Homeಕರ್ನಾಟಕಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ - ಸರೋವರ್ ಬೆಂಕಿಕೆರೆ

- Advertisement -
- Advertisement -

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರಭತ್ಯೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಇಂದು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಕೊರೊನಾ ಕಾರಣದಿಂದ 2020ರ ಮಾರ್ಚ್‌ನಿಂದ ಹಾಸ್ಟೆಲ್‌ಗಳು ಮುಚ್ಚಿವೆ. ಇನ್ನು ಕೊರೊನಾ ಪ್ರಕರಣದ ಸಂಖ್ಯೆ ಹೆಚ್ಚಾದಾಗ ಹಾಸ್ಟೆಲ್‌ಗಳನ್ನೆ ಕೊರೊನಾ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳದಿದ್ದ ಕಾರಣದಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಹಾಗಾಗಿ ಅವರ ಪಾಲಿನ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಾಕಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ

ಕೊರೊನಾ ಕಾಲದಲ್ಲಿಯೂ ವಿದ್ಯಾರ್ಥಿಗಳಿಂದ ಕಾಲೇಜುಗಳು ಶುಲ್ಕ ಕಟ್ಟಿಸಿಕೊಂಡಿವೆ. ಪರೀಕ್ಷಾ ಶುಲ್ಕ ಕಟ್ಟಿಸಿ ಪರೀಕ್ಷೆ ನಡೆಸಿವೆ. ಆದರೆ ಅವರ ಪಾಲಿಗೆ ಬರಬೇಕಿದ್ದ ಆಹಾರ ಭತ್ಯೆ ನೀಡಿಲ್ಲ. ಇದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಕೆವಿಎಸ್ ದೂರಿದೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ನಾನುಗೌರಿ.ಕಾಂ ಜೊತೆ ಮಾತನಾಡಿ “ಇಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿಯಾಗಿ ನಮ್ಮ ಹಕ್ಕೊತ್ತಾಯ ಸಲ್ಲಿಸಿದ್ದೇವೆ. ಅವರು ಕನಿಷ್ಟ 5 ತಿಂಗಳ ಆಹಾರಭತ್ಯೆಯನ್ನು ನೀಡಬೇಕೆಂದು ಮತ್ತು ಈಗ ಹಾಸ್ಟೆಲ್ ಆಂರಭವಾಗಿರುವುದರಿಂದ ಮೂರು ತಿಂಗಳ ಹಣ ಬಿಡುಗಡೆ ಮಾಡಬೇಕೆಂದು ಈ ಕುರಿತು ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ” ಎಂದರು.

ಉಪನಿರ್ದೇಶಕ ನೋಡೆಲ್ ಅಧಿಕಾರಿ ಸಹ ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತರುತ್ತೇವೆ. ಲಾಕ್‌ಡೌನ್ ಸಂದರ್ಭದಲ್ಲಿ ಹಾಸ್ಟೆಲ್‌ ಅನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಕೆಲವರು ಸಾಲ ಮಾಡಿಕೊಂಡಿದ್ದಾರೆ. ಅವರಿಗೆ ಈ ಆಹಾರ ಭತ್ಯೆ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಸರೋವರ್ ತಿಳಿಸಿದ್ದಾರೆ.

ಕಲಬುರಗಿ

ಪ್ರತಿವರ್ಷವೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಜೆ ಇದ್ದ ಎರಡು ತಿಂಗಳುಗಳ ಆಹಾರ ಭತ್ಯೆಯನ್ನು ನೀಡುತ್ತಿತ್ತು. ಆದರೆ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ  ಈ ಸಮಯದಲ್ಲಿ ವಿದ್ಯಾರ್ಥಿಗಳ ಆಹಾರಕ್ಕಾಗಿ ಬಿಡುಗಡೆಯಾದ ಹಣ ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ. ವಿದ್ಯಾರ್ಥಿಗಳಿಗೆಂದೇ ಬಿಡುಗಡೆಯಾಗಿರುವ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೇ ಹಾಕಬೇಕೆಂದು ಕೆವಿಎಸ್ ಪ್ರಚಾರಾಂದೋಲನ ಆರಂಭಿಸಿದೆ.

ಬೆಂಗಳೂರಿನಲ್ಲಿ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕೆವಿಎಸ್ ಮುಖಂಡರಾದ ಮನೋಜ್, ಮಮತಾ, ಭುವನ್ ಕುಮಾರ್, ಗಜೇಂದ್ರ ಮತ್ತಿತರರು ಇದ್ದರು. ಬೆಂಗಳೂರು ಮಾತ್ರವಲ್ಲದೆ ಕಲಬುರಗಿ, ರಾಮನಗರ, ಕೊಪ್ಪಳ, ಯಲಬುರ್ಗ ಸೇರಿದಂತೆ ವಿವಿದೆಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ಕೊಪ್ಪಳ

ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್… ಇಂದಿಗೂ ನಮ್ಮ ಹಿರಿಯೂರು S/C S/T ಗೆ ಆಹಾರದ ಸರಬರಾಜು ಆಗುತ್ತಿಲ್ಲ ಎಂದು ಬೆಳಗಿನ ಆಹಾರ ವನ್ನು ಮದ್ಯಾಹ್ನ ಅದೇ ಆಹಾರ ನೀಡುತ್ತಿದ್ದಾರೆ ದಯವಿಟ್ಟು ಸಂಭಂದ ಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು … ಸಾಜಕರಣಿಗಳೇ ನಮ್ದು ಮತ ಇದೆ … ನಮ್ಮ ಕಡೆ ಸ್ವಲ್ಪ ಗಮನ ಹರಿಸಿ ಸರ್ಕಾರಕ್ಕೆ ಎಚ್ಚರಿಕೆ…?
    ವಿದ್ಯಾರ್ಥಿಗಳು ತಾಳ್ಮೆ ಇಂದ ಇದ್ದೇವೇ ಯಾಕೇ…? ಅತೀ ಬೇಗ ಪರಿಹಾರ ಕೊಡಿ….ಇಲ್ಲವಾದಲ್ಲಿ ಪರಿಣಾಮ….?
    UPPI MAHESH
    BENKI BENKIKERE

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...