಷ್ಠ 30 ಕೃಪಾಂಕ ನೀಡಬೇಕು. ಎರಡು ವರ್ಷಗಳಿಂದ ಹಲವು ಸಭೆಗಳೆನ್ನೂ ನಡೆಸುತ್ತಿದ್ದರೂ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕುರಿತಂತೆ ಯಾವುದೇ ನೀತಿ ರೂಪಿಸಿಲ್ಲ. ತಕ್ಷಣ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು. ಗುತ್ತಿಗೆ ಶುಶ್ರೂಷಾಧಿಕಾರಿಗಳ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಲು ಆದೇಶ ಹೊರಡಿಸಿದರೂ ಜಾರಿಗೆ ಬರಲಿಲ್ಲ. ತಕ್ಷಣ ಆದೇಶವನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದ್ದಾರೆ.

ಮಾರ್ಚ್‌ 10ರಂದು ನಡೆಯುವ ಮಹತ್ವದ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರೇ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್‌ 12ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಚಳವಳಿ ಮಾಡಿ, ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇವೆ ಎಂದು ರಾಧಾ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...