Homeಮುಖಪುಟಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

ಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದು, ಸಭಾಪತಿ ಜಗದೀಪ್ ಧನ್ಖರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಸಂಸತ್ತಿನನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮೂಲಕ ಸ್ಪಷ್ಟನೆ ಪಡೆಯಲು ತೃಣಮೂಲ ಕಾಂಗ್ರೆಸ್ ಸಂಸದರು ತಮ್ಮ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

‘ಡಿಸೆಂಬರ್ 13, 2023 ರಂದು ಲೋಕಸಭೆಯಲ್ಲಿ ನಡೆದ ಆಘಾತಕಾರಿ ಘಟನೆಯ ಕುರಿತು ಗೃಹ ವ್ಯವಹಾರಗಳ ಸಚಿವರ ಹೇಳಿಕೆಗಾಗಿ ‘ಇಂಡಿಯಾ’ ಕೂಟದ ಪಕ್ಷಗಳ ಸಾಮೂಹಿಕ ಬೇಡಿಕೆಯ ಬಗ್ಗೆ ನಿಮ್ಮ ಗಮನ ಸೆಳೆಯಲು ಅವರು ಪ್ರಯತ್ನಿಸುತ್ತಿದ್ದರು. ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಬೇಡಿಕೆಯಾಗಿದೆ’ ಎಂದು ತಿಳಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಸದನದಲ್ಲಿ ಈ ವಿಷಯದ ಕುರಿತು ಮಾತನಾಡದ ಅಮಿತ್ ಶಾ, ಟಿವಿ ಚಾನೆಲ್‌ನೊಂದಿಗೆ ಮಾತನಾಡಿರುವುದನ್ನು ಖರ್ಗೆ ಆಕ್ಷೇಪಿಸಿದರು. ‘ಗೃಹ ಸಚಿವರು 13ನೇ ಡಿಸೆಂಬರ್ 2023 ರ ಘಟನೆಯ ಬಗ್ಗೆ ಮಾಧ್ಯಮ ವೇದಿಕೆಯಲ್ಲಿ ಮಾತನಾಡಬಹುದು. ಆದರೆ ಸಂಸತ್ತಿನ ಅಧಿವೇಶನ ನಡೆಯುವಾಗ ಸದನದಲ್ಲಿ ಹೇಳಿಕೆಯ ರೂಪದಲ್ಲಿ ಹೇಳಲು ನಿರಾಕರಿಸುವುದು ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 13 ರಂದು ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಜಿಗಿದರು. ಘಟನೆ ಕುರಿತು ಅಮಿತ್ ಶಾ ಹೇಳಿಕೆ ನೀಡುವಂತೆ ವಿರೋಧ ಪಕ್ಷಗಳಿಂದ ಬೇಡಿಕೆ ಇಟ್ಟು, ಆಗ್ರಹಿಸಿದವು. ಕೆಲವು ಸದಸ್ಯರು ಗೃಹ ಸಚಿವರ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ಕಲಾಪ ಆರಂಭವಾದ ಸ್ವಲ್ಪ ಹೊತ್ತಿನಲ್ಲೆ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸದನದ ಬಾವಿಗೆ ಇಳಿದರು. ಡೆರೆಕ್ ಒಬ್ರಿಯನ್ ಕೂಡ ಸಭಾಧ್ಯಕ್ಷರ ಕುರ್ಚಿಯ ಮುಂಭಾಗಕ್ಕೆ ತೆರಳಿ ಕೈ ಎತ್ತಿ ಬೇಡಿಕೆ ಇಟ್ಟರು. ಇದರಿಂದ ಕೆರಳಿದ ರಾಜ್ಯಸಭಾ ಅಧ್ಯಕ್ಷರು ಟಿಎಂಸಿ ಸಂಸದರನ್ನು ಹೆಸರಿಸಿ ಸದನದಿಂದ ಹೊರಹೋಗುವಂತೆ ಸೂಚಿಸಿದರು.
ಆಡಳಿತ ಪಕ್ಷದ ನಾಯಕ ಪಿಯೂಷ್ ಗೋಯಲ್ ಅವರು ಅಧಿವೇಶನದ ಉಳಿದ ಭಾಗಕ್ಕೆ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಒಬ್ರಿಯಾನ್ ಮೌನ ಪ್ರತಿಭಟನೆ:

ಕಳೆದ ಗುರುವಾರ ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಅಂದು ಟೀಕಿಸಿ, ಅದನದಿಂದ ಹೊರಹೋಗುವಂತೆ ಸೂಚಿಸಿದ್ದರು.

13 ಜನ ಲೋಕಸಭಾ ಸಂಸದರ ಅಮಾನತು:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ್ದಕ್ಕೆ ಕಳೆದ ಗುರುವಾರ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷದ 13 ಜನ ಸದಸ್ಯರನ್ನು ಸ್ಪೀಕರ್ ಚಳಿಗಾಲ ಅಧೀವೇಶನ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.
ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...