Homeಕರ್ನಾಟಕರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

ರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

- Advertisement -
- Advertisement -

“ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ” ಎಂದಿದ್ದಾರೆ.

“ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ‌ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

“ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...