Homeಕರ್ನಾಟಕರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

ರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

- Advertisement -
- Advertisement -

“ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ” ಎಂದಿದ್ದಾರೆ.

“ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ” ಎಂದು ತಿಳಿಸಿದ್ದಾರೆ.

“ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ‌ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.

“ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...