Homeಮುಖಪುಟಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

ಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

- Advertisement -
- Advertisement -

ರೈತ ಸಂಘಗಳ ನೇತೃತ್ವದಲ್ಲಿ ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ 140ಕ್ಕೂ ಹೆಚ್ಚು ಹಳ್ಳಿಗಳ ರೈತರು ಗುರುವಾರ (ಫೆ.8) ಸಂಸತ್ತಿನತ್ತ ಪಾದಯಾತ್ರೆಯಲ್ಲಿ ಆಗಮಿಸಿದ್ದು, ಭೂಸ್ವಾಧೀನಕ್ಕೆ ಸಂಬಂಧಿಸಿದ ತಮ್ಮ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಾಲ್ಕು ಪ್ರತಿಭಟನೆಗಳು ನಡೆಯುತ್ತಿವೆ. ಜೈ ಜವಾನ್ ಜೈ ಕಿಸಾನ್ ಸಂಘಟನೆಯಿಂದ ಅನ್ಸಾಲ್ ಬಿಲ್ಡರ್‌ಗಳ ವಿರುದ್ಧ, ಅಖಿಲ ಭಾರತ ಕಿಸಾನ್ ಸಭಾದಿಂದ ಗ್ರೇಟರ್ ನೋಯ್ಡಾ ಪ್ರಾಧಿಕಾರದ ವಿರುದ್ದ, ಭಾರತೀಯ ಕಿಸಾನ್ ಪರಿಷತ್‌ನಿಂದ ನೋಯ್ಡಾ ಸೆಕ್ಟರ್ 24 ರಲ್ಲಿ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್‌ಟಿಪಿಸಿ) ಪ್ರಧಾನ ಕಚೇರಿಯಲ್ಲಿ ಮತ್ತು ಸೆಕ್ಟರ್ 6 ರಲ್ಲಿ ನೋಯ್ಡಾ ಪ್ರಾಧಿಕಾರದ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಸಂಘಟನೆಗಳು ಬುಧವಾರ ಗ್ರೇಟರ್ ನೋಯ್ಡಾ ಪ್ರಾಧಿಕಾರದ ಕಚೇರಿಯಲ್ಲಿ ಮಹಾಪಂಚಾಯತ್ ಕರೆದಿತ್ತು. ತಮ್ಮ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಒತ್ತಾಯಿಸಿ ಗುರುವಾರ ಸಂಸತ್ತಿಗೆ ಮೆರವಣಿಗೆ ನಡೆಸಲು ತೀರ್ಮಾನಿಸಿತ್ತು.

ಸಂಸತ್ತಿನತ್ತ ಆಗಮಿಸುತ್ತಿದ್ದ ರೈತರನ್ನು ನೋಯ್ಡಾದ ಮಹಾಮಾಯ ಫ್ರೈಓವರ್ ಬಳಿ ಪೊಲೀಸರು ತಡೆದಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ರೈತರ ಎರಡು ಪ್ರಮುಖ ಬೇಡಿಕೆಗಳಿವೆ. ಮೊದಲನೆಯದಾಗಿ, ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ತಮ್ಮ ಭೂಮಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ತಮ್ಮ ಕುಟುಂಬಗಳಿಗೆ ವಸತಿ ಪ್ಲಾಟ್‌ಗಳ ಶೇ10ರಷ್ಟು ಭಾಗ ನೀಡಬೇಕು ಎಂಬುವುದು.

ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ನಮ್ಮಿಂದ ಸ್ವಾಧೀನಪಡಿಸಿಕೊಂಡಿದ್ದು, ಭೂರಹಿತರನ್ನಾಗಿ ಮಾಡಿದೆ. ಸರ್ಕಾರ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಯ ಬಗ್ಗೆ ಹೆಮ್ಮೆಪಡುತ್ತಿದೆ. ಆದರೆ, ನಮ್ಮ ಕುಟುಂಬಗಳು ಮತ್ತು ಮುಂದಿನ ಪೀಳಿಗೆಗಳು ಹೇಗೆ ಬದುಕಬೇಕು? ಎಂದು ರೈತರು ಪ್ರಶ್ನಿಸಿದ್ದಾರೆ.

ಪ್ರಸ್ತುತ, ನೋಯ್ಡಾ ಪ್ರಾಧಿಕಾರವು ರೈತರಿಗೆ ಒಟ್ಟು ಸ್ವಾಧೀನಪಡಿಸಿಕೊಂಡ ಭೂಮಿಯ ಶೇ 5ರಷ್ಟು ಪರಿಹಾರ ನೀಡಿದೆ. ಅದು ಸಾಕಾಗುವುದಿಲ್ಲ ಎಂದು ರೈತರು ಹೇಳಿದ್ದಾರೆ. ಗ್ರೇಟರ್ ನೋಯ್ಡಾ ಪ್ರಾಧಿಕಾರವು ಅವರಿಗೆ ಅಭಿವೃದ್ಧಿಪಡಿಸಿದ ಪ್ಲಾಟ್‌ನಲ್ಲಿ ಶೇ. 6ರಷ್ಟು ಪಾಲು ನೀಡಬೇಕು. ಯಮುನಾ ಎಕ್ಸ್ ಪ್ರೆಸ್‌ ವೇ ಪ್ರಾಧಿಕಾರವು ಭೂ ಸ್ವಾಧೀನ ಪರಿಹಾರವಾಗಿ ಶೇ. 7ರಷ್ಟು ನೀಡಬೇಕು.

ಇವಿಷ್ಟೇ ಅಲ್ಲದೆ, ರೈತರು ಹೆಚ್ಚುವರಿ ವಿತ್ತೀಯ ಪರಿಹಾರವನ್ನು ಬಯಸುತ್ತಿದ್ದಾರೆ. ವಿವಿಧ ಯೋಜನೆಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ಮಾರುಕಟ್ಟೆ ದರಗಳ ಆಧಾರದ ಮೇಲೆ ಪರಿಹಾರ ನೀಡಬೇಕು. ಹಲವು ವರ್ಷಗಳ ಹಿಂದೆ ಅಗ್ಗದ ದರದಲ್ಲಿ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದು, ಅದರ ಪರಿಣಾಮ ಈಗಲೂ ಸಂಕಷ್ಟಕ್ಕೆ ಸಿಲುಕಿರುವುದಾಗಿ ರೈತರು ಹೇಳಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ರೈತರು ತಮ್ಮ ಕುಟುಂಬಗಳಿಗೆ ಉದ್ಯೋಗ ಮತ್ತು ವೈದ್ಯಕೀಯ ಸೌಲಭ್ಯಗಳಿಗಾಗಿ ಒತ್ತಾಯಿಸುತ್ತಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ರೈತ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶೀಘ್ರದಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...