Homeಮುಖಪುಟಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

ಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

- Advertisement -
- Advertisement -

ರೈತ ಸಂಘಗಳ ನೇತೃತ್ವದಲ್ಲಿ ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ 140ಕ್ಕೂ ಹೆಚ್ಚು ಹಳ್ಳಿಗಳ ರೈತರು ಗುರುವಾರ (ಫೆ.8) ಸಂಸತ್ತಿನತ್ತ ಪಾದಯಾತ್ರೆಯಲ್ಲಿ ಆಗಮಿಸಿದ್ದು, ಭೂಸ್ವಾಧೀನಕ್ಕೆ ಸಂಬಂಧಿಸಿದ ತಮ್ಮ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಾಲ್ಕು ಪ್ರತಿಭಟನೆಗಳು ನಡೆಯುತ್ತಿವೆ. ಜೈ ಜವಾನ್ ಜೈ ಕಿಸಾನ್ ಸಂಘಟನೆಯಿಂದ ಅನ್ಸಾಲ್ ಬಿಲ್ಡರ್‌ಗಳ ವಿರುದ್ಧ, ಅಖಿಲ ಭಾರತ ಕಿಸಾನ್ ಸಭಾದಿಂದ ಗ್ರೇಟರ್ ನೋಯ್ಡಾ ಪ್ರಾಧಿಕಾರದ ವಿರುದ್ದ, ಭಾರತೀಯ ಕಿಸಾನ್ ಪರಿಷತ್‌ನಿಂದ ನೋಯ್ಡಾ ಸೆಕ್ಟರ್ 24 ರಲ್ಲಿ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್‌ಟಿಪಿಸಿ) ಪ್ರಧಾನ ಕಚೇರಿಯಲ್ಲಿ ಮತ್ತು ಸೆಕ್ಟರ್ 6 ರಲ್ಲಿ ನೋಯ್ಡಾ ಪ್ರಾಧಿಕಾರದ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಸಂಘಟನೆಗಳು ಬುಧವಾರ ಗ್ರೇಟರ್ ನೋಯ್ಡಾ ಪ್ರಾಧಿಕಾರದ ಕಚೇರಿಯಲ್ಲಿ ಮಹಾಪಂಚಾಯತ್ ಕರೆದಿತ್ತು. ತಮ್ಮ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಒತ್ತಾಯಿಸಿ ಗುರುವಾರ ಸಂಸತ್ತಿಗೆ ಮೆರವಣಿಗೆ ನಡೆಸಲು ತೀರ್ಮಾನಿಸಿತ್ತು.

ಸಂಸತ್ತಿನತ್ತ ಆಗಮಿಸುತ್ತಿದ್ದ ರೈತರನ್ನು ನೋಯ್ಡಾದ ಮಹಾಮಾಯ ಫ್ರೈಓವರ್ ಬಳಿ ಪೊಲೀಸರು ತಡೆದಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ರೈತರ ಎರಡು ಪ್ರಮುಖ ಬೇಡಿಕೆಗಳಿವೆ. ಮೊದಲನೆಯದಾಗಿ, ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ತಮ್ಮ ಭೂಮಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ತಮ್ಮ ಕುಟುಂಬಗಳಿಗೆ ವಸತಿ ಪ್ಲಾಟ್‌ಗಳ ಶೇ10ರಷ್ಟು ಭಾಗ ನೀಡಬೇಕು ಎಂಬುವುದು.

ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ನಮ್ಮಿಂದ ಸ್ವಾಧೀನಪಡಿಸಿಕೊಂಡಿದ್ದು, ಭೂರಹಿತರನ್ನಾಗಿ ಮಾಡಿದೆ. ಸರ್ಕಾರ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಯ ಬಗ್ಗೆ ಹೆಮ್ಮೆಪಡುತ್ತಿದೆ. ಆದರೆ, ನಮ್ಮ ಕುಟುಂಬಗಳು ಮತ್ತು ಮುಂದಿನ ಪೀಳಿಗೆಗಳು ಹೇಗೆ ಬದುಕಬೇಕು? ಎಂದು ರೈತರು ಪ್ರಶ್ನಿಸಿದ್ದಾರೆ.

ಪ್ರಸ್ತುತ, ನೋಯ್ಡಾ ಪ್ರಾಧಿಕಾರವು ರೈತರಿಗೆ ಒಟ್ಟು ಸ್ವಾಧೀನಪಡಿಸಿಕೊಂಡ ಭೂಮಿಯ ಶೇ 5ರಷ್ಟು ಪರಿಹಾರ ನೀಡಿದೆ. ಅದು ಸಾಕಾಗುವುದಿಲ್ಲ ಎಂದು ರೈತರು ಹೇಳಿದ್ದಾರೆ. ಗ್ರೇಟರ್ ನೋಯ್ಡಾ ಪ್ರಾಧಿಕಾರವು ಅವರಿಗೆ ಅಭಿವೃದ್ಧಿಪಡಿಸಿದ ಪ್ಲಾಟ್‌ನಲ್ಲಿ ಶೇ. 6ರಷ್ಟು ಪಾಲು ನೀಡಬೇಕು. ಯಮುನಾ ಎಕ್ಸ್ ಪ್ರೆಸ್‌ ವೇ ಪ್ರಾಧಿಕಾರವು ಭೂ ಸ್ವಾಧೀನ ಪರಿಹಾರವಾಗಿ ಶೇ. 7ರಷ್ಟು ನೀಡಬೇಕು.

ಇವಿಷ್ಟೇ ಅಲ್ಲದೆ, ರೈತರು ಹೆಚ್ಚುವರಿ ವಿತ್ತೀಯ ಪರಿಹಾರವನ್ನು ಬಯಸುತ್ತಿದ್ದಾರೆ. ವಿವಿಧ ಯೋಜನೆಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ಮಾರುಕಟ್ಟೆ ದರಗಳ ಆಧಾರದ ಮೇಲೆ ಪರಿಹಾರ ನೀಡಬೇಕು. ಹಲವು ವರ್ಷಗಳ ಹಿಂದೆ ಅಗ್ಗದ ದರದಲ್ಲಿ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದು, ಅದರ ಪರಿಣಾಮ ಈಗಲೂ ಸಂಕಷ್ಟಕ್ಕೆ ಸಿಲುಕಿರುವುದಾಗಿ ರೈತರು ಹೇಳಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ರೈತರು ತಮ್ಮ ಕುಟುಂಬಗಳಿಗೆ ಉದ್ಯೋಗ ಮತ್ತು ವೈದ್ಯಕೀಯ ಸೌಲಭ್ಯಗಳಿಗಾಗಿ ಒತ್ತಾಯಿಸುತ್ತಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ರೈತ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶೀಘ್ರದಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...