Homeಮುಖಪುಟಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

ಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

- Advertisement -
- Advertisement -

ರೈತ ಸಂಘಗಳ ನೇತೃತ್ವದಲ್ಲಿ ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ 140ಕ್ಕೂ ಹೆಚ್ಚು ಹಳ್ಳಿಗಳ ರೈತರು ಗುರುವಾರ (ಫೆ.8) ಸಂಸತ್ತಿನತ್ತ ಪಾದಯಾತ್ರೆಯಲ್ಲಿ ಆಗಮಿಸಿದ್ದು, ಭೂಸ್ವಾಧೀನಕ್ಕೆ ಸಂಬಂಧಿಸಿದ ತಮ್ಮ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಾಲ್ಕು ಪ್ರತಿಭಟನೆಗಳು ನಡೆಯುತ್ತಿವೆ. ಜೈ ಜವಾನ್ ಜೈ ಕಿಸಾನ್ ಸಂಘಟನೆಯಿಂದ ಅನ್ಸಾಲ್ ಬಿಲ್ಡರ್‌ಗಳ ವಿರುದ್ಧ, ಅಖಿಲ ಭಾರತ ಕಿಸಾನ್ ಸಭಾದಿಂದ ಗ್ರೇಟರ್ ನೋಯ್ಡಾ ಪ್ರಾಧಿಕಾರದ ವಿರುದ್ದ, ಭಾರತೀಯ ಕಿಸಾನ್ ಪರಿಷತ್‌ನಿಂದ ನೋಯ್ಡಾ ಸೆಕ್ಟರ್ 24 ರಲ್ಲಿ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್‌ಟಿಪಿಸಿ) ಪ್ರಧಾನ ಕಚೇರಿಯಲ್ಲಿ ಮತ್ತು ಸೆಕ್ಟರ್ 6 ರಲ್ಲಿ ನೋಯ್ಡಾ ಪ್ರಾಧಿಕಾರದ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಸಂಘಟನೆಗಳು ಬುಧವಾರ ಗ್ರೇಟರ್ ನೋಯ್ಡಾ ಪ್ರಾಧಿಕಾರದ ಕಚೇರಿಯಲ್ಲಿ ಮಹಾಪಂಚಾಯತ್ ಕರೆದಿತ್ತು. ತಮ್ಮ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಒತ್ತಾಯಿಸಿ ಗುರುವಾರ ಸಂಸತ್ತಿಗೆ ಮೆರವಣಿಗೆ ನಡೆಸಲು ತೀರ್ಮಾನಿಸಿತ್ತು.

ಸಂಸತ್ತಿನತ್ತ ಆಗಮಿಸುತ್ತಿದ್ದ ರೈತರನ್ನು ನೋಯ್ಡಾದ ಮಹಾಮಾಯ ಫ್ರೈಓವರ್ ಬಳಿ ಪೊಲೀಸರು ತಡೆದಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ರೈತರ ಎರಡು ಪ್ರಮುಖ ಬೇಡಿಕೆಗಳಿವೆ. ಮೊದಲನೆಯದಾಗಿ, ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ತಮ್ಮ ಭೂಮಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ತಮ್ಮ ಕುಟುಂಬಗಳಿಗೆ ವಸತಿ ಪ್ಲಾಟ್‌ಗಳ ಶೇ10ರಷ್ಟು ಭಾಗ ನೀಡಬೇಕು ಎಂಬುವುದು.

ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ನಮ್ಮಿಂದ ಸ್ವಾಧೀನಪಡಿಸಿಕೊಂಡಿದ್ದು, ಭೂರಹಿತರನ್ನಾಗಿ ಮಾಡಿದೆ. ಸರ್ಕಾರ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಯ ಬಗ್ಗೆ ಹೆಮ್ಮೆಪಡುತ್ತಿದೆ. ಆದರೆ, ನಮ್ಮ ಕುಟುಂಬಗಳು ಮತ್ತು ಮುಂದಿನ ಪೀಳಿಗೆಗಳು ಹೇಗೆ ಬದುಕಬೇಕು? ಎಂದು ರೈತರು ಪ್ರಶ್ನಿಸಿದ್ದಾರೆ.

ಪ್ರಸ್ತುತ, ನೋಯ್ಡಾ ಪ್ರಾಧಿಕಾರವು ರೈತರಿಗೆ ಒಟ್ಟು ಸ್ವಾಧೀನಪಡಿಸಿಕೊಂಡ ಭೂಮಿಯ ಶೇ 5ರಷ್ಟು ಪರಿಹಾರ ನೀಡಿದೆ. ಅದು ಸಾಕಾಗುವುದಿಲ್ಲ ಎಂದು ರೈತರು ಹೇಳಿದ್ದಾರೆ. ಗ್ರೇಟರ್ ನೋಯ್ಡಾ ಪ್ರಾಧಿಕಾರವು ಅವರಿಗೆ ಅಭಿವೃದ್ಧಿಪಡಿಸಿದ ಪ್ಲಾಟ್‌ನಲ್ಲಿ ಶೇ. 6ರಷ್ಟು ಪಾಲು ನೀಡಬೇಕು. ಯಮುನಾ ಎಕ್ಸ್ ಪ್ರೆಸ್‌ ವೇ ಪ್ರಾಧಿಕಾರವು ಭೂ ಸ್ವಾಧೀನ ಪರಿಹಾರವಾಗಿ ಶೇ. 7ರಷ್ಟು ನೀಡಬೇಕು.

ಇವಿಷ್ಟೇ ಅಲ್ಲದೆ, ರೈತರು ಹೆಚ್ಚುವರಿ ವಿತ್ತೀಯ ಪರಿಹಾರವನ್ನು ಬಯಸುತ್ತಿದ್ದಾರೆ. ವಿವಿಧ ಯೋಜನೆಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ಮಾರುಕಟ್ಟೆ ದರಗಳ ಆಧಾರದ ಮೇಲೆ ಪರಿಹಾರ ನೀಡಬೇಕು. ಹಲವು ವರ್ಷಗಳ ಹಿಂದೆ ಅಗ್ಗದ ದರದಲ್ಲಿ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದು, ಅದರ ಪರಿಣಾಮ ಈಗಲೂ ಸಂಕಷ್ಟಕ್ಕೆ ಸಿಲುಕಿರುವುದಾಗಿ ರೈತರು ಹೇಳಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ರೈತರು ತಮ್ಮ ಕುಟುಂಬಗಳಿಗೆ ಉದ್ಯೋಗ ಮತ್ತು ವೈದ್ಯಕೀಯ ಸೌಲಭ್ಯಗಳಿಗಾಗಿ ಒತ್ತಾಯಿಸುತ್ತಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ರೈತ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶೀಘ್ರದಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...