Homeಕರ್ನಾಟಕಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ - ಸರೋವರ್ ಬೆಂಕಿಕೆರೆ

- Advertisement -
- Advertisement -

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರಭತ್ಯೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಇಂದು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಕೊರೊನಾ ಕಾರಣದಿಂದ 2020ರ ಮಾರ್ಚ್‌ನಿಂದ ಹಾಸ್ಟೆಲ್‌ಗಳು ಮುಚ್ಚಿವೆ. ಇನ್ನು ಕೊರೊನಾ ಪ್ರಕರಣದ ಸಂಖ್ಯೆ ಹೆಚ್ಚಾದಾಗ ಹಾಸ್ಟೆಲ್‌ಗಳನ್ನೆ ಕೊರೊನಾ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳದಿದ್ದ ಕಾರಣದಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಹಾಗಾಗಿ ಅವರ ಪಾಲಿನ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಾಕಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ

ಕೊರೊನಾ ಕಾಲದಲ್ಲಿಯೂ ವಿದ್ಯಾರ್ಥಿಗಳಿಂದ ಕಾಲೇಜುಗಳು ಶುಲ್ಕ ಕಟ್ಟಿಸಿಕೊಂಡಿವೆ. ಪರೀಕ್ಷಾ ಶುಲ್ಕ ಕಟ್ಟಿಸಿ ಪರೀಕ್ಷೆ ನಡೆಸಿವೆ. ಆದರೆ ಅವರ ಪಾಲಿಗೆ ಬರಬೇಕಿದ್ದ ಆಹಾರ ಭತ್ಯೆ ನೀಡಿಲ್ಲ. ಇದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಕೆವಿಎಸ್ ದೂರಿದೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ನಾನುಗೌರಿ.ಕಾಂ ಜೊತೆ ಮಾತನಾಡಿ “ಇಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿಯಾಗಿ ನಮ್ಮ ಹಕ್ಕೊತ್ತಾಯ ಸಲ್ಲಿಸಿದ್ದೇವೆ. ಅವರು ಕನಿಷ್ಟ 5 ತಿಂಗಳ ಆಹಾರಭತ್ಯೆಯನ್ನು ನೀಡಬೇಕೆಂದು ಮತ್ತು ಈಗ ಹಾಸ್ಟೆಲ್ ಆಂರಭವಾಗಿರುವುದರಿಂದ ಮೂರು ತಿಂಗಳ ಹಣ ಬಿಡುಗಡೆ ಮಾಡಬೇಕೆಂದು ಈ ಕುರಿತು ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ” ಎಂದರು.

ಉಪನಿರ್ದೇಶಕ ನೋಡೆಲ್ ಅಧಿಕಾರಿ ಸಹ ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತರುತ್ತೇವೆ. ಲಾಕ್‌ಡೌನ್ ಸಂದರ್ಭದಲ್ಲಿ ಹಾಸ್ಟೆಲ್‌ ಅನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಕೆಲವರು ಸಾಲ ಮಾಡಿಕೊಂಡಿದ್ದಾರೆ. ಅವರಿಗೆ ಈ ಆಹಾರ ಭತ್ಯೆ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಸರೋವರ್ ತಿಳಿಸಿದ್ದಾರೆ.

ಕಲಬುರಗಿ

ಪ್ರತಿವರ್ಷವೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಜೆ ಇದ್ದ ಎರಡು ತಿಂಗಳುಗಳ ಆಹಾರ ಭತ್ಯೆಯನ್ನು ನೀಡುತ್ತಿತ್ತು. ಆದರೆ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ  ಈ ಸಮಯದಲ್ಲಿ ವಿದ್ಯಾರ್ಥಿಗಳ ಆಹಾರಕ್ಕಾಗಿ ಬಿಡುಗಡೆಯಾದ ಹಣ ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ. ವಿದ್ಯಾರ್ಥಿಗಳಿಗೆಂದೇ ಬಿಡುಗಡೆಯಾಗಿರುವ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೇ ಹಾಕಬೇಕೆಂದು ಕೆವಿಎಸ್ ಪ್ರಚಾರಾಂದೋಲನ ಆರಂಭಿಸಿದೆ.

ಬೆಂಗಳೂರಿನಲ್ಲಿ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕೆವಿಎಸ್ ಮುಖಂಡರಾದ ಮನೋಜ್, ಮಮತಾ, ಭುವನ್ ಕುಮಾರ್, ಗಜೇಂದ್ರ ಮತ್ತಿತರರು ಇದ್ದರು. ಬೆಂಗಳೂರು ಮಾತ್ರವಲ್ಲದೆ ಕಲಬುರಗಿ, ರಾಮನಗರ, ಕೊಪ್ಪಳ, ಯಲಬುರ್ಗ ಸೇರಿದಂತೆ ವಿವಿದೆಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ಕೊಪ್ಪಳ

ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್… ಇಂದಿಗೂ ನಮ್ಮ ಹಿರಿಯೂರು S/C S/T ಗೆ ಆಹಾರದ ಸರಬರಾಜು ಆಗುತ್ತಿಲ್ಲ ಎಂದು ಬೆಳಗಿನ ಆಹಾರ ವನ್ನು ಮದ್ಯಾಹ್ನ ಅದೇ ಆಹಾರ ನೀಡುತ್ತಿದ್ದಾರೆ ದಯವಿಟ್ಟು ಸಂಭಂದ ಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು … ಸಾಜಕರಣಿಗಳೇ ನಮ್ದು ಮತ ಇದೆ … ನಮ್ಮ ಕಡೆ ಸ್ವಲ್ಪ ಗಮನ ಹರಿಸಿ ಸರ್ಕಾರಕ್ಕೆ ಎಚ್ಚರಿಕೆ…?
    ವಿದ್ಯಾರ್ಥಿಗಳು ತಾಳ್ಮೆ ಇಂದ ಇದ್ದೇವೇ ಯಾಕೇ…? ಅತೀ ಬೇಗ ಪರಿಹಾರ ಕೊಡಿ….ಇಲ್ಲವಾದಲ್ಲಿ ಪರಿಣಾಮ….?
    UPPI MAHESH
    BENKI BENKIKERE

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...