Homeಕರ್ನಾಟಕರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

ರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

- Advertisement -
- Advertisement -

“ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ” ಎಂದಿದ್ದಾರೆ.

“ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ‌ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

“ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...