Homeಕರ್ನಾಟಕರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

ರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

- Advertisement -
- Advertisement -

“ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ” ಎಂದಿದ್ದಾರೆ.

“ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ‌ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

“ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...