Homeಕರ್ನಾಟಕಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರ ಭತ್ಯೆ ನೀಡಿ: KVS ಒತ್ತಾಯ

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ - ಸರೋವರ್ ಬೆಂಕಿಕೆರೆ

- Advertisement -
- Advertisement -

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಲಾಕ್‌ಡೌನ್‌ ಸಂದರ್ಭದ ಆಹಾರಭತ್ಯೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಇಂದು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಕೊರೊನಾ ಕಾರಣದಿಂದ 2020ರ ಮಾರ್ಚ್‌ನಿಂದ ಹಾಸ್ಟೆಲ್‌ಗಳು ಮುಚ್ಚಿವೆ. ಇನ್ನು ಕೊರೊನಾ ಪ್ರಕರಣದ ಸಂಖ್ಯೆ ಹೆಚ್ಚಾದಾಗ ಹಾಸ್ಟೆಲ್‌ಗಳನ್ನೆ ಕೊರೊನಾ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳದಿದ್ದ ಕಾರಣದಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಹಾಗಾಗಿ ಅವರ ಪಾಲಿನ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಾಕಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ

ಕೊರೊನಾ ಕಾಲದಲ್ಲಿಯೂ ವಿದ್ಯಾರ್ಥಿಗಳಿಂದ ಕಾಲೇಜುಗಳು ಶುಲ್ಕ ಕಟ್ಟಿಸಿಕೊಂಡಿವೆ. ಪರೀಕ್ಷಾ ಶುಲ್ಕ ಕಟ್ಟಿಸಿ ಪರೀಕ್ಷೆ ನಡೆಸಿವೆ. ಆದರೆ ಅವರ ಪಾಲಿಗೆ ಬರಬೇಕಿದ್ದ ಆಹಾರ ಭತ್ಯೆ ನೀಡಿಲ್ಲ. ಇದರಿಂದ ಪೋಷಕರು ಮತ್ತು ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಕೆವಿಎಸ್ ದೂರಿದೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ನಾನುಗೌರಿ.ಕಾಂ ಜೊತೆ ಮಾತನಾಡಿ “ಇಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿಯಾಗಿ ನಮ್ಮ ಹಕ್ಕೊತ್ತಾಯ ಸಲ್ಲಿಸಿದ್ದೇವೆ. ಅವರು ಕನಿಷ್ಟ 5 ತಿಂಗಳ ಆಹಾರಭತ್ಯೆಯನ್ನು ನೀಡಬೇಕೆಂದು ಮತ್ತು ಈಗ ಹಾಸ್ಟೆಲ್ ಆಂರಭವಾಗಿರುವುದರಿಂದ ಮೂರು ತಿಂಗಳ ಹಣ ಬಿಡುಗಡೆ ಮಾಡಬೇಕೆಂದು ಈ ಕುರಿತು ರಾಜ್ಯ ಹಣಕಾಸು ಇಲಾಖೆಗೆ ಪ್ರಸ್ತಾಪ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ” ಎಂದರು.

ಉಪನಿರ್ದೇಶಕ ನೋಡೆಲ್ ಅಧಿಕಾರಿ ಸಹ ಆಹಾರ ಭತ್ಯೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾವು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತರುತ್ತೇವೆ. ಲಾಕ್‌ಡೌನ್ ಸಂದರ್ಭದಲ್ಲಿ ಹಾಸ್ಟೆಲ್‌ ಅನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಕೆಲವರು ಸಾಲ ಮಾಡಿಕೊಂಡಿದ್ದಾರೆ. ಅವರಿಗೆ ಈ ಆಹಾರ ಭತ್ಯೆ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಸರೋವರ್ ತಿಳಿಸಿದ್ದಾರೆ.

ಕಲಬುರಗಿ

ಪ್ರತಿವರ್ಷವೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಜೆ ಇದ್ದ ಎರಡು ತಿಂಗಳುಗಳ ಆಹಾರ ಭತ್ಯೆಯನ್ನು ನೀಡುತ್ತಿತ್ತು. ಆದರೆ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ  ಈ ಸಮಯದಲ್ಲಿ ವಿದ್ಯಾರ್ಥಿಗಳ ಆಹಾರಕ್ಕಾಗಿ ಬಿಡುಗಡೆಯಾದ ಹಣ ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ. ವಿದ್ಯಾರ್ಥಿಗಳಿಗೆಂದೇ ಬಿಡುಗಡೆಯಾಗಿರುವ ಆಹಾರ ಭತ್ಯೆಯನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೇ ಹಾಕಬೇಕೆಂದು ಕೆವಿಎಸ್ ಪ್ರಚಾರಾಂದೋಲನ ಆರಂಭಿಸಿದೆ.

ಬೆಂಗಳೂರಿನಲ್ಲಿ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕೆವಿಎಸ್ ಮುಖಂಡರಾದ ಮನೋಜ್, ಮಮತಾ, ಭುವನ್ ಕುಮಾರ್, ಗಜೇಂದ್ರ ಮತ್ತಿತರರು ಇದ್ದರು. ಬೆಂಗಳೂರು ಮಾತ್ರವಲ್ಲದೆ ಕಲಬುರಗಿ, ರಾಮನಗರ, ಕೊಪ್ಪಳ, ಯಲಬುರ್ಗ ಸೇರಿದಂತೆ ವಿವಿದೆಡೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ಕೊಪ್ಪಳ

ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್… ಇಂದಿಗೂ ನಮ್ಮ ಹಿರಿಯೂರು S/C S/T ಗೆ ಆಹಾರದ ಸರಬರಾಜು ಆಗುತ್ತಿಲ್ಲ ಎಂದು ಬೆಳಗಿನ ಆಹಾರ ವನ್ನು ಮದ್ಯಾಹ್ನ ಅದೇ ಆಹಾರ ನೀಡುತ್ತಿದ್ದಾರೆ ದಯವಿಟ್ಟು ಸಂಭಂದ ಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು … ಸಾಜಕರಣಿಗಳೇ ನಮ್ದು ಮತ ಇದೆ … ನಮ್ಮ ಕಡೆ ಸ್ವಲ್ಪ ಗಮನ ಹರಿಸಿ ಸರ್ಕಾರಕ್ಕೆ ಎಚ್ಚರಿಕೆ…?
    ವಿದ್ಯಾರ್ಥಿಗಳು ತಾಳ್ಮೆ ಇಂದ ಇದ್ದೇವೇ ಯಾಕೇ…? ಅತೀ ಬೇಗ ಪರಿಹಾರ ಕೊಡಿ….ಇಲ್ಲವಾದಲ್ಲಿ ಪರಿಣಾಮ….?
    UPPI MAHESH
    BENKI BENKIKERE

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...